<p><strong>ಚೆನ್ನೈ:</strong> ಡಿಎಂಕೆ ಉಚ್ಚಾಟಿತ ನಾಯಕ ಎಂ.ಕೆ.ಅಳಗಿರಿ ಅವರು ಬುಧವಾರ ಇಲ್ಲಿ ನಡೆಸಿದ ಬೆಂಬಲಿಗರ ರ್ಯಾಲಿ, ಯಾವುದೇ ತೀವ್ರ ವಾಗ್ದಾಳಿಗಳಿಲ್ಲದೆ ಕೊನೆಗೊಂಡಿತು. ತಮ್ಮ ಮರು ಸೇರ್ಪಡೆಗಾಗಿ ಪಕ್ಷದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ, ಈ ರ್ಯಾಲಿ ಅವರ ‘ಶಕ್ತಿ ಪ್ರದರ್ಶನ’ಕ್ಕೆ ವೇದಿಕೆಯಾಗಲಿದೆ ಎಂದೇ ನಿರೀಕ್ಷಿಸಲಾಗಿತ್ತು.</p>.<p>ರ್ಯಾಲಿಯಲ್ಲಿ ಸ್ಟಾಲಿನ್ ವಿರುದ್ಧ ಘೋಷಣೆ ಅಥವಾ ಭಾಷಣ ಮೊಳಗಲಿಲ್ಲ. ಅಳಗಿರಿಯವರಿಗೆ ಹಸ್ತಲಾಘವ ನೀಡಿದ ಕಾರಣಕ್ಕೆ ಗ್ರಾಮಾಂತರ ಮಟ್ಟದ ಮುಖಂಡ ರವಿ ಎಂಬುವವರನ್ನು ಇತ್ತೀಚೆಗೆ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಹಾಗಾಗಿ, ಡಿಎಂಕೆ ಪದಾಧಿಕಾರಿಗಳಲ್ಲಿ ಯಾರೊಬ್ಬರೂ ರ್ಯಾಲಿಯಲ್ಲಿ ಕಾಣಿಸಿಕೊಳ್ಳಲಿಲ್ಲ.</p>.<p>ಆದರೆ, ತಮ್ಮ ಬೆಂಬಲಿಗರ ಉಚ್ಚಾಟನೆಯ ಬಗ್ಗೆ ಎನಿ ಎತ್ತಿದ ಅಳಗಿರಿ, ‘ಇಲ್ಲಿ ಒಂದೂವರೆ ಲಕ್ಷದಷ್ಟು ಜನ ಸೇರಿದ್ದಾರೆ. ಅವರೆಲ್ಲರನ್ನೂ ಉಚ್ಚಾಟಿಸುವಿರಾ ಎಂದು ಅವರನ್ನು (ಡಿಎಂಕೆ) ಕೇಳಿ’ ಎಂದು ಸುದ್ದಿಗಾರರನ್ನು ಉದ್ದೇಶಿಸಿ ಹೇಳಿದರು.</p>.<p>ಕಪ್ಪು ಅಂಗಿ ಮತ್ತು ಧೋತಿ ಧರಿಸಿದ್ದ ಅಳಗಿರಿ, ತೆರೆದ ವಾಹನದಲ್ಲಿ ಸುಮಾರು 10,000 ಬೆಂಬಲಿಗರೊಂದಿಗೆ 1.5 ಕಿ.ಮೀ.ವರೆಗೆ ರ್ಯಾಲಿಯಲ್ಲಿ ಬಂದು, ಮರೀನಾ ಬೀಚ್ನಲ್ಲಿರುವ ತಮ್ಮ ತಂದೆ, ಎಂ.ಕರುಣಾನಿಧಿಯವರ ಸಮಾಧಿಗೆ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಡಿಎಂಕೆ ಉಚ್ಚಾಟಿತ ನಾಯಕ ಎಂ.ಕೆ.ಅಳಗಿರಿ ಅವರು ಬುಧವಾರ ಇಲ್ಲಿ ನಡೆಸಿದ ಬೆಂಬಲಿಗರ ರ್ಯಾಲಿ, ಯಾವುದೇ ತೀವ್ರ ವಾಗ್ದಾಳಿಗಳಿಲ್ಲದೆ ಕೊನೆಗೊಂಡಿತು. ತಮ್ಮ ಮರು ಸೇರ್ಪಡೆಗಾಗಿ ಪಕ್ಷದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ, ಈ ರ್ಯಾಲಿ ಅವರ ‘ಶಕ್ತಿ ಪ್ರದರ್ಶನ’ಕ್ಕೆ ವೇದಿಕೆಯಾಗಲಿದೆ ಎಂದೇ ನಿರೀಕ್ಷಿಸಲಾಗಿತ್ತು.</p>.<p>ರ್ಯಾಲಿಯಲ್ಲಿ ಸ್ಟಾಲಿನ್ ವಿರುದ್ಧ ಘೋಷಣೆ ಅಥವಾ ಭಾಷಣ ಮೊಳಗಲಿಲ್ಲ. ಅಳಗಿರಿಯವರಿಗೆ ಹಸ್ತಲಾಘವ ನೀಡಿದ ಕಾರಣಕ್ಕೆ ಗ್ರಾಮಾಂತರ ಮಟ್ಟದ ಮುಖಂಡ ರವಿ ಎಂಬುವವರನ್ನು ಇತ್ತೀಚೆಗೆ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಹಾಗಾಗಿ, ಡಿಎಂಕೆ ಪದಾಧಿಕಾರಿಗಳಲ್ಲಿ ಯಾರೊಬ್ಬರೂ ರ್ಯಾಲಿಯಲ್ಲಿ ಕಾಣಿಸಿಕೊಳ್ಳಲಿಲ್ಲ.</p>.<p>ಆದರೆ, ತಮ್ಮ ಬೆಂಬಲಿಗರ ಉಚ್ಚಾಟನೆಯ ಬಗ್ಗೆ ಎನಿ ಎತ್ತಿದ ಅಳಗಿರಿ, ‘ಇಲ್ಲಿ ಒಂದೂವರೆ ಲಕ್ಷದಷ್ಟು ಜನ ಸೇರಿದ್ದಾರೆ. ಅವರೆಲ್ಲರನ್ನೂ ಉಚ್ಚಾಟಿಸುವಿರಾ ಎಂದು ಅವರನ್ನು (ಡಿಎಂಕೆ) ಕೇಳಿ’ ಎಂದು ಸುದ್ದಿಗಾರರನ್ನು ಉದ್ದೇಶಿಸಿ ಹೇಳಿದರು.</p>.<p>ಕಪ್ಪು ಅಂಗಿ ಮತ್ತು ಧೋತಿ ಧರಿಸಿದ್ದ ಅಳಗಿರಿ, ತೆರೆದ ವಾಹನದಲ್ಲಿ ಸುಮಾರು 10,000 ಬೆಂಬಲಿಗರೊಂದಿಗೆ 1.5 ಕಿ.ಮೀ.ವರೆಗೆ ರ್ಯಾಲಿಯಲ್ಲಿ ಬಂದು, ಮರೀನಾ ಬೀಚ್ನಲ್ಲಿರುವ ತಮ್ಮ ತಂದೆ, ಎಂ.ಕರುಣಾನಿಧಿಯವರ ಸಮಾಧಿಗೆ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>