ಈ ವರದಿಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರವು ರಚನೆಯಾದ ಒಂದು ತಿಂಗಳ ಒಳಗಾಗಿ ಈ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಿ ತನಿಖೆ ನಡೆಸಲಾಗುವುದು’ ಎಂದು ಬುಧವಾರ ಹೇಳಿದೆ. ಆದರೆ, ಒಸಿಸಿಆರ್ಪಿ ವರದಿ ಕುರಿತು ಅದಾನಿ ಸಮೂಹವು ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆಯೂ ಈ ಆರೋಪ ಕೇಳಿಬಂದಿತ್ತು. ಆಗ ಸಮೂಹವು ಈ ಎಲ್ಲ ಆರೋಪಗಳನ್ನು ನಿರಾಕರಿಸಿತ್ತು.