<p><strong>ಕನ್ಯಾಕುಮಾರಿ:</strong> ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಶಿಕ್ಷಕರ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೀಡಿರುವ ಕರೆಯಂತೆ ಭಾರತ ಯಾತ್ರೆಗೆ ಮಂಗಳವಾರ ಇಲ್ಲಿ ಚಾಲನೆ ದೊರೆಯಿತು.</p><p>ಕನ್ಯಾಕುಮಾರಿ ಸಂಸದ ವಿಜಯ ವಸಂತ ಅವರು ಚಾಲನೆ ನೀಡಿದರು. ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ, ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಖಜಾಂಚಿ ಹರಿಗೋವಿಂದನ್, ತಮಿಳುನಾಡು ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ರಂಗರಾಜನ್, ಅಧ್ಯಕ್ಷ ಲಕ್ಷ್ಮೀನಾರಾಯಣ, ಪುದುಚೇರಿ ಅಧ್ಯಕ್ಷ ಸೆಂಥಿಲ್ ಪಾಲ್ಗೊಂಡಿದ್ದರು.</p><p>‘ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಕೇಂದ್ರವು ತಾನು ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಗಳಿಗೆ ಕಳುಹಿಸಬೇಕು. ಹೊಸ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದೆ. ಶಿಕ್ಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಸರ್ಕಾರವು ಈ ಕುರಿತು ತಕ್ಷಣ ಕ್ರಮ ಕೈಗೊಂಡು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು’ ಎಂದು ಬಸವರಾಜ ಗುರಿಕಾರ ಹೇಳಿದರು.</p><p>ಡಾ. ಪಿ.ನಿರಂಜನಾರಾಧ್ಯ ಮಾತನಾಡಿ, ‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಿಕ್ಷಣ ಹಾಗೂ ಶಿಕ್ಷಕರಿಗೆ ತೊಂದರೆಯಾಗಲಿದೆ. ಎನ್ಇಪಿಯಲ್ಲಿರುವ ವಿದ್ಯಾರ್ಥಿ ಹಾಗೂ ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು. ಬಜೆಟ್ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನ್ಯಾಕುಮಾರಿ:</strong> ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಶಿಕ್ಷಕರ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೀಡಿರುವ ಕರೆಯಂತೆ ಭಾರತ ಯಾತ್ರೆಗೆ ಮಂಗಳವಾರ ಇಲ್ಲಿ ಚಾಲನೆ ದೊರೆಯಿತು.</p><p>ಕನ್ಯಾಕುಮಾರಿ ಸಂಸದ ವಿಜಯ ವಸಂತ ಅವರು ಚಾಲನೆ ನೀಡಿದರು. ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ, ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಖಜಾಂಚಿ ಹರಿಗೋವಿಂದನ್, ತಮಿಳುನಾಡು ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ರಂಗರಾಜನ್, ಅಧ್ಯಕ್ಷ ಲಕ್ಷ್ಮೀನಾರಾಯಣ, ಪುದುಚೇರಿ ಅಧ್ಯಕ್ಷ ಸೆಂಥಿಲ್ ಪಾಲ್ಗೊಂಡಿದ್ದರು.</p><p>‘ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಕೇಂದ್ರವು ತಾನು ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಗಳಿಗೆ ಕಳುಹಿಸಬೇಕು. ಹೊಸ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದೆ. ಶಿಕ್ಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಸರ್ಕಾರವು ಈ ಕುರಿತು ತಕ್ಷಣ ಕ್ರಮ ಕೈಗೊಂಡು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು’ ಎಂದು ಬಸವರಾಜ ಗುರಿಕಾರ ಹೇಳಿದರು.</p><p>ಡಾ. ಪಿ.ನಿರಂಜನಾರಾಧ್ಯ ಮಾತನಾಡಿ, ‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಿಕ್ಷಣ ಹಾಗೂ ಶಿಕ್ಷಕರಿಗೆ ತೊಂದರೆಯಾಗಲಿದೆ. ಎನ್ಇಪಿಯಲ್ಲಿರುವ ವಿದ್ಯಾರ್ಥಿ ಹಾಗೂ ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು. ಬಜೆಟ್ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>