<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ಎಲ್ಲ ನೌಕರರು ಕಚೇರಿಗೆ ಬಂದು ಕಾರ್ಯನಿರ್ವಹಿಸಬೇಕು ಎಂದು ಸಿಬ್ಬಂದಿ ಸಚಿವಾಲಯ ನಿರ್ದೇಶನ ನೀಡಿದೆ.</p>.<p>ದೇಶದಲ್ಲಿ ಕೋವಿಡ್–19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಆದರೆ, ಕಂಟೈನ್ಮೆಂಟ್ ವಲಯಗಳಲ್ಲಿ ವಾಸಿಸುವ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಇವರು ಮನೆಯಿಂದಲೇ ಕಾರ್ಯನಿರ್ವಹಿಸಬೇಕು. ಕಂಟೈನ್ಮೆಂಟ್ ವಲಯ ಎನ್ನುವುದನ್ನು ತೆಗೆದುಹಾಕಿದ ನಂತರವೇ ಕಚೇರಿಗೆ ಬರಬೇಕು ಎಂದು ಸೂಚಿಸಲಾಗಿದೆ.</p>.<p>ಕಚೇರಿಯಲ್ಲಿ ದಟ್ಟಣೆಯಾಗದಂತೆ ಬೇರೆ, ಬೇರೆ ಸಮಯದಲ್ಲಿ ನೌಕರರು ಕಚೇರಿಗೆ ಹಾಜರಾಗಬೇಕು. ಈ ಬಗ್ಗೆ ಆಯಾ ಇಲಾಖೆಗಳ ಮುಖ್ಯಸ್ಥರು ನೌಕರರಿಗೆ ಸಮಯವನ್ನು ನಿಗದಿಪಡಿಸಲಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಬಯೋಮೆಟ್ರಿಕ್ ಹಾಜರಾತಿ ಸ್ಥಗಿತಗೊಳಿಸಿರುವುದನ್ನು ಮುಂದುವರಿಸಬೇಕು. ಅಧಿಕಾರಿಗಳು ಸಭೆಗಳನ್ನು ಸಾಧ್ಯವಾದಷ್ಟು ವಿಡಿಯೊ ಕಾನ್ಫೆರೆನ್ಸ್ ಮೂಲಕವೇ ನಡೆಸಲು ಪ್ರಯತ್ನಿಸಬೇಕು. ಎಲ್ಲ ಇಲಾಖೆಗಳ ಕ್ಯಾಂಟೀನ್ಗಳನ್ನು ಆರಂಭಿಸಬಹುದು ಎಂದು ತಿಳಿಸಲಾಗಿದೆ.</p>.<p>ಇದುವರೆಗೆ, ಅಧೀನ ಕಾರ್ಯದರ್ಶಿ ಮತ್ತು ಅವರಿಗಿಂತ ಹಿರಿಯ ಅಧಿಕಾರಿಗಳು ಮಾತ್ರ ಕಚೇರಿಗೆ ಬರುತ್ತಿದ್ದರು. ಮೇ ತಿಂಗಳಲ್ಲಿ ಉಪಕಾರ್ಯದರ್ಶಿಗಿಂತಗಿಂತ ಕೆಳಗಿನ ಹುದ್ದೆಯಲ್ಲಿರುವ ಶೇಕಡ 50ರಷ್ಟು ನೌಕರರು ಎರಡು ಪಾಳಿಯಲ್ಲಿ ಕಚೇರಿಗೆ ಬರಬೇಕು ಎಂದು ಸೂಚಿಸಲಾಗಿತ್ತು. ಇವರಿಗೂ ಬೇರೆ, ಬೇರೆ ಸಮಯವನ್ನು ನಿಗದಿಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ಎಲ್ಲ ನೌಕರರು ಕಚೇರಿಗೆ ಬಂದು ಕಾರ್ಯನಿರ್ವಹಿಸಬೇಕು ಎಂದು ಸಿಬ್ಬಂದಿ ಸಚಿವಾಲಯ ನಿರ್ದೇಶನ ನೀಡಿದೆ.</p>.<p>ದೇಶದಲ್ಲಿ ಕೋವಿಡ್–19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಆದರೆ, ಕಂಟೈನ್ಮೆಂಟ್ ವಲಯಗಳಲ್ಲಿ ವಾಸಿಸುವ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಇವರು ಮನೆಯಿಂದಲೇ ಕಾರ್ಯನಿರ್ವಹಿಸಬೇಕು. ಕಂಟೈನ್ಮೆಂಟ್ ವಲಯ ಎನ್ನುವುದನ್ನು ತೆಗೆದುಹಾಕಿದ ನಂತರವೇ ಕಚೇರಿಗೆ ಬರಬೇಕು ಎಂದು ಸೂಚಿಸಲಾಗಿದೆ.</p>.<p>ಕಚೇರಿಯಲ್ಲಿ ದಟ್ಟಣೆಯಾಗದಂತೆ ಬೇರೆ, ಬೇರೆ ಸಮಯದಲ್ಲಿ ನೌಕರರು ಕಚೇರಿಗೆ ಹಾಜರಾಗಬೇಕು. ಈ ಬಗ್ಗೆ ಆಯಾ ಇಲಾಖೆಗಳ ಮುಖ್ಯಸ್ಥರು ನೌಕರರಿಗೆ ಸಮಯವನ್ನು ನಿಗದಿಪಡಿಸಲಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಬಯೋಮೆಟ್ರಿಕ್ ಹಾಜರಾತಿ ಸ್ಥಗಿತಗೊಳಿಸಿರುವುದನ್ನು ಮುಂದುವರಿಸಬೇಕು. ಅಧಿಕಾರಿಗಳು ಸಭೆಗಳನ್ನು ಸಾಧ್ಯವಾದಷ್ಟು ವಿಡಿಯೊ ಕಾನ್ಫೆರೆನ್ಸ್ ಮೂಲಕವೇ ನಡೆಸಲು ಪ್ರಯತ್ನಿಸಬೇಕು. ಎಲ್ಲ ಇಲಾಖೆಗಳ ಕ್ಯಾಂಟೀನ್ಗಳನ್ನು ಆರಂಭಿಸಬಹುದು ಎಂದು ತಿಳಿಸಲಾಗಿದೆ.</p>.<p>ಇದುವರೆಗೆ, ಅಧೀನ ಕಾರ್ಯದರ್ಶಿ ಮತ್ತು ಅವರಿಗಿಂತ ಹಿರಿಯ ಅಧಿಕಾರಿಗಳು ಮಾತ್ರ ಕಚೇರಿಗೆ ಬರುತ್ತಿದ್ದರು. ಮೇ ತಿಂಗಳಲ್ಲಿ ಉಪಕಾರ್ಯದರ್ಶಿಗಿಂತಗಿಂತ ಕೆಳಗಿನ ಹುದ್ದೆಯಲ್ಲಿರುವ ಶೇಕಡ 50ರಷ್ಟು ನೌಕರರು ಎರಡು ಪಾಳಿಯಲ್ಲಿ ಕಚೇರಿಗೆ ಬರಬೇಕು ಎಂದು ಸೂಚಿಸಲಾಗಿತ್ತು. ಇವರಿಗೂ ಬೇರೆ, ಬೇರೆ ಸಮಯವನ್ನು ನಿಗದಿಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>