<p><strong>ಮುಂಬೈ: </strong>ಶುಕ್ರವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಮುಂಬೈ ನಗರಿ ತತ್ತರಿಸಿದೆ. ಮುಂಬೈನಿಂದ ಕೊಲ್ಲಾಪುರಕ್ಕೆ ಹೊರಟಿದ್ದ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು, ಶುಕ್ರವಾರ ರಾತ್ರಿಯಿಂದ ಠಾಣೆಯ ಬದಲಾಪುರದ ಬಳಿ ಪ್ರವಾಹದ ನೀರಿನಲ್ಲಿ ಸಿಲುಕಿತ್ತು. ರೈಲಿನಲ್ಲಿದ್ದ 1,050 ಪ್ರಯಾಣಿಕರನ್ನು ಶನಿವಾರ ಮಧ್ಯಾಹ್ನದ ವೇಳೆಗೆ ರಕ್ಷಿಸಲಾಯಿತು.</p>.<p>ಶುಕ್ರವಾರ ರಾತ್ರಿಯೇ ರೈಲು ಮುಂಬೈನಿಂದ ಹೊರಟಿತ್ತು. ಠಾಣೆ ಜಿಲ್ಲೆಯ ವಂಗಾನಿ ಪಟ್ಟಣದ ಹೊರವಲಯದಲ್ಲಿ ಪ್ರವಾಹದ ನೀರಿನಿಂದ ಹಳಿಗಳು ಜಲಾವೃತವಾಗಿತ್ತು. ರೈಲು ಆ ಸ್ಥಳದಿಂದ ಮುಂದೆ ಸಾಗುವುದು ಅಸಾಧ್ಯವಾಗಿತ್ತು. ಹೀಗಾಗಿ ರೈಲು ಅಲ್ಲೇ ನಿಂತಿತ್ತು ಎಂದು ರೈಲ್ವೆ ಮೂಲಗಳು ಹೇಳಿವೆ.</p>.<p>ತಡರಾತ್ರಿಯಲ್ಲಿ ರೈಲಿನ ಸಂಚಾರ ಸ್ಥಗಿತವಾಗಿದ್ದರೂ, ರೈಲ್ವೆಗೆ ಮಾಹಿತಿ ಲಭ್ಯವಾಗುವಾಗ ಬೆಳಗಿನ ಜಾವವಾಗಿತ್ತು. ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ (ಎನ್ಡಿಆರ್ಎಫ್) ಮಾಹಿತಿ ರವಾನೆಯಾಗಿ, ಅವರು ರಕ್ಷಣೆಗೆ ಧಾವಿಸುವಾಗ ಶನಿವಾರ ಬೆಳಿಗ್ಗೆ 9.15 ಕಳೆದಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.</p>.<p>ರೈಲು ಮಾರ್ಗದಿಂದ ಎರಡೂ ಬದಿಯಲ್ಲಿ ಸುಮಾರು 2 ಕಿ.ಮೀ.ನಷ್ಟು ದೂರದವರೆಗೂ ಪ್ರವಾಹದ ನೀರು ನಿಂತಿತ್ತು. ಹೀಗಾಗಿ ಎನ್ಡಿಆರ್ಎಫ್ ಒಂದರಿಂದಲೇ ರಕ್ಷಣಾ ಕಾರ್ಯ ಸಾಧ್ಯವಿರಲಿಲ್ಲ. ಹೀಗಾಗಿ ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನೆರವನ್ನು ಎನ್ಡಿಆರ್ಎಫ್ ಕೋರಿತು. ಈ ಎಲ್ಲಾ ಪಡೆಗಳ ಸಂಯೋಜಿತ ಕಾರ್ಯಾಚರಣೆಯಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯತು ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿವೆ.</p>.<p>ಕಾರ್ಯಾಚರಣೆಯಲ್ಲಿ ಎನ್ಡಿಆರ್ಎಫ್ನ ದೋಣಿಗಳು, ನೌಕಾಪಡೆಯ ದೋಣಿಗಳು ಮತ್ತು ಮುಳುಗುತಜ್ಞರು, ವಾಯುಪಡೆಯ ಹೆಲಿಕಾಪ್ಟರ್ಗಳು ಮತ್ತು ಭೂಸೇನೆಯ ವಾಹನಗಳನ್ನು ಬಳಸಿಕೊಳ್ಳಲಾಗಿತ್ತು.</p>.