ಬಿಜೆಪಿಯು ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶ್ರೀರಾಮ ಎಲ್ಲರಿಗೂ ದೇವರಾಗಿದ್ದು, ದೇವರ ಹೆಸರಿನಲ್ಲಿ ಮತ ಕೇಳುತ್ತಿರುವುದು ‘ಅಸಹ್ಯಕರ ಕಾರ್ಯ’. ಪೌರತ್ವ ನೋಂದಣಿ ಕಾಯ್ದೆಯ (ಸಿಎಎ) ಕಾರಣದಿಂದ ಜನರು ಪ್ರಕ್ಷುಬ್ಧರಾಗಿದ್ದಾರೆ ಮತ್ತು ಪ್ರತಿಭಟನೆ ನಡೆಸಲು ಬಯಸಿದ್ದಾರೆ. ಆದರೆ ಅಸ್ಸಾಂನ ಬಿಜೆಪಿ ಸರ್ಕಾರವು ಜನರ ಪ್ರತಿಭಟಿಸುವ ಹಕ್ಕನ್ನೇ ಕಸಿದುಕೊಂಡಿದೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೆ ಅವರನ್ನು ಜೈಲಿಗೆ ಹಾಕಲಾಗುತ್ತಿದೆ