<p><strong>ಅಲಿಗಢ:</strong> ಮದುವೆ ಊಟದಲ್ಲಿ ಗೋಮಾಂಸ ಬಡಿಸಲಾಗುತ್ತಿದೆ ಎನ್ನುವ ವಿಷಯ ಗಲಭೆಗೆ ಕಾರಣವಾಗಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ಜರುಗಿದೆ. </p><p>ಅಲಿಗಢದ ಸಿವಿಲ್ ಲೈನ್ನಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಘಟನೆ ಜರುಗಿದೆ. ಊಟದ ಕೌಂಟರ್ನಲ್ಲಿ ‘ಬೀಫ್ ಕರಿ’ ಎಂದು ಬರೆದಿರುವುದಕ್ಕೆ ಮದುವೆಗೆ ಬಂದಿದ್ದ ಇಬ್ಬರು ಅತಿಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ ಗೋಮಾಂಸ ನಿಷೇಧವಿದೆ. ಆದರೆ, ಎಮ್ಮೆ ಮಾಂಸಕ್ಕೆ ಯಾವುದೇ ನಿಷೇಧವಿಲ್ಲ. ಮದುವೆ ಮನೆಯಲ್ಲಿನ ಅಡುಗೆಯಲ್ಲಿ ಬಳಸಿರುವ ‘ಬೀಫ್ ಕರಿ’ ಯಾವುದು ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಆಹಾರ ಮತ್ತು ಔಷಧ ಆಡಳಿತ(ಎಫ್ಡಿಎ) ಅಧಿಕಾರಿಗಳು ಮಾದರಿಯನ್ನು ಸಂಗ್ರಹಿಸಿಕೊಂಡಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ರವಾನಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. </p><p>ಧಾರ್ಮಿಕ ನಂಬಿಕೆಗಳಿಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ:</strong> ಮದುವೆ ಊಟದಲ್ಲಿ ಗೋಮಾಂಸ ಬಡಿಸಲಾಗುತ್ತಿದೆ ಎನ್ನುವ ವಿಷಯ ಗಲಭೆಗೆ ಕಾರಣವಾಗಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ಜರುಗಿದೆ. </p><p>ಅಲಿಗಢದ ಸಿವಿಲ್ ಲೈನ್ನಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಘಟನೆ ಜರುಗಿದೆ. ಊಟದ ಕೌಂಟರ್ನಲ್ಲಿ ‘ಬೀಫ್ ಕರಿ’ ಎಂದು ಬರೆದಿರುವುದಕ್ಕೆ ಮದುವೆಗೆ ಬಂದಿದ್ದ ಇಬ್ಬರು ಅತಿಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ ಗೋಮಾಂಸ ನಿಷೇಧವಿದೆ. ಆದರೆ, ಎಮ್ಮೆ ಮಾಂಸಕ್ಕೆ ಯಾವುದೇ ನಿಷೇಧವಿಲ್ಲ. ಮದುವೆ ಮನೆಯಲ್ಲಿನ ಅಡುಗೆಯಲ್ಲಿ ಬಳಸಿರುವ ‘ಬೀಫ್ ಕರಿ’ ಯಾವುದು ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಆಹಾರ ಮತ್ತು ಔಷಧ ಆಡಳಿತ(ಎಫ್ಡಿಎ) ಅಧಿಕಾರಿಗಳು ಮಾದರಿಯನ್ನು ಸಂಗ್ರಹಿಸಿಕೊಂಡಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ರವಾನಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. </p><p>ಧಾರ್ಮಿಕ ನಂಬಿಕೆಗಳಿಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>