<p><strong>ಅಲಿಗಢ (ಉತ್ತರ ಪ್ರದೇಶ):</strong> ನೆರೆ ಮನೆಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಜರಾರ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಆರೋಪಿಯನ್ನು ಪೂರನ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಯ ಪುತ್ರಿಯು ನೆರೆಮನೆಯ ಯುವಕನನ್ನು ಪ್ರೀತಿಸುತ್ತಿದ್ದು, ಆತನನ್ನೇ ಮದುವೆಯಾಗುವುದಾಗಿ ಹೇಳಿದ್ದರು. ಯುವಕ ತಮ್ಮ ಜಾತಿಯವರೇ ಆಗಿದ್ದರೂ ಪ್ರೇಮ ವಿವಾಹಕ್ಕೆ ಪೂರನ್ ಸಿಂಗ್ ಒಪ್ಪಿರಲಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.</p>.<p>ಅಲ್ಲದೇ, ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸದಿದ್ದರೆ ವಿಷ ಕುಡಿಯುವುದಾಗಿ ಮಗಳು ಬೆದರಿಕೆ ಹಾಕಿದ್ದಳು. ಇದರಿಂದ ಕೋಪಗೊಂಡ ಪೂರನ್ ಸಿಂಗ್ ಕತ್ತು ಹಿಸುಕಿ ಆಕೆಯ ಹತ್ಯೆಗೈದು, ಹತ್ತಿರದ ಜಮೀನಿನಲ್ಲಿ ಮಗಳನ್ನು ಹೂತಿದ್ದ ಎಂದೂ ಮಾಹಿತಿ ನೀಡಿದ್ದಾರೆ. </p>.<p class="bodytext">ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೂರನ್ ಸಿಂಗ್ ಅವರ ಪತ್ನಿ ದೂರು ನೀಡಿದ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಈ ವಿಚಾರ ಬಹಿರಂಗವಾಗಿದ್ದು, ಆರೋಪಿ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ (ಉತ್ತರ ಪ್ರದೇಶ):</strong> ನೆರೆ ಮನೆಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಜರಾರ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಆರೋಪಿಯನ್ನು ಪೂರನ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಯ ಪುತ್ರಿಯು ನೆರೆಮನೆಯ ಯುವಕನನ್ನು ಪ್ರೀತಿಸುತ್ತಿದ್ದು, ಆತನನ್ನೇ ಮದುವೆಯಾಗುವುದಾಗಿ ಹೇಳಿದ್ದರು. ಯುವಕ ತಮ್ಮ ಜಾತಿಯವರೇ ಆಗಿದ್ದರೂ ಪ್ರೇಮ ವಿವಾಹಕ್ಕೆ ಪೂರನ್ ಸಿಂಗ್ ಒಪ್ಪಿರಲಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.</p>.<p>ಅಲ್ಲದೇ, ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸದಿದ್ದರೆ ವಿಷ ಕುಡಿಯುವುದಾಗಿ ಮಗಳು ಬೆದರಿಕೆ ಹಾಕಿದ್ದಳು. ಇದರಿಂದ ಕೋಪಗೊಂಡ ಪೂರನ್ ಸಿಂಗ್ ಕತ್ತು ಹಿಸುಕಿ ಆಕೆಯ ಹತ್ಯೆಗೈದು, ಹತ್ತಿರದ ಜಮೀನಿನಲ್ಲಿ ಮಗಳನ್ನು ಹೂತಿದ್ದ ಎಂದೂ ಮಾಹಿತಿ ನೀಡಿದ್ದಾರೆ. </p>.<p class="bodytext">ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೂರನ್ ಸಿಂಗ್ ಅವರ ಪತ್ನಿ ದೂರು ನೀಡಿದ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಈ ವಿಚಾರ ಬಹಿರಂಗವಾಗಿದ್ದು, ಆರೋಪಿ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>