<p><strong>ಪ್ರಯಾಗ್ ರಾಜ್ (ಉತ್ತರ ಪ್ರದೇಶ):</strong> ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ರಾಜಕೀಯ ಸಮಾವೇಶಗಳು ನಡೆಯುವುದನ್ನು ನಿಲ್ಲಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೊರೊನಾ ವೈರಸ್ನ ರೂಪಾಂತರ ತಳಿಯಾದ ಓಮೈಕ್ರಾನ್ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಹೀಗೆ ಹೇಳಿದೆ.</p>.<p>ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ಪೀಠ, ದೇಶದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಮತ್ತು ಮೂರನೇ ಅಲೆಯ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿತು.</p>.<p>ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಚೀನಾ, ನೆದರ್ಲೆಂಡ್ ಮತ್ತು ಜರ್ಮನಿಯಂಥ ದೇಶಗಳು ಸಂಪೂರ್ಣ ಅಥವಾ ಭಾಗಶಃ ಲಾಕ್ಡೌನ್ಗಳನ್ನು ವಿಧಿಸಿವೆ. ಭಾರತದಲ್ಲಿ ಎರಡನೇ ಅಲೆಯ ವೇಳೆ, ಲಕ್ಷಾಂತರ ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದನ್ನು ದೇಶ ಕಂಡಿದೆ. ಅನೇಕ ಜನರು ಈ ಕಾಯಿಲೆಗೆ ಪ್ರಾಣ ತೆತ್ತರು. ಉತ್ತರ ಪ್ರದೇಶ ಗ್ರಾಮ ಪಂಚಾಯಿತಿ ಚುನಾವಣೆಗಳು, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸೋಂಕು ಹೆಚ್ಚಳಕ್ಕೆ ಕಾರಣವಾದವು. ಹೀಗಾಗಿ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು,’ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>‘ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಎಲ್ಲಾ ರಾಜಕೀಯ ಪಕ್ಷಗಳು ಸಮಾವೇಶ, ರ್ಯಾಲಿ ನಡೆಸಿ ಜನರನ್ನು ಸಜ್ಜುಗೊಳಿಸುತ್ತಿವೆ. ಈ ಸಮಾವೇಶಗಳಲ್ಲಿ ಸಾಮಾಜಿಕ ಅಂತರವಾಗಲಿ, ಕೋವಿಡ್ ಮಾರ್ಗಸೂಚಿಗಳಾಗಲಿ ಪಾಲನೆಯಾಗುವುದೇ ಇಲ್ಲ,’ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಇದನ್ನು ಸಮಯಕ್ಕೆ ಸರಿಯಾಗಿ ತಡೆಯದೇ ಹೋದರೆ, ಸಾಂಕ್ರಾಮಿಕ ರೋಗದ ಎರಡನೇ ಅಲೆಗಿಂತಲೂ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗಬಹುದು,‘ ಎಂದು ಕೋರ್ಟ್ ಎಚ್ಚರಿಸಿತು.</p>.<p>ರ್ಯಾಲಿ, ಸಮಾವೇಶ, ಸಭೆಗಳನ್ನು ತಕ್ಷಣವೇ ನಿಲ್ಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಬೇಕು ಎಂದು ಭಾರತೀಯ ಚುನಾವಣಾ ಆಯೋಗವನ್ನು ಕೋರ್ಟ್ ವಿನಂತಿಸಿತು. ಜತೆಗೆ, ಟಿವಿ ಚಾನೆಲ್ಗಳು ಮತ್ತು ಪತ್ರಿಕೆಗಳ ಮೂಲಕ ಪ್ರಚಾರ ಮಾಡುವಂತೆ ರಾಜಕೀಯ ಪಕ್ಷಗಳಿಗೆ ನ್ಯಾಯಾಲಯ ಅದೇಶ ನೀಡಿತು.</p>.<p>ಮುಂದಿನ ವರ್ಷ ಫೆಬ್ರುವರಿಯಲ್ಲಿ ನಡೆಯಬಹುದಾದ ಚುನಾವಣೆಯನ್ನು ಸಾಧ್ಯವಾದರೆ ಒಂದೆರಡು ತಿಂಗಳು ಮುಂದೂಡಬಹುದು. ಏಕೆಂದರೆ ಜೀವ ಇದ್ದರೆ ಮಾತ್ರ ಚುನಾವಣಾ ರ್ಯಾಲಿ, ಸಭೆಗಳು ನಡೆಯುತ್ತವೆ. ಜನರಿಗೆ ಬದುಕುವ ಹಕ್ಕಿದೆ ಎಂದು ಅದು ಹೇಳಿತು.</p>.