ಖುಲಾಸೆಗೊಂಡವರಲ್ಲಿ ಮಾಯಾ ಕೊಡ್ನಾನಿ, ವಿಶ್ವ ಹಿಂದೂ ಪರಿಷತ್ನ ಮಾಜಿ ನಾಯಕ ಜಯದೀಪ್ ಪಟೇಲ್ ಮತ್ತು ಬಜರಂಗದಳ ಮಾಜಿ ನಾಯಕ ಬಾಬು ಬಜರಂಗಿ ಇದ್ದಾರೆ. ಪ್ರಕರಣದಲ್ಲಿ ಒಟ್ಟು 86 ಮಂದಿ ಆರೋಪಿಗಳಾಗಿದ್ದು, ಅವರಲ್ಲಿ 18 ಮಂದಿ ವಿಚಾರಣೆ ಬಾಕಿ ಇರುವಾಗಲೇ ಸಾವನ್ನಪ್ಪಿದ್ದಾರೆ. ಒಬ್ಬ ಆರೋಪಿಯನ್ನು ನ್ಯಾಯಾಲಯ ಈ ಮೊದಲೇ ಬಿಡುಗಡೆಗೊಳಿಸಿತ್ತು.