<p><strong>ಪ್ರಯಾಗರಾಜ್:</strong> ‘ಪಾಶ್ಚಿಮಾತ್ಯ ವಿಚಾರಗಳಿಂದ ಪ್ರೇರಣೆಗೊಂಡು ಯುವಕರು ಸಹಜೀವನ ನಡೆಸಲು ಮುಂದಾಗುತ್ತಿದ್ದಾರೆ. ಇಂಥ ಯುವಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೊನೆಯಲ್ಲಿ ಸಂಬಂಧ ಸರಿಬರಲಿಲ್ಲ ಎಂದಾದರೆ, ಅತ್ಯಾಚಾರದ ಪ್ರಕರಣ ದಾಖಲಿಸುವುದು ಸರ್ವೇಸಾಮಾನ್ಯವಾಗಿದೆ’ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಯುವತಿಯನ್ನು ಅಪಹರಿಸಿ, ವ್ಯಕ್ತಿಯೊಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮತ್ತು ಪ್ರಶಾಂತ್ ಮಿಶ್ರಾ ಅವರ ಪೀಠವು ತನ್ನ ತೀರ್ಪಿನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. </p>.<p>‘ಎಲ್ಲ ಕಾನೂನುಗಳೂ ಮಹಿಳೆಯರ ಪರವಾಗಿಯೇ ಇವೆ. ಸಹಜೀವನ ಎಂಬ ಪರಿಕಲ್ಪನೆಯೇ ಇರದಿದ್ದ ಕಾಲದಲ್ಲಿ ರೂಪಿಸಿದ ಕಾನೂನಿನ ಆಧಾರದಲ್ಲಿ ಪುರುಷರಿಗೆ ಶಿಕ್ಷೆ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು. </p>.<p class="Subhead">ಪ್ರಕರಣವೇನು?: ಚಂದ್ರಶೇಖರ್ ಎಂಬುವರು ಪೋಷಕರಿಗೆ ಮಾಹಿತಿಯೇ ಇಲ್ಲದಂತೆ ಮದುವೆಯಾಗುವುದಾಗಿ ಬಾಲಕಿಯನ್ನು ಅಪಹರಿಸಿ ಉತ್ತರ ಪ್ರದೇಶದ ಗೋರಖಪುರದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ ಬಾಲಕಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ದೂರು ನೀಡಲಾಗಿತ್ತು. ಇದು 2021ರ ಪ್ರಕರಣ.</p>.<p>ಅಪಹರಣ, ಮದುವೆ ಆಗಲು ಅಪಹರಣ, ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅನ್ವಯ ಚಂದ್ರಶೇಖರ್ ಅವರಿಗೆ ವಿಚಾರಣಾ ನ್ಯಾಯಾಲಯವೊಂದು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಚಂದ್ರಶೇಖರ್ ಅವರು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ‘ಪಾಶ್ಚಿಮಾತ್ಯ ವಿಚಾರಗಳಿಂದ ಪ್ರೇರಣೆಗೊಂಡು ಯುವಕರು ಸಹಜೀವನ ನಡೆಸಲು ಮುಂದಾಗುತ್ತಿದ್ದಾರೆ. ಇಂಥ ಯುವಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೊನೆಯಲ್ಲಿ ಸಂಬಂಧ ಸರಿಬರಲಿಲ್ಲ ಎಂದಾದರೆ, ಅತ್ಯಾಚಾರದ ಪ್ರಕರಣ ದಾಖಲಿಸುವುದು ಸರ್ವೇಸಾಮಾನ್ಯವಾಗಿದೆ’ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಯುವತಿಯನ್ನು ಅಪಹರಿಸಿ, ವ್ಯಕ್ತಿಯೊಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮತ್ತು ಪ್ರಶಾಂತ್ ಮಿಶ್ರಾ ಅವರ ಪೀಠವು ತನ್ನ ತೀರ್ಪಿನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. </p>.<p>‘ಎಲ್ಲ ಕಾನೂನುಗಳೂ ಮಹಿಳೆಯರ ಪರವಾಗಿಯೇ ಇವೆ. ಸಹಜೀವನ ಎಂಬ ಪರಿಕಲ್ಪನೆಯೇ ಇರದಿದ್ದ ಕಾಲದಲ್ಲಿ ರೂಪಿಸಿದ ಕಾನೂನಿನ ಆಧಾರದಲ್ಲಿ ಪುರುಷರಿಗೆ ಶಿಕ್ಷೆ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು. </p>.<p class="Subhead">ಪ್ರಕರಣವೇನು?: ಚಂದ್ರಶೇಖರ್ ಎಂಬುವರು ಪೋಷಕರಿಗೆ ಮಾಹಿತಿಯೇ ಇಲ್ಲದಂತೆ ಮದುವೆಯಾಗುವುದಾಗಿ ಬಾಲಕಿಯನ್ನು ಅಪಹರಿಸಿ ಉತ್ತರ ಪ್ರದೇಶದ ಗೋರಖಪುರದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ ಬಾಲಕಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ದೂರು ನೀಡಲಾಗಿತ್ತು. ಇದು 2021ರ ಪ್ರಕರಣ.</p>.<p>ಅಪಹರಣ, ಮದುವೆ ಆಗಲು ಅಪಹರಣ, ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅನ್ವಯ ಚಂದ್ರಶೇಖರ್ ಅವರಿಗೆ ವಿಚಾರಣಾ ನ್ಯಾಯಾಲಯವೊಂದು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಚಂದ್ರಶೇಖರ್ ಅವರು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>