<p><strong>ಮುಂಬೈ:</strong> ನಾನು ಜಿಂಕೆ ಮಾಂಸ ಸೇವನೆ ಮಾಡುತ್ತಿದ್ದೇನೆ ಎಂದು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ನನ್ನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಸುರೇಶ್ ಧಾಸ್ ಆರೋಪಿಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಕಳೆದ ತಿಂಗಳು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಸತೀಶ್ ಭೋಸಲೆ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸಲು ಸಂಚು ರೂಪಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>ಸುರೇಶ್ ದಾಸ್ ಅವರ ಸಹಾಯಕರೆಂದು ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಭೋಸಲೆ, ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ.</p><p>‘ಬೀಡ್ ಜಿಲ್ಲೆಯ ಪಾರ್ಲಿಯ ಕೆಲವು ನಾಯಕರು ನನ್ನ ಕ್ಷೇತ್ರಕ್ಕೆ ಬಂದು ಭೋಸಲೆಯಿಂದ ಜಿಂಕೆ ಮಾಂಸವನ್ನು ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದರು. ನಾನು ವಿಠಲನ ಅನುಯಾಯಿಯಾಗಿದ್ದು, ಯಾವುದೇ ಮಾಂಸವನ್ನು ಸೇವಿಸುವುದಿಲ್ಲ’ ಎಂದು ಧಾಸ್ ಮರಾಠಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. </p><p>ರಾಜಸ್ಥಾನದ ಬಿಷ್ಣೋಯಿ ಸಮುದಾಯವು ಜಿಂಕೆಯನ್ನು ಪವಿತ್ರವೆಂದು ಪರಿಗಣಿಸುತ್ತದೆ. ಲಾರೆನ್ಸ್ ಬಿಷ್ಣೋಯಿ ಅವರಂತಹ ದರೋಡೆಕೋರರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಧಾಸ್ ದೂರಿದ್ದಾರೆ. </p><p>ಈ ವಿಚಾರವನ್ನು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚಿಸುವುದಾಗಿ ಧಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ನಾನು ಜಿಂಕೆ ಮಾಂಸ ಸೇವನೆ ಮಾಡುತ್ತಿದ್ದೇನೆ ಎಂದು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ನನ್ನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಸುರೇಶ್ ಧಾಸ್ ಆರೋಪಿಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಕಳೆದ ತಿಂಗಳು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಸತೀಶ್ ಭೋಸಲೆ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸಲು ಸಂಚು ರೂಪಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>ಸುರೇಶ್ ದಾಸ್ ಅವರ ಸಹಾಯಕರೆಂದು ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಭೋಸಲೆ, ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ.</p><p>‘ಬೀಡ್ ಜಿಲ್ಲೆಯ ಪಾರ್ಲಿಯ ಕೆಲವು ನಾಯಕರು ನನ್ನ ಕ್ಷೇತ್ರಕ್ಕೆ ಬಂದು ಭೋಸಲೆಯಿಂದ ಜಿಂಕೆ ಮಾಂಸವನ್ನು ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದರು. ನಾನು ವಿಠಲನ ಅನುಯಾಯಿಯಾಗಿದ್ದು, ಯಾವುದೇ ಮಾಂಸವನ್ನು ಸೇವಿಸುವುದಿಲ್ಲ’ ಎಂದು ಧಾಸ್ ಮರಾಠಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. </p><p>ರಾಜಸ್ಥಾನದ ಬಿಷ್ಣೋಯಿ ಸಮುದಾಯವು ಜಿಂಕೆಯನ್ನು ಪವಿತ್ರವೆಂದು ಪರಿಗಣಿಸುತ್ತದೆ. ಲಾರೆನ್ಸ್ ಬಿಷ್ಣೋಯಿ ಅವರಂತಹ ದರೋಡೆಕೋರರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಧಾಸ್ ದೂರಿದ್ದಾರೆ. </p><p>ಈ ವಿಚಾರವನ್ನು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚಿಸುವುದಾಗಿ ಧಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>