ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್‌- ಗೋಡ್ಸೆ ನಡುವೆ ದೈಹಿಕ ಸಂಬಂಧ: ಕಾಂಗ್ರೆಸ್‌ ಹೇಳಿಕೆಗೆ ತೀವ್ರ ಟೀಕೆ

Last Updated 3 ಜನವರಿ 2020, 20:26 IST
ಅಕ್ಷರ ಗಾತ್ರ

ನವದೆಹಲಿ: ಸಾವರ್ಕರ್‌ ಮತ್ತು‌ನಾಥೂರಾಮ್‌ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಪ್ರಕಟಿಸಿರುವ ಕೈಪಿಡಿಯಲ್ಲಿ ಉಲ್ಲೇಖಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.

‘ಹೌ ಬ್ರೇವ್‌ ವಾಸ್‌ ವೀರ್‌ ಸಾವರ್ಕರ್‌’ ಪುಸ್ತಕವನ್ನು ಭೋಪಾಲ್‌ನ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅಖಿಲ ಭಾರತ ಕಾಂಗ್ರೆಸ್‌ ಸೇವಾದಳ ತರಬೇತಿ ಶಿಬಿರದಲ್ಲಿ ಹಂಚಲಾಗಿತ್ತು.

‘ಇದೊಂದು ಅಸಹ್ಯಕರ ಹೇಳಿಕೆ. ಕಾಂಗ್ರೆಸ್‌, ಗಾಂಧಿ ಮತ್ತು ನೆಹರು ಕುಟುಂಬದವರ ಹೊರತಾಗಿ ಉಳಿದ ನಾಯಕರನ್ನು ಕೆಣಕುವಕೆಲಸ ಮಾಡುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ. ‘ಕಾಂಗ್ರೆಸ್ ನಾಯಕರ ವಿವಿಧ ಸಂಬಂಧಗಳು ಪ್ರಪಂಚಕ್ಕೆ ತಿಳಿದಿದೆ. ಆದರೆ, ನಮಗೆ ಕೆಸರೆರಚಲು ಇಷ್ಟವಿಲ್ಲ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್‌ ಜೈನ್‌ ತಿಳಿಸಿದ್ದಾರೆ.

ಸಾವರ್ಕರ್‌ ಮೊಮ್ಮಗ ಗರಂ
ಸಾವರ್ಕರ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವುದನ್ನು ಖಂಡಿಸಿರುವ, ಅವರ ಮೊಮ್ಮಗ ರಂಜಿತ್‌ ಸಾವರ್ಕರ್‌ ಕಾಂಗ್ರೆಸ್‌ ಮತ್ತು ಅದರ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT