<p><strong>ಕೊಚ್ಚಿ</strong>: ಕಡಲ ತೀರ ನಿಯಂತ್ರಣ ವಲಯ (ಸಿಆರ್ಜೆಡ್) ಉಲ್ಲಂಘಿಸಿ ಕೇರಳದ ಕೊಚ್ಚಿಯ ಮರಡ್ನಲ್ಲಿ ನಿರ್ಮಿಸಿದ್ದ ಬಹುಮಹಡಿಯ ಐದು ಕಟ್ಟಡಗಳ ನೆಲಸಮ ಕಾರ್ಯಾಚರಣೆ ಭಾನುವಾರ ಪೂರ್ಣಗೊಂಡಿದೆ.</p>.<p>ಶನಿವಾರ ಮೂರು ಹಾಗೂ ಭಾನುವಾರ ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.</p>.<p>‘ಕಟ್ಟಡ ನೆಲಸಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದಕ್ಕಾಗಿ ಅಂದಾಜು 750 ಕಿ.ಗ್ರಾಂ. ಸ್ಫೋಟಕ ವಸ್ತುಗಳನ್ನು ಬಳಸಲಾಗಿದೆ’ ಎಂದು ಎರ್ನಾಕುಳಂ ಜಿಲ್ಲಾಧಿಕಾರಿ ಎಸ್. ಸುಹಾಸ್ ಮತ್ತು ಕೊಚ್ಚಿ ಪೊಲೀಸ್ ಆಯುಕ್ತ ವಿಜಯ್ ಸಖಾರೆ ತಿಳಿಸಿದ್ದಾರೆ.</p>.<p>ಸಿಆರ್ಜೆಡ್ ಮಾನದಂಡಗಳನ್ನು ಉಲ್ಲಂಘಿಸಿ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳನ್ನು ಧ್ವಂಸಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿ ಎಂಟು ತಿಂಗಳ ಬಳಿಕ ಈ ಕಾರ್ಯಾಚರಣೆ ನಡೆದಿದೆ.</p>.<p>ಕಟ್ಟಡಗಳನ್ನು ನೆಲಸಮಗೊಳಿಸಲು ಕೇರಳ ಸರ್ಕಾರಕ್ಕೆ ಕಳೆದ ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ 138 ದಿನಗಳ ಗಡುವು ನೀಡಿತ್ತು.</p>.<p>ಮುಂಜಾಗ್ರತಾ ಕ್ರಮವಾಗಿ ಕಟ್ಟಡದ ಬಳಿಯ ನಿವಾಸಿಗಳನ್ನು ಸ್ಥಳಾಂತರಗೊಳಿಸಿ, ಬಿಗಿ ಭದ್ರತೆಯ ನಡುವೆ ಯಶಸ್ವಿಯಾಗಿ ಸರ್ಕಾರ ಈ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ.</p>.<p>ಕಟ್ಟಡಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಎರಡು ದಿನಗಳ ಕಾಲ ಬೆಳಿಗ್ಗೆ 8ರಿಂದ ಸಂಜೆ 4ರ ವರೆಗೆ ಅಪರಾಧ ದಂಡ ಸಂಹಿತೆಯ (ಸಿಆರ್ಪಿಸಿ) 144ನೇ ಸೆಕ್ಷನ್ ಜಾರಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಕಡಲ ತೀರ ನಿಯಂತ್ರಣ ವಲಯ (ಸಿಆರ್ಜೆಡ್) ಉಲ್ಲಂಘಿಸಿ ಕೇರಳದ ಕೊಚ್ಚಿಯ ಮರಡ್ನಲ್ಲಿ ನಿರ್ಮಿಸಿದ್ದ ಬಹುಮಹಡಿಯ ಐದು ಕಟ್ಟಡಗಳ ನೆಲಸಮ ಕಾರ್ಯಾಚರಣೆ ಭಾನುವಾರ ಪೂರ್ಣಗೊಂಡಿದೆ.</p>.<p>ಶನಿವಾರ ಮೂರು ಹಾಗೂ ಭಾನುವಾರ ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.</p>.<p>‘ಕಟ್ಟಡ ನೆಲಸಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದಕ್ಕಾಗಿ ಅಂದಾಜು 750 ಕಿ.ಗ್ರಾಂ. ಸ್ಫೋಟಕ ವಸ್ತುಗಳನ್ನು ಬಳಸಲಾಗಿದೆ’ ಎಂದು ಎರ್ನಾಕುಳಂ ಜಿಲ್ಲಾಧಿಕಾರಿ ಎಸ್. ಸುಹಾಸ್ ಮತ್ತು ಕೊಚ್ಚಿ ಪೊಲೀಸ್ ಆಯುಕ್ತ ವಿಜಯ್ ಸಖಾರೆ ತಿಳಿಸಿದ್ದಾರೆ.</p>.<p>ಸಿಆರ್ಜೆಡ್ ಮಾನದಂಡಗಳನ್ನು ಉಲ್ಲಂಘಿಸಿ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳನ್ನು ಧ್ವಂಸಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿ ಎಂಟು ತಿಂಗಳ ಬಳಿಕ ಈ ಕಾರ್ಯಾಚರಣೆ ನಡೆದಿದೆ.</p>.<p>ಕಟ್ಟಡಗಳನ್ನು ನೆಲಸಮಗೊಳಿಸಲು ಕೇರಳ ಸರ್ಕಾರಕ್ಕೆ ಕಳೆದ ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ 138 ದಿನಗಳ ಗಡುವು ನೀಡಿತ್ತು.</p>.<p>ಮುಂಜಾಗ್ರತಾ ಕ್ರಮವಾಗಿ ಕಟ್ಟಡದ ಬಳಿಯ ನಿವಾಸಿಗಳನ್ನು ಸ್ಥಳಾಂತರಗೊಳಿಸಿ, ಬಿಗಿ ಭದ್ರತೆಯ ನಡುವೆ ಯಶಸ್ವಿಯಾಗಿ ಸರ್ಕಾರ ಈ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ.</p>.<p>ಕಟ್ಟಡಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಎರಡು ದಿನಗಳ ಕಾಲ ಬೆಳಿಗ್ಗೆ 8ರಿಂದ ಸಂಜೆ 4ರ ವರೆಗೆ ಅಪರಾಧ ದಂಡ ಸಂಹಿತೆಯ (ಸಿಆರ್ಪಿಸಿ) 144ನೇ ಸೆಕ್ಷನ್ ಜಾರಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>