‘ಟಿಎಂಸಿ ಜತೆ ಗೌರವಯುತ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್ ತನ್ನ ಅಭಿಲಾಷೆಯನ್ನು ಪದೇ ಪದೇ ವ್ಯಕ್ತಪಡಿಸಿತ್ತು. ಯಾವುದೇ ಒಪ್ಪಂದಗಳು ಮಾತುಕತೆಯಿಂದಾಗಿ ಅಂತಿಮಗೊಳ್ಳಬೇಕೇ ವಿನಾ ಏಕಪಕ್ಷೀಯ ಘೋಷಣೆಗಳಿಂದಲ್ಲ. ಬಿಜೆಪಿ ವಿರುದ್ಧ ಇಂಡಿಯಾ ಒಕ್ಕೂಟ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ಕಾಂಗ್ರೆಸ್ ಯಾವತ್ತೂ ಬಯಸುತ್ತದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಸಂಬಂಧ ಉಭಯ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಎರಡಕ್ಕಿಂತ ಹೆಚ್ಚಿನ ಸೀಟು ನೀಡಲಾಗುವುದಿಲ್ಲ ಎಂದು ಟಿಎಂಸಿ ಪಟ್ಟು ಹಿಡಿದಿತ್ತು.