<p><strong>ರಕ್ಷಣಾ ಕಾರ್ಯಾಚರಣೆ ದೃಶ್ಯಗಳು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಶುಕ್ರವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಮುಂಬೈ ನಗರಿ ತತ್ತರಿಸಿದೆ. ಮುಂಬೈನಿಂದ ಕೊಲ್ಲಾಪುರಕ್ಕೆ ಹೊರಟಿದ್ದ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು, ಶುಕ್ರವಾರ ರಾತ್ರಿಯಿಂದ ಠಾಣೆಯ ಬದಲಾಪುರದ ಬಳಿ ಪ್ರವಾಹದ ನೀರಿನಲ್ಲಿ ಸಿಲುಕಿತ್ತು. ರೈಲಿನಲ್ಲಿದ್ದ 1,050 ಪ್ರಯಾಣಿಕರನ್ನು ಶನಿವಾರ ಮಧ್ಯಾಹ್ನದ ವೇಳೆಗೆ ರಕ್ಷಿಸಲಾಯಿತು.</p>.<p>ಶುಕ್ರವಾರ ರಾತ್ರಿಯೇ ರೈಲು ಮುಂಬೈನಿಂದ ಹೊರಟಿತ್ತು. ಠಾಣೆ ಜಿಲ್ಲೆಯ ವಂಗಾನಿ ಪಟ್ಟಣದ ಹೊರವಲಯದಲ್ಲಿ ಪ್ರವಾಹದ ನೀರಿನಿಂದ ಹಳಿಗಳು ಜಲಾವೃತವಾಗಿತ್ತು. ರೈಲು ಆ ಸ್ಥಳದಿಂದ ಮುಂದೆ ಸಾಗುವುದು ಅಸಾಧ್ಯವಾಗಿತ್ತು. ಹೀಗಾಗಿ ರೈಲು ಅಲ್ಲೇ ನಿಂತಿತ್ತು ಎಂದು ರೈಲ್ವೆ ಮೂಲಗಳು ಹೇಳಿವೆ.</p>.<p>ತಡರಾತ್ರಿಯಲ್ಲಿ ರೈಲಿನ ಸಂಚಾರ ಸ್ಥಗಿತವಾಗಿದ್ದರೂ, ರೈಲ್ವೆಗೆ ಮಾಹಿತಿ ಲಭ್ಯವಾಗುವಾಗ ಬೆಳಗಿನ ಜಾವವಾಗಿತ್ತು. ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ (ಎನ್ಡಿಆರ್ಎಫ್) ಮಾಹಿತಿ ರವಾನೆಯಾಗಿ, ಅವರು ರಕ್ಷಣೆಗೆ ಧಾವಿಸುವಾಗ ಶನಿವಾರ ಬೆಳಿಗ್ಗೆ 9.15 ಕಳೆದಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.</p>.<p>ರೈಲು ಮಾರ್ಗದಿಂದ ಎರಡೂ ಬದಿಯಲ್ಲಿ ಸುಮಾರು 2 ಕಿ.ಮೀ.ನಷ್ಟು ದೂರದವರೆಗೂ ಪ್ರವಾಹದ ನೀರು ನಿಂತಿತ್ತು. ಹೀಗಾಗಿ ಎನ್ಡಿಆರ್ಎಫ್ ಒಂದರಿಂದಲೇ ರಕ್ಷಣಾ ಕಾರ್ಯ ಸಾಧ್ಯವಿರಲಿಲ್ಲ. ಹೀಗಾಗಿ ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನೆರವನ್ನು ಎನ್ಡಿಆರ್ಎಫ್ ಕೋರಿತು. ಈ ಎಲ್ಲಾ ಪಡೆಗಳ ಸಂಯೋಜಿತ ಕಾರ್ಯಾಚರಣೆಯಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯತು ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿವೆ.</p>.<p>ಕಾರ್ಯಾಚರಣೆಯಲ್ಲಿ ಎನ್ಡಿಆರ್ಎಫ್ನ ದೋಣಿಗಳು, ನೌಕಾಪಡೆಯ ದೋಣಿಗಳು ಮತ್ತು ಮುಳುಗುತಜ್ಞರು, ವಾಯುಪಡೆಯ ಹೆಲಿಕಾಪ್ಟರ್ಗಳು ಮತ್ತು ಭೂಸೇನೆಯ ವಾಹನಗಳನ್ನು ಬಳಸಿಕೊಳ್ಳಲಾಗಿತ್ತು.</p>.<p><strong>ರಕ್ಷಣಾ ಕಾರ್ಯಾಚರಣೆ ದೃಶ್ಯಗಳು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>