<p><strong>ಭಾವನಗರ(ಗುಜರಾತ್):</strong> ಲೋಕೊ ಪೈಲಟ್ಗಳ ಸಮಯಪ್ರಜ್ಞೆಯಿಂದ ಕಳೆದೆರಡು ದಿನಗಳಲ್ಲಿ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ ರೈಲು ಹಳಿ ದಾಟುತ್ತಿದ್ದ ಎಂಟು ಸಿಂಹಗಳ ಪ್ರಾಣ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದರು.</p><p>ಲೋಕೊ ಪೈಲಟ್ಗಳ ಎಚ್ಚರಿಕೆಯ ಚಾಲನೆ ಮತ್ತು ಅರಣ್ಯ ಇಲಾಖೆಯ ಟ್ರ್ಯಾಕರ್ಸ್ಗಳ ಸಹಾಯದಿಂದ ಈ ವರ್ಷ ಸುಮಾರು 104 ಸಿಂಹಗಳನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ ಎಂದು ಭಾವನಗರದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮಶೂಕ್ ಅಹ್ಮದ್ ಹೇಳಿದರು.</p><p> ಗುರುವಾರ ಹಪಾದಿಂದ ಪಿಪಾವಾವ್ ಬಂದರಿಗೆ ತೆರಳುತ್ತಿದ್ದ ಗೂಡ್ಸ್ ರೈಲನ್ನು ಚಲಾಯಿಸುತ್ತಿದ್ದ ಲೋಕೊ ಪೈಲಟ್ ಧವಲ್ಫಾಯಿ ಪಿ. ಅವರು ರಾಜುಲಾ ನಗರದ ಬಳಿ 5 ಸಿಂಹಗಳು ಹಳಿ ದಾಟುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿ, ಸಿಂಹಗಳು ಸುರಕ್ಷಿತವಾಗಿ ರೈಲು ಹಳಿಯನ್ನು ದಾಟುವಂತೆ ನೋಡಿಕೊಂಡಿದ್ದಾರೆ.</p><p>ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಿಂಹಗಳ ಸುರಕ್ಷತೆಯನ್ನು ಖಚಿತಪಡಿಸಿದ ನಂತರ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಶುಕ್ರವಾರವೂ ಇಂತಹದೇ ಪರಿಸ್ಥಿತಿ ಕಾಣಿಸಿಕೊಂಡಿದ್ದು, ಪ್ಯಾಸೆಂಜರ್ ರೈಲು ಚಲಾಯಿಸುತ್ತಿದ್ದ ಲೋಕೊ ಪೈಲಟ್ ಸುನೀಲ್ ಪಂಡಿತ್ ಅವರು, ಹೆಣ್ಣು ಸಿಂಹವೊಂದು ತನ್ನ ಎರಡು ಮರಿಗಳ ಜೊತೆ ರೈಲು ಹಳಿ ದಾಟಲು ಮುಂದಾಗುತ್ತಿದ್ದನ್ನು ಗಮನಿಸಿದ್ದಾರೆ. ತಕ್ಷಣ ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದಾರೆ.</p><p>ಉತ್ತರ ಗುಜರಾತ್ನಿಂದ ಪಿಪಾವಾವ್ ಬಂದರ್ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಏಷ್ಯಾಟಿಕ್ ಸಿಂಹಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ಗುಜರಾತ್ ಹೈಕೋರ್ಟ್, ತೀವ್ರ ಕಳವಳ ವ್ಯಕ್ತಪಡಿಸಿತ್ತು. ಸಿಂಹಗಳ ಸಾವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು.