<p><strong>ಲಖನೌ:</strong> ಮುಂಬರುವ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯು ಮುಂದುವರಿಯಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪಕ್ಷವು ಹಲವು ಮೈತ್ರಿಕೂಟಗಳೊಂದಿಗೆ ಚುನಾವಣೆಗಳನ್ನು ಎದುರಿಸಿದೆ. ಆ ಅಪಾರ ಅನುಭವ ನಮಗಿದೆ. ಹಾಗಾಗಿ, ನಮ್ಮೊಂದಿಗಿನ ಮೈತ್ರಿಯಿಂದ ಮಿತ್ರಪಕ್ಷಗಳು ಪ್ರಯೋಜನ ಪಡೆಯುವಂತೆ ನೋಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ. </p><p>ನಾವು ನಮ್ಮ ಮಿತ್ರಪಕ್ಷಗಳಿಗೆ ಯಾವ ಕಾರಣಕ್ಕೂ ದ್ರೋಹ ಬಗೆಯುವುದಿಲ್ಲ. ಈಗಿರುವ ಮೈತ್ರಿಯು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. </p><p>ಮಿತ್ರಪಕ್ಷಗಳೊಂದಿಗೆ ನಡೆಸುವ ಸಭೆಯ ವೇಳೆ, ಕ್ಷೇತ್ರ ಹಂಚಿಕೆಗಿಂತ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಗಮನ ಹರಿಸುತ್ತೇವೆ. ಹಿಂದಿನ ಲೋಕಸಭಾ ಚುನಾವಣೆಯ ವೇಳೆಯೂ ನಾವು ಇದನ್ನೇ ಪಾಲಿಸಿದ್ದೆವು, ಅದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಕ್ಷೇತ್ರ ಹಂಚಿಕೆಯ ವಿಷಯದಲ್ಲಿ ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಬರುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಹಾಗಾಗಿ, ಅಖಿಲೇಶ್ ಯಾದವ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರುವ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯು ಮುಂದುವರಿಯಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪಕ್ಷವು ಹಲವು ಮೈತ್ರಿಕೂಟಗಳೊಂದಿಗೆ ಚುನಾವಣೆಗಳನ್ನು ಎದುರಿಸಿದೆ. ಆ ಅಪಾರ ಅನುಭವ ನಮಗಿದೆ. ಹಾಗಾಗಿ, ನಮ್ಮೊಂದಿಗಿನ ಮೈತ್ರಿಯಿಂದ ಮಿತ್ರಪಕ್ಷಗಳು ಪ್ರಯೋಜನ ಪಡೆಯುವಂತೆ ನೋಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ. </p><p>ನಾವು ನಮ್ಮ ಮಿತ್ರಪಕ್ಷಗಳಿಗೆ ಯಾವ ಕಾರಣಕ್ಕೂ ದ್ರೋಹ ಬಗೆಯುವುದಿಲ್ಲ. ಈಗಿರುವ ಮೈತ್ರಿಯು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. </p><p>ಮಿತ್ರಪಕ್ಷಗಳೊಂದಿಗೆ ನಡೆಸುವ ಸಭೆಯ ವೇಳೆ, ಕ್ಷೇತ್ರ ಹಂಚಿಕೆಗಿಂತ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಗಮನ ಹರಿಸುತ್ತೇವೆ. ಹಿಂದಿನ ಲೋಕಸಭಾ ಚುನಾವಣೆಯ ವೇಳೆಯೂ ನಾವು ಇದನ್ನೇ ಪಾಲಿಸಿದ್ದೆವು, ಅದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ 2027ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಕ್ಷೇತ್ರ ಹಂಚಿಕೆಯ ವಿಷಯದಲ್ಲಿ ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಬರುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಹಾಗಾಗಿ, ಅಖಿಲೇಶ್ ಯಾದವ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>