<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಹಾಗೂ ಅದರಿಂದ ದೇಶದಲ್ಲಿ ಉಂಟಾಗಿರುವ ಇಂಧನ ಪರಿಸ್ಥಿತಿಯ ಕುರಿತು ಚರ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ(ಮಾ.25) ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. </p><p>ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಸೇರಿದಂತೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ. </p><p>ಈ ಸಭೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೈರು ಹಾಜರಾಗಲಿದ್ದಾರೆ. ಆದರೆ, ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ವಿಪಕ್ಷದ ಇತರೆ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ. </p><p>ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ. ‘ನಾಳೆ(ಮಾ.25) ಕೇರಳದಲ್ಲಿ ಕಾರ್ಯಕ್ರಮವು ನಿಗದಿಯಾಗಿರುವುದರಿಂದ, ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ್ದಾರೆ. </p><p>‘ಸರ್ವಪಕ್ಷ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ. ಈ ಪರಿಸ್ಥಿತಿಯ ಕುರಿತು ಮುಕ್ತ ಚರ್ಚೆಯಾಗಬೇಕಿತ್ತು, ಆದರೆ ಸರ್ಕಾರವು ತಪ್ಪು ಮಾಡಿದೆ. ಪ್ರಧಾನಿ ಮೋದಿ ಅವರು ಭಾರತ ಮತ್ತು ರೈತರ ಹಿತಾಸಕ್ತಿಗಾಗಿ ಕೆಲಸ ಮಾಡುವುದಿಲ್ಲ. ಅವರು ಅಮೆರಿಕ ಮತ್ತು ಇಸ್ರೇಲ್ ಹೇಳಿದಂತೆ ಮಾತ್ರ ನಡೆದುಕೊಳ್ಳುತ್ತಾರೆ. ಈ ಕುರಿತು ಬೇಕಾದರೆ ಲಿಖಿತ ಹೇಳಿಕೆ ನೀಡುತ್ತೇನೆ‘ ಎಂದು ಹೇಳಿದ್ದಾರೆ. </p><p>ಯುದ್ಧದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. </p><p>ಪಶ್ಚಿಮ ಏಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಿದ ಬಳಿಕ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. </p>.<p><strong>‘ಚರ್ಚೆ ನಡೆಯದಂತೆ ತಡೆಯುವ ಯತ್ನ’</strong></p><p>ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಕುರಿತು ಮತ್ತು ಭಾರತದ ಮೇಲೆ ಬಿಕ್ಕಟ್ಟು ಬೀರುವ ಪರಿಣಾಮದ ಕುರಿತು ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರಿಗೆ ಸಭೆಯಲ್ಲಿ ಮಾಹಿತಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.</p><p>‘ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆಸಬೇಕು ಎಂಬುದು ವಿರೋಧ ಪಕ್ಷಗಳ ಆಗ್ರಹವಾಗಿದೆ. ಸಂಸತ್ತಿನಲ್ಲಿ ಚರ್ಚೆ ನಡೆಯದಂತೆ ತಡೆಯುವ ಉದ್ದೇಶದಿಂದಲೇ ಕೇಂದ್ರ ಸರ್ಕಾರವು ಸರ್ವ ಪಕ್ಷಗಳ ಸಭೆ ಕರೆದಿದೆ ಎನ್ನುವುದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಹಾಗೂ ಅದರಿಂದ ದೇಶದಲ್ಲಿ ಉಂಟಾಗಿರುವ ಇಂಧನ ಪರಿಸ್ಥಿತಿಯ ಕುರಿತು ಚರ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ(ಮಾ.25) ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. </p><p>ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಸೇರಿದಂತೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ. </p><p>ಈ ಸಭೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೈರು ಹಾಜರಾಗಲಿದ್ದಾರೆ. ಆದರೆ, ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ವಿಪಕ್ಷದ ಇತರೆ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ. </p><p>ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ. ‘ನಾಳೆ(ಮಾ.25) ಕೇರಳದಲ್ಲಿ ಕಾರ್ಯಕ್ರಮವು ನಿಗದಿಯಾಗಿರುವುದರಿಂದ, ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ್ದಾರೆ. </p><p>‘ಸರ್ವಪಕ್ಷ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ. ಈ ಪರಿಸ್ಥಿತಿಯ ಕುರಿತು ಮುಕ್ತ ಚರ್ಚೆಯಾಗಬೇಕಿತ್ತು, ಆದರೆ ಸರ್ಕಾರವು ತಪ್ಪು ಮಾಡಿದೆ. ಪ್ರಧಾನಿ ಮೋದಿ ಅವರು ಭಾರತ ಮತ್ತು ರೈತರ ಹಿತಾಸಕ್ತಿಗಾಗಿ ಕೆಲಸ ಮಾಡುವುದಿಲ್ಲ. ಅವರು ಅಮೆರಿಕ ಮತ್ತು ಇಸ್ರೇಲ್ ಹೇಳಿದಂತೆ ಮಾತ್ರ ನಡೆದುಕೊಳ್ಳುತ್ತಾರೆ. ಈ ಕುರಿತು ಬೇಕಾದರೆ ಲಿಖಿತ ಹೇಳಿಕೆ ನೀಡುತ್ತೇನೆ‘ ಎಂದು ಹೇಳಿದ್ದಾರೆ. </p><p>ಯುದ್ಧದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. </p><p>ಪಶ್ಚಿಮ ಏಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಿದ ಬಳಿಕ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. </p>.<p><strong>‘ಚರ್ಚೆ ನಡೆಯದಂತೆ ತಡೆಯುವ ಯತ್ನ’</strong></p><p>ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಕುರಿತು ಮತ್ತು ಭಾರತದ ಮೇಲೆ ಬಿಕ್ಕಟ್ಟು ಬೀರುವ ಪರಿಣಾಮದ ಕುರಿತು ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರಿಗೆ ಸಭೆಯಲ್ಲಿ ಮಾಹಿತಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.</p><p>‘ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆಸಬೇಕು ಎಂಬುದು ವಿರೋಧ ಪಕ್ಷಗಳ ಆಗ್ರಹವಾಗಿದೆ. ಸಂಸತ್ತಿನಲ್ಲಿ ಚರ್ಚೆ ನಡೆಯದಂತೆ ತಡೆಯುವ ಉದ್ದೇಶದಿಂದಲೇ ಕೇಂದ್ರ ಸರ್ಕಾರವು ಸರ್ವ ಪಕ್ಷಗಳ ಸಭೆ ಕರೆದಿದೆ ಎನ್ನುವುದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>