<p class="bodytext"><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಕುರಿತ ವರದಿಗಳಲ್ಲಿ ಸತ್ಯಾಂಶವಿದ್ದರೆ ಅದು ಗಂಭೀರ ಸ್ವರೂಪದ ಆರೋಪವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.</p>.<p class="bodytext">ಈ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಆರಂಭಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಕುರಿತು ಹೇಳಿದೆ.</p>.<p class="bodytext">ಭಾರತೀಯ ಸಂಪಾದಕರ ಕೂಟ, ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿಕುಮಾರ್ ಅವರನ್ನು ಪ್ರತಿನಿಧಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಕುರಿತು ಪೀಠ, ‘ನಮ್ಮಲ್ಲಿ ಕೆಲ ಪ್ರಶ್ನೆಗಳಿವೆ. ಈ ಆರೋಪಗಳ ಕುರಿತ ವರದಿಗಳಲ್ಲಿ ಸತ್ಯಾಂಶವಿದ್ದರೆ, ಇದು ಗಂಭೀರ ಆರೋಪ ಎಂಬುದರಲ್ಲಿ ಸಂದೇಹವಿಲ್ಲ’ ಎಂದು ಹೇಳಿತು.</p>.<p class="bodytext">2019ರಲ್ಲಿ ಇದೇ ರೀತಿಯ ವಿಷಯ ಬೆಳಕಿಗೆ ಬಂದಿತ್ತು. ಆದರೆ ಇಷ್ಟು ವಿಳಂಬಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಪೀಠ, ವಿಳಂಬವು ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<p class="bodytext">ಪೀಠವು, ಪ್ರತೀ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ಅಗತ್ಯವಿರುವವರು ಟೆಲಿಗ್ರಾಫ್ ಕಾಯ್ದೆಯಡಿ ದೂರುಗಳನ್ನು ದಾಖಲಿಸಬಹುದು ಎಂದು ಹೇಳಿತು.</p>.<p class="bodytext">‘ಸಲ್ಲಿಸಿರುವ ಅರ್ಜಿಗಳಲ್ಲಿ 10 ಪ್ರಕರಣಗಳ ಕುರಿತು ಮಾಹಿತಿ ಇದೆ’ ಎಂದು ಕಪಿಲ್ ಸಿಬಲ್ ಪೀಠಕ್ಕೆ ತಿಳಿಸಿದರು.</p>.<p class="bodytext">ಈ ಪ್ರಕರಣದ ಕುರಿತು ಸ್ವತಂತ್ರ ತನಿಖೆಗೆ ಕೋರಿ ಭಾರತೀಯ ಸಂಪಾದಕರ ಕೂಟ, ಹಿರಿಯ ಪತ್ರಕರ್ತರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಒಟ್ಟು ಒಂಬತ್ತು ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸುತ್ತಿದೆ.</p>.<p class="bodytext">ಪೆಗಾಸಸ್ ಕುತಂತ್ರಾಂಶ ಬಳಸಿ ದೇಶದ 300ಕ್ಕೂ ಹೆಚ್ಚು ಜನರ ಮೊಬೈಲ್ ಸಂಖ್ಯೆಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟ ಇತ್ತೀಚೆಗೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಕುರಿತ ವರದಿಗಳಲ್ಲಿ ಸತ್ಯಾಂಶವಿದ್ದರೆ ಅದು ಗಂಭೀರ ಸ್ವರೂಪದ ಆರೋಪವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.</p>.<p class="bodytext">ಈ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಆರಂಭಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಕುರಿತು ಹೇಳಿದೆ.</p>.<p class="bodytext">ಭಾರತೀಯ ಸಂಪಾದಕರ ಕೂಟ, ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿಕುಮಾರ್ ಅವರನ್ನು ಪ್ರತಿನಿಧಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಕುರಿತು ಪೀಠ, ‘ನಮ್ಮಲ್ಲಿ ಕೆಲ ಪ್ರಶ್ನೆಗಳಿವೆ. ಈ ಆರೋಪಗಳ ಕುರಿತ ವರದಿಗಳಲ್ಲಿ ಸತ್ಯಾಂಶವಿದ್ದರೆ, ಇದು ಗಂಭೀರ ಆರೋಪ ಎಂಬುದರಲ್ಲಿ ಸಂದೇಹವಿಲ್ಲ’ ಎಂದು ಹೇಳಿತು.</p>.<p class="bodytext">2019ರಲ್ಲಿ ಇದೇ ರೀತಿಯ ವಿಷಯ ಬೆಳಕಿಗೆ ಬಂದಿತ್ತು. ಆದರೆ ಇಷ್ಟು ವಿಳಂಬಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಪೀಠ, ವಿಳಂಬವು ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<p class="bodytext">ಪೀಠವು, ಪ್ರತೀ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ಅಗತ್ಯವಿರುವವರು ಟೆಲಿಗ್ರಾಫ್ ಕಾಯ್ದೆಯಡಿ ದೂರುಗಳನ್ನು ದಾಖಲಿಸಬಹುದು ಎಂದು ಹೇಳಿತು.</p>.<p class="bodytext">‘ಸಲ್ಲಿಸಿರುವ ಅರ್ಜಿಗಳಲ್ಲಿ 10 ಪ್ರಕರಣಗಳ ಕುರಿತು ಮಾಹಿತಿ ಇದೆ’ ಎಂದು ಕಪಿಲ್ ಸಿಬಲ್ ಪೀಠಕ್ಕೆ ತಿಳಿಸಿದರು.</p>.<p class="bodytext">ಈ ಪ್ರಕರಣದ ಕುರಿತು ಸ್ವತಂತ್ರ ತನಿಖೆಗೆ ಕೋರಿ ಭಾರತೀಯ ಸಂಪಾದಕರ ಕೂಟ, ಹಿರಿಯ ಪತ್ರಕರ್ತರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಒಟ್ಟು ಒಂಬತ್ತು ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸುತ್ತಿದೆ.</p>.<p class="bodytext">ಪೆಗಾಸಸ್ ಕುತಂತ್ರಾಂಶ ಬಳಸಿ ದೇಶದ 300ಕ್ಕೂ ಹೆಚ್ಚು ಜನರ ಮೊಬೈಲ್ ಸಂಖ್ಯೆಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟ ಇತ್ತೀಚೆಗೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>