<p><strong>ಪ್ರಯಾಗ್ರಾಜ್:</strong> ಗಾಳಿಪಟ ಹಾರಾಟ ಸ್ಪರ್ಧೆಯ ಸಂದರ್ಭದಲ್ಲಿ ಚೀನಾದ 'ಮಾಂಜಾ' (ಸಿಂಥೆಟಿಕ್ ಅಥವಾ ನೈಲಾನ್ ದಾರಗಳು) ತಯಾರಿಕೆ, ಬಳಕೆ ಮತ್ತು ಮಾರಾಟವನ್ನು ನಿಲ್ಲಿಸಿರುವುದನ್ನು ಉತ್ತರ ಪ್ರದೇಶ ಸರ್ಕಾರವು ಖಚಿತಪಡಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಪುನರುಚ್ಚರಿಸಿದೆ.</p><p>ಗಾಳಿಪಟ ಹಾರಾಟ ಸ್ಪರ್ಧೆಯಲ್ಲಿ ಚೀನಾದ ‘ಮಾಂಜಾ’ದ ಕುರಿತು ನ್ಯಾಯಾಲಯ ಈಗಾಗಲೇ ಹೊರಡಿಸಿರುವ ನಿರ್ದೇಶನಗಳನ್ನು ಸರ್ಕಾರ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಮತ್ತು ನ್ಯಾಯಮೂರ್ತಿ ಕ್ಷಿತಿಜ್ ಶೈಲೇಂದ್ರ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಸೂಚನೆ ನೀಡಿದೆ. </p><p>ಚೀನೀ 'ಮಾಂಜಾ' ಮಾನವರು ಮತ್ತು ಪಕ್ಷಿಗಳ ಜೀವಕ್ಕೆ ಅಪಾಯ ಉಂಟುಮಾಡುತ್ತದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಉತ್ತರ ಪ್ರದೇಶ ಸೇರಿ ದೇಶದ ವಿವಿಧ ಭಾಗಗಳಲ್ಲಿ ಗಾಳಿಪಟ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ.</p>.ಬೀದರ್ | ಸಂಕ್ರಾಂತಿ ಸಂಭ್ರಮ ಕಸಿದ ಗಾಳಿಪಟ ಮಾಂಜ.ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ:ಬೀದರ್ ಕೋಟೆ ಸುತ್ತ ಗಾಳಿಪಟ ಹಾರಾಟ ನಿಷೇಧ.<p>ಚೀನೀ 'ಮಾಂಜಾ'ದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಹಿಮಾಂಶು ಶ್ರೀವಾಸ್ತವ ಮತ್ತು ಇತರ ಇಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಈ ಸೂಚನೆ ನೀಡಿದೆ.</p><p>ಈ ವಿಷಯದ ಕುರಿತು ನವೆಂಬರ್ 15, 2025ರಂದಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನ್ಯಾಯಾಲಯ, ‘ಚೀನಾದ ಮಾಂಜಾ ಉತ್ಪಾದನೆ, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು’ ಇದೀಗ ಅದೇ ನಿರ್ದೇಶನವನ್ನು ಪುನರುಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗ್ರಾಜ್:</strong> ಗಾಳಿಪಟ ಹಾರಾಟ ಸ್ಪರ್ಧೆಯ ಸಂದರ್ಭದಲ್ಲಿ ಚೀನಾದ 'ಮಾಂಜಾ' (ಸಿಂಥೆಟಿಕ್ ಅಥವಾ ನೈಲಾನ್ ದಾರಗಳು) ತಯಾರಿಕೆ, ಬಳಕೆ ಮತ್ತು ಮಾರಾಟವನ್ನು ನಿಲ್ಲಿಸಿರುವುದನ್ನು ಉತ್ತರ ಪ್ರದೇಶ ಸರ್ಕಾರವು ಖಚಿತಪಡಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಪುನರುಚ್ಚರಿಸಿದೆ.</p><p>ಗಾಳಿಪಟ ಹಾರಾಟ ಸ್ಪರ್ಧೆಯಲ್ಲಿ ಚೀನಾದ ‘ಮಾಂಜಾ’ದ ಕುರಿತು ನ್ಯಾಯಾಲಯ ಈಗಾಗಲೇ ಹೊರಡಿಸಿರುವ ನಿರ್ದೇಶನಗಳನ್ನು ಸರ್ಕಾರ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಮತ್ತು ನ್ಯಾಯಮೂರ್ತಿ ಕ್ಷಿತಿಜ್ ಶೈಲೇಂದ್ರ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಸೂಚನೆ ನೀಡಿದೆ. </p><p>ಚೀನೀ 'ಮಾಂಜಾ' ಮಾನವರು ಮತ್ತು ಪಕ್ಷಿಗಳ ಜೀವಕ್ಕೆ ಅಪಾಯ ಉಂಟುಮಾಡುತ್ತದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಉತ್ತರ ಪ್ರದೇಶ ಸೇರಿ ದೇಶದ ವಿವಿಧ ಭಾಗಗಳಲ್ಲಿ ಗಾಳಿಪಟ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ.</p>.ಬೀದರ್ | ಸಂಕ್ರಾಂತಿ ಸಂಭ್ರಮ ಕಸಿದ ಗಾಳಿಪಟ ಮಾಂಜ.ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ:ಬೀದರ್ ಕೋಟೆ ಸುತ್ತ ಗಾಳಿಪಟ ಹಾರಾಟ ನಿಷೇಧ.<p>ಚೀನೀ 'ಮಾಂಜಾ'ದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಹಿಮಾಂಶು ಶ್ರೀವಾಸ್ತವ ಮತ್ತು ಇತರ ಇಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಈ ಸೂಚನೆ ನೀಡಿದೆ.</p><p>ಈ ವಿಷಯದ ಕುರಿತು ನವೆಂಬರ್ 15, 2025ರಂದಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನ್ಯಾಯಾಲಯ, ‘ಚೀನಾದ ಮಾಂಜಾ ಉತ್ಪಾದನೆ, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು’ ಇದೀಗ ಅದೇ ನಿರ್ದೇಶನವನ್ನು ಪುನರುಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>