<p><strong>ಮುಂಬೈ:</strong> ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಅಣೆಕಟ್ಟೆಯ ಎತ್ತರ ಹೆಚ್ಚಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಇದಕ್ಕೆ ಮಹಾರಾಷ್ಟ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.</p>.<p>ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಬೇಕು ಹಾಗೂ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರಸ್ತುತ ಅಣೆಕಟ್ಟೆಯ ಎತ್ತರ 519.6 ಮೀ. ಇದ್ದು, ಇದನ್ನು 524.256 ಮೀ.ಗೆ ಹೆಚ್ಚಿಸಲು ಕರ್ನಾಟಕ ಮುಂದಾಗಿದೆ. ಇಂಥ ಕ್ರಮದಿಂದ ಕೃಷ್ಣಾ ನದಿ ಪಾತ್ರದ ಜನರಿಗೆ ತೊಂದರೆಯಾಗಲಿದೆ’ ಎಂದು ಫಡಣವೀಸ್ ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಅಣೆಕಟ್ಟು ಎತ್ತರ ಹೆಚ್ಚಿಸುವ ನಿರ್ಧಾರವು ಮಹಾರಾಷ್ಟ್ರದ ಪಾಲಿಗೆ ಕಳವಳಕಾರಿ. ಕೃಷ್ಣಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಎರಡೂ ರಾಜ್ಯಗಳ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಅವರು ಕರ್ನಾಟಕ ಸರ್ಕಾರಕ್ಕೂ ಮನವಿ ಮಾಡಿದ್ದಾರೆ.</p>.<p>ಆ.4ರಂದು ಈ ವಿಚಾರ ಕುರಿತು ಚರ್ಚಿಸಲು ಕೇಂದ್ರ ಹಾಗೂ ರಾಜ್ಯ ಅಧಿಕಾರಿಗಳ ಸಭೆ ನಡೆಯಲಿದೆ. ಮಹಾರಾಷ್ಟ್ರ ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ–ಪಾಟೀಲ ಅವರು ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ರಾಜ್ಯದ ಆತಂಕ ವ್ಯಕ್ತಪಡಿಸುವ ನಿರೀಕ್ಷೆ ಇದೆ. ಈ ಕಾರಣಕ್ಕೆ, ಮುಖ್ಯಮಂತ್ರಿ ಫಡಣವೀಸ್ ಬರೆದಿರುವ ಈ ಪತ್ರಕ್ಕೆ ಮಹತ್ವ ಬಂದಿದೆ.</p>.<p><strong>ಪತ್ರದಲ್ಲಿನ ಪ್ರಮುಖ ಅಂಶಗಳು:</strong></p><p>* ಆಲಮಟ್ಟಿ ಅಣೆಕಟ್ಟು ನಿರ್ಮಾಣವಾದ ನಂತರ ಕೃಷ್ಣಾ ನದಿ ಹಿನ್ನೀರಿನಿಂದ ಮಹಾರಾಷ್ಟ್ರದ ಅನೇಕ ಗ್ರಾಮಗಳು ತೊಂದರೆಗೀಡಾಗಿವೆ </p><p>* ಒಂದು ವೇಳೆ ಅಣೆಕಟ್ಟೆ ಎತ್ತರ ಹೆಚ್ಚಿಸಿದಲ್ಲಿ ರಾಜ್ಯದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪದೇಪದೇ ಪ್ರವಾಹ ಪರಿಸ್ಥಿತಿ ಉಂಟಾಗಿ ಪ್ರಾಣ ಹಾಗೂ ಸ್ವತ್ತುಗಳಿಗೆ ಹಾನಿಯಾಗಲಿದೆ. ಕೃಷಿ ಭೂಮಿಯೂ ಹಾಳಾಗಲಿದೆ</p><p> * ಹೂಳು ಸಂಗ್ರಹದ ಕಾರಣ ಬ್ಯಾರೇಜುಗಳ ನೀರು ಸಂಗ್ರಹ ಸಾಮರ್ಥ್ಯ ಈಗಾಗಲೇ ಕುಸಿದಿದೆ. ಇದರಿಂದ ಪ್ರವಾಹ ಉಂಟಾದಾಗ ನೀರಿನ ಮಟ್ಟ ತಗ್ಗುವುದು ವಿಳಂಬವಾಗಿ ಮತ್ತಷ್ಟು ತೊಂದರೆಯಾಗುತ್ತಿದೆ </p><p>* ಎತ್ತರ ಹೆಚ್ಚಳ ಮಾಡುವುದರಿಂದ ಅಣೆಕಟ್ಟೆಯಲ್ಲಿ ಹೆಚ್ಚುವರಿಯಾಗಿ ನೀರು ಸಂಗ್ರಹವಾಗುತ್ತದೆ. ಇದು ಕೂಡ ಮೇಲಿಂದಮೇಲೆ ಪ್ರವಾಹ ಉಂಟಾಗಲು ಕಾರಣವಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಅಣೆಕಟ್ಟೆಯ ಎತ್ತರ ಹೆಚ್ಚಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಇದಕ್ಕೆ ಮಹಾರಾಷ್ಟ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.