<p>ಕೋವಿಡ್-19 ಲಸಿಕೆ ಅಭಿಯಾನ ಉಲ್ಲೇಖಿಸಿದ ಕೋರ್ಟ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿತು. ಅಲ್ಲದೇ, ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಸಮಾವೇಶ, ಸಭೆಗಳನ್ನು ನಿಲ್ಲಿಸಲು ಮತ್ತು ಚುನಾವಣೆಗಳನ್ನು ಮುಂದೂಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗ್ ರಾಜ್ (ಉತ್ತರ ಪ್ರದೇಶ):</strong> ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ರಾಜಕೀಯ ಸಮಾವೇಶಗಳು ನಡೆಯುವುದನ್ನು ನಿಲ್ಲಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೊರೊನಾ ವೈರಸ್ನ ರೂಪಾಂತರ ತಳಿಯಾದ ಓಮೈಕ್ರಾನ್ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಹೀಗೆ ಹೇಳಿದೆ.</p>.<p>ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ಪೀಠ, ದೇಶದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಮತ್ತು ಮೂರನೇ ಅಲೆಯ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿತು.</p>.<p>ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಚೀನಾ, ನೆದರ್ಲೆಂಡ್ ಮತ್ತು ಜರ್ಮನಿಯಂಥ ದೇಶಗಳು ಸಂಪೂರ್ಣ ಅಥವಾ ಭಾಗಶಃ ಲಾಕ್ಡೌನ್ಗಳನ್ನು ವಿಧಿಸಿವೆ. ಭಾರತದಲ್ಲಿ ಎರಡನೇ ಅಲೆಯ ವೇಳೆ, ಲಕ್ಷಾಂತರ ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದನ್ನು ದೇಶ ಕಂಡಿದೆ. ಅನೇಕ ಜನರು ಈ ಕಾಯಿಲೆಗೆ ಪ್ರಾಣ ತೆತ್ತರು. ಉತ್ತರ ಪ್ರದೇಶ ಗ್ರಾಮ ಪಂಚಾಯಿತಿ ಚುನಾವಣೆಗಳು, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಸೋಂಕು ಹೆಚ್ಚಳಕ್ಕೆ ಕಾರಣವಾದವು. ಹೀಗಾಗಿ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು,’ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>‘ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಎಲ್ಲಾ ರಾಜಕೀಯ ಪಕ್ಷಗಳು ಸಮಾವೇಶ, ರ್ಯಾಲಿ ನಡೆಸಿ ಜನರನ್ನು ಸಜ್ಜುಗೊಳಿಸುತ್ತಿವೆ. ಈ ಸಮಾವೇಶಗಳಲ್ಲಿ ಸಾಮಾಜಿಕ ಅಂತರವಾಗಲಿ, ಕೋವಿಡ್ ಮಾರ್ಗಸೂಚಿಗಳಾಗಲಿ ಪಾಲನೆಯಾಗುವುದೇ ಇಲ್ಲ,’ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಇದನ್ನು ಸಮಯಕ್ಕೆ ಸರಿಯಾಗಿ ತಡೆಯದೇ ಹೋದರೆ, ಸಾಂಕ್ರಾಮಿಕ ರೋಗದ ಎರಡನೇ ಅಲೆಗಿಂತಲೂ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗಬಹುದು,‘ ಎಂದು ಕೋರ್ಟ್ ಎಚ್ಚರಿಸಿತು.</p>.<p>ರ್ಯಾಲಿ, ಸಮಾವೇಶ, ಸಭೆಗಳನ್ನು ತಕ್ಷಣವೇ ನಿಲ್ಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಬೇಕು ಎಂದು ಭಾರತೀಯ ಚುನಾವಣಾ ಆಯೋಗವನ್ನು ಕೋರ್ಟ್ ವಿನಂತಿಸಿತು. ಜತೆಗೆ, ಟಿವಿ ಚಾನೆಲ್ಗಳು ಮತ್ತು ಪತ್ರಿಕೆಗಳ ಮೂಲಕ ಪ್ರಚಾರ ಮಾಡುವಂತೆ ರಾಜಕೀಯ ಪಕ್ಷಗಳಿಗೆ ನ್ಯಾಯಾಲಯ ಅದೇಶ ನೀಡಿತು.</p>.<p>ಮುಂದಿನ ವರ್ಷ ಫೆಬ್ರುವರಿಯಲ್ಲಿ ನಡೆಯಬಹುದಾದ ಚುನಾವಣೆಯನ್ನು ಸಾಧ್ಯವಾದರೆ ಒಂದೆರಡು ತಿಂಗಳು ಮುಂದೂಡಬಹುದು. ಏಕೆಂದರೆ ಜೀವ ಇದ್ದರೆ ಮಾತ್ರ ಚುನಾವಣಾ ರ್ಯಾಲಿ, ಸಭೆಗಳು ನಡೆಯುತ್ತವೆ. ಜನರಿಗೆ ಬದುಕುವ ಹಕ್ಕಿದೆ ಎಂದು ಅದು ಹೇಳಿತು.</p>.<p>ಕೋವಿಡ್-19 ಲಸಿಕೆ ಅಭಿಯಾನ ಉಲ್ಲೇಖಿಸಿದ ಕೋರ್ಟ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿತು. ಅಲ್ಲದೇ, ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಸಮಾವೇಶ, ಸಭೆಗಳನ್ನು ನಿಲ್ಲಿಸಲು ಮತ್ತು ಚುನಾವಣೆಗಳನ್ನು ಮುಂದೂಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>