<p><strong>ಲಖನೌ:</strong> ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರುಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆ ಆದರು.</p>.<p>ಶನಿವಾರ ನಡೆದ ಎಸ್ಪಿ ಶಾಸಕರ ಸಭೆಯಲ್ಲಿ ಅಖಿಲೇಶ್ ಅವರನ್ನು ಎಸ್ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಕುರಿತುಉತ್ತರ ಪ್ರದೇಶ ಎಸ್ಪಿ ಅಧ್ಯಕ್ಷ ನರೇಶ್ ಉತ್ತಮ್ ಅವರು ಘೋಷಿಸಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅಖಿಲೇಶ್ ಅವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗಿರುವುದನ್ನು ಘೋಷಿಸಲಾಯಿತು.</p>.<p>ಉತ್ತರ ಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಅವರನ್ನು ನೇಮಿಸಲಾಗಿದೆ. ಮಾರ್ಚ್ 26ರಿಂದಲೇ ಅಖಿಲೇಶ್ ಅವರ ಕರ್ತವ್ಯ ಅವಧಿ ಜಾರಿಗೆ ಬಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಅಖಿಲೇಶ್ ಅವರು, ಬಿಜೆಪಿ ಸಂಸದ ಎಸ್.ಪಿ. ಬಘೆಲ್ ಎದುರು ಭಾರಿ ಅಂತರದಿಂದ ಗೆದ್ದಿದ್ದರು. ರಾಜ್ಯ ರಾಜಕಾರಣದಲ್ಲಿ ಉಳಿಯುವ ಸಲುವಾಗಿ ಆಜಂಗಡದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>‘ಅಖಿಲೇಶ್ ಅವರ ನಾಯಕತ್ವದಲ್ಲಿ ಸಮಾಜವಾದಿ ಪಕ್ಷವುಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿದೆ. ಸರ್ಕಾರದ ತಪ್ಪು ಮಾಹಿತಿ ಮತ್ತು ತಪ್ಪು ನೀತಿಗಳನ್ನು ವಿರೋಧಿಸಲಿದೆ’ ಎಂದು ನರೇಶ್ ಉತ್ತಮ್ ಹೇಳಿದರು.</p>.<p><strong>ಶಿವಪಾಲ್ ಯಾದವ್ಗೆ ಆಹ್ವಾನ ಇಲ್ಲ</strong><br />ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಎಸ್ಪಿ ಮಿತ್ರಪಕ್ಷವಾದ ಪ್ರಗತಿಶೀಲ ಸಮಾಜವಾದಿ ಪಕ್ಷ–ಲೋಹಿಯ (ಪಿಎಸ್ಪಿ–ಎಲ್) ಮುಖ್ಯಸ್ಥ, ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರು ಆರೋಪಿಸಿದ್ದಾರೆ.</p>.<p>‘ಸಭೆಯ ಕುರಿತು ನನಗೆ ಮಾಹಿತಿ ಇಲ್ಲ. ಎಸ್ಪಿ ನಾಯಕರನ್ನು ಸಂಪರ್ಕಿಸಲು ನಾನು ಪ್ರಯತ್ನಿಸಿದೆ. ಆದರೂ ನನಗೆ ಯಾವುದೇ ಮಾಹಿತಿ ದೊರಕಲಿಲ್ಲ’ ಎಂದು ಅವರು ಮಾಧ್ಯಮಗಳ ಎದುರು ಹೇಳಿದ್ದಾರೆ.</p>.<p>ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಎಸ್ಪಿ ಅಧ್ಯಕ್ಷ ನರೇಶ್ ಉತ್ತಮ್, ಶನಿವಾರ ನಡೆದ ಸಭೆಗೆ ಎಸ್ಪಿ ಶಾಸಕರನ್ನು ಮಾತ್ರ ಆಹ್ವಾನಿಸಲಾಗಿತ್ತು. ಶಿವಪಾಲ್ ಅವರು ಸ್ವಂತ ಪಕ್ಷವನ್ನು ಹೊಂದಿದ್ದಾರೆ. ಮಾರ್ಚ್ 28ರಂದು ಮತ್ತೊಂದು ಸಭೆ ಆಯೋಜಿಸಲಾಗಿದೆ. ಆ ಸಭೆಗೆ ಎಸ್ಪಿಯ ಎಲ್ಲಾ ಮಿತ್ರಪಕ್ಷಗಳನ್ನೂ ಆಹ್ವಾನಿಸಲಾಗುತ್ತದೆ. ಆಗ ಶಿವಪಾಲ್ ಅವರಿಗೂ ಆಹ್ವಾನ ಇರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರುಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆ ಆದರು.</p>.<p>ಶನಿವಾರ ನಡೆದ ಎಸ್ಪಿ ಶಾಸಕರ ಸಭೆಯಲ್ಲಿ ಅಖಿಲೇಶ್ ಅವರನ್ನು ಎಸ್ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಕುರಿತುಉತ್ತರ ಪ್ರದೇಶ ಎಸ್ಪಿ ಅಧ್ಯಕ್ಷ ನರೇಶ್ ಉತ್ತಮ್ ಅವರು ಘೋಷಿಸಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅಖಿಲೇಶ್ ಅವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗಿರುವುದನ್ನು ಘೋಷಿಸಲಾಯಿತು.</p>.<p>ಉತ್ತರ ಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಅವರನ್ನು ನೇಮಿಸಲಾಗಿದೆ. ಮಾರ್ಚ್ 26ರಿಂದಲೇ ಅಖಿಲೇಶ್ ಅವರ ಕರ್ತವ್ಯ ಅವಧಿ ಜಾರಿಗೆ ಬಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಅಖಿಲೇಶ್ ಅವರು, ಬಿಜೆಪಿ ಸಂಸದ ಎಸ್.ಪಿ. ಬಘೆಲ್ ಎದುರು ಭಾರಿ ಅಂತರದಿಂದ ಗೆದ್ದಿದ್ದರು. ರಾಜ್ಯ ರಾಜಕಾರಣದಲ್ಲಿ ಉಳಿಯುವ ಸಲುವಾಗಿ ಆಜಂಗಡದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>‘ಅಖಿಲೇಶ್ ಅವರ ನಾಯಕತ್ವದಲ್ಲಿ ಸಮಾಜವಾದಿ ಪಕ್ಷವುಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿದೆ. ಸರ್ಕಾರದ ತಪ್ಪು ಮಾಹಿತಿ ಮತ್ತು ತಪ್ಪು ನೀತಿಗಳನ್ನು ವಿರೋಧಿಸಲಿದೆ’ ಎಂದು ನರೇಶ್ ಉತ್ತಮ್ ಹೇಳಿದರು.</p>.<p><strong>ಶಿವಪಾಲ್ ಯಾದವ್ಗೆ ಆಹ್ವಾನ ಇಲ್ಲ</strong><br />ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಎಸ್ಪಿ ಮಿತ್ರಪಕ್ಷವಾದ ಪ್ರಗತಿಶೀಲ ಸಮಾಜವಾದಿ ಪಕ್ಷ–ಲೋಹಿಯ (ಪಿಎಸ್ಪಿ–ಎಲ್) ಮುಖ್ಯಸ್ಥ, ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರು ಆರೋಪಿಸಿದ್ದಾರೆ.</p>.<p>‘ಸಭೆಯ ಕುರಿತು ನನಗೆ ಮಾಹಿತಿ ಇಲ್ಲ. ಎಸ್ಪಿ ನಾಯಕರನ್ನು ಸಂಪರ್ಕಿಸಲು ನಾನು ಪ್ರಯತ್ನಿಸಿದೆ. ಆದರೂ ನನಗೆ ಯಾವುದೇ ಮಾಹಿತಿ ದೊರಕಲಿಲ್ಲ’ ಎಂದು ಅವರು ಮಾಧ್ಯಮಗಳ ಎದುರು ಹೇಳಿದ್ದಾರೆ.</p>.<p>ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಎಸ್ಪಿ ಅಧ್ಯಕ್ಷ ನರೇಶ್ ಉತ್ತಮ್, ಶನಿವಾರ ನಡೆದ ಸಭೆಗೆ ಎಸ್ಪಿ ಶಾಸಕರನ್ನು ಮಾತ್ರ ಆಹ್ವಾನಿಸಲಾಗಿತ್ತು. ಶಿವಪಾಲ್ ಅವರು ಸ್ವಂತ ಪಕ್ಷವನ್ನು ಹೊಂದಿದ್ದಾರೆ. ಮಾರ್ಚ್ 28ರಂದು ಮತ್ತೊಂದು ಸಭೆ ಆಯೋಜಿಸಲಾಗಿದೆ. ಆ ಸಭೆಗೆ ಎಸ್ಪಿಯ ಎಲ್ಲಾ ಮಿತ್ರಪಕ್ಷಗಳನ್ನೂ ಆಹ್ವಾನಿಸಲಾಗುತ್ತದೆ. ಆಗ ಶಿವಪಾಲ್ ಅವರಿಗೂ ಆಹ್ವಾನ ಇರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>