</p><p>ಇದಾದ ಬಳಿಕ ಸಿಂಹಗಳ ಸಾವನ್ನು ತಪ್ಪಿಸಲು ಈ ಮಾರ್ಗದಲ್ಲಿ ಹೆಚ್ಚಿನ ಜಾಗರೂಕತೆಯಿಂದ ರೈಲನ್ನು ಚಲಾಯಿಸುವಂತೆ ರೈಲ್ವೆ ಇಲಾಖೆಯ ಭಾವನಗರ ವಿಭಾಗ ಲೋಕೊ ಪೈಲಟ್ಗಳಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾವನಗರ(ಗುಜರಾತ್):</strong> ಲೋಕೊ ಪೈಲಟ್ಗಳ ಸಮಯಪ್ರಜ್ಞೆಯಿಂದ ಕಳೆದೆರಡು ದಿನಗಳಲ್ಲಿ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ ರೈಲು ಹಳಿ ದಾಟುತ್ತಿದ್ದ ಎಂಟು ಸಿಂಹಗಳ ಪ್ರಾಣ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದರು.</p><p>ಲೋಕೊ ಪೈಲಟ್ಗಳ ಎಚ್ಚರಿಕೆಯ ಚಾಲನೆ ಮತ್ತು ಅರಣ್ಯ ಇಲಾಖೆಯ ಟ್ರ್ಯಾಕರ್ಸ್ಗಳ ಸಹಾಯದಿಂದ ಈ ವರ್ಷ ಸುಮಾರು 104 ಸಿಂಹಗಳನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ ಎಂದು ಭಾವನಗರದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮಶೂಕ್ ಅಹ್ಮದ್ ಹೇಳಿದರು.</p><p> ಗುರುವಾರ ಹಪಾದಿಂದ ಪಿಪಾವಾವ್ ಬಂದರಿಗೆ ತೆರಳುತ್ತಿದ್ದ ಗೂಡ್ಸ್ ರೈಲನ್ನು ಚಲಾಯಿಸುತ್ತಿದ್ದ ಲೋಕೊ ಪೈಲಟ್ ಧವಲ್ಫಾಯಿ ಪಿ. ಅವರು ರಾಜುಲಾ ನಗರದ ಬಳಿ 5 ಸಿಂಹಗಳು ಹಳಿ ದಾಟುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿ, ಸಿಂಹಗಳು ಸುರಕ್ಷಿತವಾಗಿ ರೈಲು ಹಳಿಯನ್ನು ದಾಟುವಂತೆ ನೋಡಿಕೊಂಡಿದ್ದಾರೆ.</p><p>ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಿಂಹಗಳ ಸುರಕ್ಷತೆಯನ್ನು ಖಚಿತಪಡಿಸಿದ ನಂತರ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಶುಕ್ರವಾರವೂ ಇಂತಹದೇ ಪರಿಸ್ಥಿತಿ ಕಾಣಿಸಿಕೊಂಡಿದ್ದು, ಪ್ಯಾಸೆಂಜರ್ ರೈಲು ಚಲಾಯಿಸುತ್ತಿದ್ದ ಲೋಕೊ ಪೈಲಟ್ ಸುನೀಲ್ ಪಂಡಿತ್ ಅವರು, ಹೆಣ್ಣು ಸಿಂಹವೊಂದು ತನ್ನ ಎರಡು ಮರಿಗಳ ಜೊತೆ ರೈಲು ಹಳಿ ದಾಟಲು ಮುಂದಾಗುತ್ತಿದ್ದನ್ನು ಗಮನಿಸಿದ್ದಾರೆ. ತಕ್ಷಣ ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದಾರೆ.</p><p>ಉತ್ತರ ಗುಜರಾತ್ನಿಂದ ಪಿಪಾವಾವ್ ಬಂದರ್ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಏಷ್ಯಾಟಿಕ್ ಸಿಂಹಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ಗುಜರಾತ್ ಹೈಕೋರ್ಟ್, ತೀವ್ರ ಕಳವಳ ವ್ಯಕ್ತಪಡಿಸಿತ್ತು. ಸಿಂಹಗಳ ಸಾವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು.</p><p>ಇದಾದ ಬಳಿಕ ಸಿಂಹಗಳ ಸಾವನ್ನು ತಪ್ಪಿಸಲು ಈ ಮಾರ್ಗದಲ್ಲಿ ಹೆಚ್ಚಿನ ಜಾಗರೂಕತೆಯಿಂದ ರೈಲನ್ನು ಚಲಾಯಿಸುವಂತೆ ರೈಲ್ವೆ ಇಲಾಖೆಯ ಭಾವನಗರ ವಿಭಾಗ ಲೋಕೊ ಪೈಲಟ್ಗಳಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>