</p>.<p>ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಬೇಕು ಹಾಗೂ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರಸ್ತುತ ಅಣೆಕಟ್ಟೆಯ ಎತ್ತರ 519.6 ಮೀ. ಇದ್ದು, ಇದನ್ನು 524.256 ಮೀ.ಗೆ ಹೆಚ್ಚಿಸಲು ಕರ್ನಾಟಕ ಮುಂದಾಗಿದೆ. ಇಂಥ ಕ್ರಮದಿಂದ ಕೃಷ್ಣಾ ನದಿ ಪಾತ್ರದ ಜನರಿಗೆ ತೊಂದರೆಯಾಗಲಿದೆ’ ಎಂದು ಫಡಣವೀಸ್ ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಅಣೆಕಟ್ಟು ಎತ್ತರ ಹೆಚ್ಚಿಸುವ ನಿರ್ಧಾರವು ಮಹಾರಾಷ್ಟ್ರದ ಪಾಲಿಗೆ ಕಳವಳಕಾರಿ. ಕೃಷ್ಣಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಎರಡೂ ರಾಜ್ಯಗಳ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಅವರು ಕರ್ನಾಟಕ ಸರ್ಕಾರಕ್ಕೂ ಮನವಿ ಮಾಡಿದ್ದಾರೆ.</p>.<p>ಆ.4ರಂದು ಈ ವಿಚಾರ ಕುರಿತು ಚರ್ಚಿಸಲು ಕೇಂದ್ರ ಹಾಗೂ ರಾಜ್ಯ ಅಧಿಕಾರಿಗಳ ಸಭೆ ನಡೆಯಲಿದೆ. ಮಹಾರಾಷ್ಟ್ರ ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ–ಪಾಟೀಲ ಅವರು ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ರಾಜ್ಯದ ಆತಂಕ ವ್ಯಕ್ತಪಡಿಸುವ ನಿರೀಕ್ಷೆ ಇದೆ. ಈ ಕಾರಣಕ್ಕೆ, ಮುಖ್ಯಮಂತ್ರಿ ಫಡಣವೀಸ್ ಬರೆದಿರುವ ಈ ಪತ್ರಕ್ಕೆ ಮಹತ್ವ ಬಂದಿದೆ.</p>.<p><strong>ಪತ್ರದಲ್ಲಿನ ಪ್ರಮುಖ ಅಂಶಗಳು:</strong></p><p>* ಆಲಮಟ್ಟಿ ಅಣೆಕಟ್ಟು ನಿರ್ಮಾಣವಾದ ನಂತರ ಕೃಷ್ಣಾ ನದಿ ಹಿನ್ನೀರಿನಿಂದ ಮಹಾರಾಷ್ಟ್ರದ ಅನೇಕ ಗ್ರಾಮಗಳು ತೊಂದರೆಗೀಡಾಗಿವೆ </p><p>* ಒಂದು ವೇಳೆ ಅಣೆಕಟ್ಟೆ ಎತ್ತರ ಹೆಚ್ಚಿಸಿದಲ್ಲಿ ರಾಜ್ಯದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪದೇಪದೇ ಪ್ರವಾಹ ಪರಿಸ್ಥಿತಿ ಉಂಟಾಗಿ ಪ್ರಾಣ ಹಾಗೂ ಸ್ವತ್ತುಗಳಿಗೆ ಹಾನಿಯಾಗಲಿದೆ. ಕೃಷಿ ಭೂಮಿಯೂ ಹಾಳಾಗಲಿದೆ</p><p> * ಹೂಳು ಸಂಗ್ರಹದ ಕಾರಣ ಬ್ಯಾರೇಜುಗಳ ನೀರು ಸಂಗ್ರಹ ಸಾಮರ್ಥ್ಯ ಈಗಾಗಲೇ ಕುಸಿದಿದೆ. ಇದರಿಂದ ಪ್ರವಾಹ ಉಂಟಾದಾಗ ನೀರಿನ ಮಟ್ಟ ತಗ್ಗುವುದು ವಿಳಂಬವಾಗಿ ಮತ್ತಷ್ಟು ತೊಂದರೆಯಾಗುತ್ತಿದೆ </p><p>* ಎತ್ತರ ಹೆಚ್ಚಳ ಮಾಡುವುದರಿಂದ ಅಣೆಕಟ್ಟೆಯಲ್ಲಿ ಹೆಚ್ಚುವರಿಯಾಗಿ ನೀರು ಸಂಗ್ರಹವಾಗುತ್ತದೆ. ಇದು ಕೂಡ ಮೇಲಿಂದಮೇಲೆ ಪ್ರವಾಹ ಉಂಟಾಗಲು ಕಾರಣವಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>