<p><strong>ನವದೆಹಲಿ</strong>: ಕಕ್ಷಿದಾರರಿಗೆ ಕಾನೂನು ಸಲಹೆ ನೀಡಿದ್ದಕ್ಕಾಗಿ ವಕೀಲರಿಗೆ ನೇರವಾಗಿ ಸಮನ್ಸ್ ಜಾರಿ ಮಾಡುವುದಕ್ಕೆ ಪೊಲೀಸರು ಅಥವಾ ತನಿಖಾ ಸಂಸ್ಥೆಗಳಿಗೆ ಅನುಮತಿ ನೀಡುವುದರಿಂದ ನ್ಯಾಯಾಡಳಿತ ವ್ಯವಸ್ಥೆಗೆ ಬೆದರಿಕೆ ಒಡ್ಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ವಕೀಲ ವೃತ್ತಿಯು ನ್ಯಾಯದಾನ ವ್ಯವಸ್ಥೆಯ ಅವಿಭಾಜ್ಯ ಘಟಕ. ಆದರೆ, ವಕೀಲರಿಗೆ ಹೀಗೆ ನೇರವಾಗಿ ಸಮನ್ಸ್ ನೀಡುವ ಕ್ರಮವು ಈ ವೃತ್ತಿಯ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆ.ವಿ.ವಿಶ್ವನಾಥನ್ ಹಾಗೂ ಎನ್.ಕೋಟಿಶ್ವರ್ ಸಿಂಗ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ತನ್ನ ಕಕ್ಷಿದಾರರ ವಿರುದ್ಧದ ಪ್ರಕರಣದ ವಕಾಲತ್ತು ವಹಿಸಿದ್ದ ಗುಜರಾತಿನ ವಕೀಲರೊಬ್ಬರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ವಕೀಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್, ಅವರಿಗೆ ನೀಡಿದ್ದ ನೋಟಿಸ್ ರದ್ದುಗೊಳಿಸಲು ನಿರಾಕರಿಸಿ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<p>ಹೈಕೋರ್ಟ್ ಆದೇಶ ಪ್ರಶ್ನಿಸಿ, ವಕೀಲ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ಆದೇಶದವರೆಗೆ ಅರ್ಜಿದಾರನಿಗೆ ಯಾವುದೇ ಸಮನ್ಸ್ ನೀಡಬಾರದು ಎಂದು ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವು ನೀಡುವಂತೆ, ಭಾರತ ವಕೀಲರ ಪರಿಷತ್ತು, ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್ಸಿಬಿಎ) ಹಾಗೂ ಸುಪ್ರೀಂ ಕೋರ್ಟ್ನಲ್ಲಿ ವಕಾಲತ್ತು ವಹಿಸುವ ವಕೀಲರ ಸಂಘದ (ಎಸ್ಸಿಎಒಆರ್ಎ) ಅಧ್ಯಕ್ಷರು, ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿತು.</p>.<p>ಜೊತೆಗೆ, ಸೂಕ್ತ ನಿರ್ದೇಶನ ನೀಡುವುದಕ್ಕಾಗಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಣ್ನು ಸಿಜೆಐ ಅವರ ಮುಂದೆ ಮಂಡಿಸುವಂತೆಯೂ ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಕ್ಷಿದಾರರಿಗೆ ಕಾನೂನು ಸಲಹೆ ನೀಡಿದ್ದಕ್ಕಾಗಿ ವಕೀಲರಿಗೆ ನೇರವಾಗಿ ಸಮನ್ಸ್ ಜಾರಿ ಮಾಡುವುದಕ್ಕೆ ಪೊಲೀಸರು ಅಥವಾ ತನಿಖಾ ಸಂಸ್ಥೆಗಳಿಗೆ ಅನುಮತಿ ನೀಡುವುದರಿಂದ ನ್ಯಾಯಾಡಳಿತ ವ್ಯವಸ್ಥೆಗೆ ಬೆದರಿಕೆ ಒಡ್ಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ವಕೀಲ ವೃತ್ತಿಯು ನ್ಯಾಯದಾನ ವ್ಯವಸ್ಥೆಯ ಅವಿಭಾಜ್ಯ ಘಟಕ. ಆದರೆ, ವಕೀಲರಿಗೆ ಹೀಗೆ ನೇರವಾಗಿ ಸಮನ್ಸ್ ನೀಡುವ ಕ್ರಮವು ಈ ವೃತ್ತಿಯ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆ.ವಿ.ವಿಶ್ವನಾಥನ್ ಹಾಗೂ ಎನ್.ಕೋಟಿಶ್ವರ್ ಸಿಂಗ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ತನ್ನ ಕಕ್ಷಿದಾರರ ವಿರುದ್ಧದ ಪ್ರಕರಣದ ವಕಾಲತ್ತು ವಹಿಸಿದ್ದ ಗುಜರಾತಿನ ವಕೀಲರೊಬ್ಬರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ವಕೀಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್, ಅವರಿಗೆ ನೀಡಿದ್ದ ನೋಟಿಸ್ ರದ್ದುಗೊಳಿಸಲು ನಿರಾಕರಿಸಿ ಮಾರ್ಚ್ನಲ್ಲಿ ಆದೇಶಿಸಿತ್ತು.</p>.<p>ಹೈಕೋರ್ಟ್ ಆದೇಶ ಪ್ರಶ್ನಿಸಿ, ವಕೀಲ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ಆದೇಶದವರೆಗೆ ಅರ್ಜಿದಾರನಿಗೆ ಯಾವುದೇ ಸಮನ್ಸ್ ನೀಡಬಾರದು ಎಂದು ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವು ನೀಡುವಂತೆ, ಭಾರತ ವಕೀಲರ ಪರಿಷತ್ತು, ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್ಸಿಬಿಎ) ಹಾಗೂ ಸುಪ್ರೀಂ ಕೋರ್ಟ್ನಲ್ಲಿ ವಕಾಲತ್ತು ವಹಿಸುವ ವಕೀಲರ ಸಂಘದ (ಎಸ್ಸಿಎಒಆರ್ಎ) ಅಧ್ಯಕ್ಷರು, ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿತು.</p>.<p>ಜೊತೆಗೆ, ಸೂಕ್ತ ನಿರ್ದೇಶನ ನೀಡುವುದಕ್ಕಾಗಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಣ್ನು ಸಿಜೆಐ ಅವರ ಮುಂದೆ ಮಂಡಿಸುವಂತೆಯೂ ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>