ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಅಪಾಯದಲ್ಲಿದೆ. ಇಲ್ಲಿ ಉಗ್ರ ಸಂಘಟನೆಯಾದ ಅಲ್ ಖೈದಾ ಬೆಳೆಯುತ್ತಿದೆ. ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಏನು ಮಾಡುತ್ತಿದೆ ಎಂದು ತಿಳಿಯಲು ಬಯಸುತ್ತೇನೆ' ಎಂದು ಹೇಳಿದ್ದಾರೆ.