ದೇವಸ್ಥಾನ–ಮಸೀದಿಗೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ಸಮೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಅನುಮತಿ ನೀಡಿರುವುದು ಈಚಿನ ತಿಂಗಳಲ್ಲಿ ಇದು ಎರಡನೆಯ ನಿದರ್ಶನ. ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಇರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಇಲಾಖೆಯು (ಎಎಸ್ಐ) ಈಚೆಗೆ ಪೂರ್ಣಗೊಳಿಸಿದೆ. ಆದರೆ ಈ ಸಮೀಕ್ಷೆಯ ವರದಿ ಸಲ್ಲಿಸುವುದಕ್ಕೆ ಸ್ಥಳೀಯ ನ್ಯಾಯಾಲಯವೊಂದರಿಂದ ಹೆಚ್ಚಿನ ಕಾಲಾವಕಾಶ ಕೋರಿದೆ.