<p><strong>ನವದೆಹಲಿ: </strong>ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆದಿದ್ದಾರೆ.</p><p>ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಸಂಘರ್ಷದ ಪರಿಣಾಮವಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಇಂಧನವನ್ನು ಕಡಿಮೆ ಬಳಸುವಂತೆ ಮೋದಿ ಅವರು ಮೊನ್ನೆಯಷ್ಟೇ ಕರೆ ನೀಡಿದ್ದರು. ಅದರ ಬೆನ್ನಲ್ಲೇ, ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ ₹ 3 ಹೆಚ್ಚಿಸಲಾಗಿದೆ.</p><p>ಈ ಸಂಬಂಧ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್, ಸೈಕಲ್ ಸವಾರಿ ಮಾಡುತ್ತಿರುವ ಚಿತ್ರ ಹಂಚಿಕೊಂಡು, ‘ನೀವು ಮುನ್ನಡೆಯಲು ಬಯಸುವುದಾದರೆ, ಉಳಿದಿರುವ ಆಯ್ಕೆ ಸೈಕಲ್ ಮಾತ್ರ’ ಎಂದಿದ್ದಾರೆ. ಅಖಿಲೇಶ್ ಅವರ ಸಮಾಜವಾದಿ ಪಕ್ಷದ ಚಿಹ್ನೆಯೂ ಸೈಕಲ್. ಅದೇ ಕಾರಣಕ್ಕಾಗಿ ಅವರು ಈ ರೀತಿಯ ಪೋಸ್ಟ್ ಹಂಚಿಕೊಂಡಿದ್ದಾರೆ.</p>.<p>ಇಂಧನ ಉಳಿತಾಯಕ್ಕೆ ಮೋದಿ ಅವರು ನೀಡಿರುವ ಕರೆಗೆ ಓಗೊಟ್ಟಿರುವ ಉತ್ತರ ಪ್ರದೇಶ ಸರ್ಕಾರ, ಅದಕ್ಕೆ ಪೂರಕವಾಗಿ ಹಲವು ಉಪಕ್ರಮಗಳನ್ನು ಆರಂಭಿಸಿದೆ. ಹಲವು ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸೈಕಲ್, ಎಲೆಕ್ಟ್ರಿಕ್ ವಾಹನಗಳು ಅಥವಾ ಸಾರ್ವಜನಿಕ ಸಾರಿಗೆಯನ್ನೇ ಬಳಸಲಾರಂಭಿಸಿದ್ದಾರೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಬೆಂಗಾವಲು ವಾಹನಗಳನ್ನು ಶೇ 50ರಷ್ಟು ಇಳಿಸಿದ್ದಾರೆ. ಕೆಲವೆಡೆ ವರ್ಕ್ ಫ್ರಂ ಹೋಮ್ಗೆ ಅವಕಾಶ ಕಲ್ಪಿಸಿರುವುದರ ಜೊತೆಗೆ, ಸಭೆಗಳನ್ನು ವರ್ಚುವಲ್ ಆಗಿ ನಡೆಸುವಂತೆ ಆದೇಶಿಸಿದ್ದಾರೆ.</p><p>ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಮನೆಯಿಂದ ಕಚೇರಿಗೆ ಸೈಕಲ್ ತುಳಿದುಕೊಂಡೇ ಬರಲಾರಂಭಿಸಿದ್ದಾರೆ.</p><p>ಬಾರಾಬಂಕಿ ಜಿಲ್ಲಾಧಿಕಾರಿ ಇಶಾನ್ ಪ್ರತಾಪ್ ಸಿಂಗ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಕರ್ ಸಿಂಗ್ ಅವರೊಂದಿಗೆ ತಮ್ಮ ನಿವಾಸದಿಂದ ಕಚೇರಿಗೆ ನಡೆದುಕೊಂಡೇ ಹೋಗಿದ್ದಾರೆ. ವಾರಾಣಸಿ ಮೇಯರ್ ಅಶೋಕ್ ಕುಮಾರ್ ತಿವಾರಿ ಅವರೂ ಈ ವಿಧಾನವನ್ನೇ ಅನುಸರಿಸಿದ್ದಾರೆ.</p>.ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ...ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆದಿದ್ದಾರೆ.</p><p>ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಸಂಘರ್ಷದ ಪರಿಣಾಮವಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಇಂಧನವನ್ನು ಕಡಿಮೆ ಬಳಸುವಂತೆ ಮೋದಿ ಅವರು ಮೊನ್ನೆಯಷ್ಟೇ ಕರೆ ನೀಡಿದ್ದರು. ಅದರ ಬೆನ್ನಲ್ಲೇ, ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ ₹ 3 ಹೆಚ್ಚಿಸಲಾಗಿದೆ.</p><p>ಈ ಸಂಬಂಧ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್, ಸೈಕಲ್ ಸವಾರಿ ಮಾಡುತ್ತಿರುವ ಚಿತ್ರ ಹಂಚಿಕೊಂಡು, ‘ನೀವು ಮುನ್ನಡೆಯಲು ಬಯಸುವುದಾದರೆ, ಉಳಿದಿರುವ ಆಯ್ಕೆ ಸೈಕಲ್ ಮಾತ್ರ’ ಎಂದಿದ್ದಾರೆ. ಅಖಿಲೇಶ್ ಅವರ ಸಮಾಜವಾದಿ ಪಕ್ಷದ ಚಿಹ್ನೆಯೂ ಸೈಕಲ್. ಅದೇ ಕಾರಣಕ್ಕಾಗಿ ಅವರು ಈ ರೀತಿಯ ಪೋಸ್ಟ್ ಹಂಚಿಕೊಂಡಿದ್ದಾರೆ.</p>.<p>ಇಂಧನ ಉಳಿತಾಯಕ್ಕೆ ಮೋದಿ ಅವರು ನೀಡಿರುವ ಕರೆಗೆ ಓಗೊಟ್ಟಿರುವ ಉತ್ತರ ಪ್ರದೇಶ ಸರ್ಕಾರ, ಅದಕ್ಕೆ ಪೂರಕವಾಗಿ ಹಲವು ಉಪಕ್ರಮಗಳನ್ನು ಆರಂಭಿಸಿದೆ. ಹಲವು ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸೈಕಲ್, ಎಲೆಕ್ಟ್ರಿಕ್ ವಾಹನಗಳು ಅಥವಾ ಸಾರ್ವಜನಿಕ ಸಾರಿಗೆಯನ್ನೇ ಬಳಸಲಾರಂಭಿಸಿದ್ದಾರೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಬೆಂಗಾವಲು ವಾಹನಗಳನ್ನು ಶೇ 50ರಷ್ಟು ಇಳಿಸಿದ್ದಾರೆ. ಕೆಲವೆಡೆ ವರ್ಕ್ ಫ್ರಂ ಹೋಮ್ಗೆ ಅವಕಾಶ ಕಲ್ಪಿಸಿರುವುದರ ಜೊತೆಗೆ, ಸಭೆಗಳನ್ನು ವರ್ಚುವಲ್ ಆಗಿ ನಡೆಸುವಂತೆ ಆದೇಶಿಸಿದ್ದಾರೆ.</p><p>ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಮನೆಯಿಂದ ಕಚೇರಿಗೆ ಸೈಕಲ್ ತುಳಿದುಕೊಂಡೇ ಬರಲಾರಂಭಿಸಿದ್ದಾರೆ.</p><p>ಬಾರಾಬಂಕಿ ಜಿಲ್ಲಾಧಿಕಾರಿ ಇಶಾನ್ ಪ್ರತಾಪ್ ಸಿಂಗ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಕರ್ ಸಿಂಗ್ ಅವರೊಂದಿಗೆ ತಮ್ಮ ನಿವಾಸದಿಂದ ಕಚೇರಿಗೆ ನಡೆದುಕೊಂಡೇ ಹೋಗಿದ್ದಾರೆ. ವಾರಾಣಸಿ ಮೇಯರ್ ಅಶೋಕ್ ಕುಮಾರ್ ತಿವಾರಿ ಅವರೂ ಈ ವಿಧಾನವನ್ನೇ ಅನುಸರಿಸಿದ್ದಾರೆ.</p>.ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ...ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>