ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ:  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

Published 11 ಅಕ್ಟೋಬರ್ 2023, 13:42 IST
Last Updated 11 ಅಕ್ಟೋಬರ್ 2023, 13:42 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಸ್ಥಳವನ್ನು ಶ್ರೀಕೃಷ್ಣ ಜನ್ಮಭೂಮಿ ಎಂದು ಗುರುತಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಪಿ. ದಿವಾಕರ್ ಮತ್ತು ನ್ಯಾಯಧೀಶರಾದ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಶಾಹಿ ಈದ್ಗಾ ಮಸೀದಿ ಸ್ಥಳವನ್ನು ಶ್ರೀಕೃಷ್ಣ ಜನ್ಮಭೂಮಿ ಎಂದು ಗುರುತಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರ ವಕೀಲ ಮೆಹೆಕ್ ಮಹೇಶ್ವರಿ ವಿವಾದಿತ ಸ್ಥಳವಾದ ಶಾಹಿ ಈದ್ಗಾ ಮಸೀದಿ ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವಾಗಿದೆ. ಮಥುರಾದ ಇತಿಹಾಸ ರಾಮಾಯಣ ಕಾಲದ ಹಿಂದಿನದಾಗಿದೆ. ಆದರೆ ಇಸ್ಲಾಂ ಕೇವಲ 1,500 ವರ್ಷಗಳ ಹಿಂದಿನದು ಎಂದು ಐತಿಹಾಸಿಕ ದಾಖಲೆಗಳು ಹೇಳುತ್ತವೆ ಎಂದು ಅವರು ವಾದ ಮಂಡಿಸಿದ್ದರು. 

ಮಸೀದಿ ಸ್ಥಳ ಈ ಹಿಂದೆ ದೇಚಾಲಯವಾಗಿತ್ತು. ಆ ಸ್ಥಳದಲ್ಲಿ ಈಗಲೂ ದೇವಾಲಯದ ಕುರುಹುಗಳಿವೆ ಎಂದು ಮೆಹೆಕ್ ಮಹೇಶ್ವರಿ ವಾದಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT