<p><strong>ಹೈದರಾಬಾದ್</strong>: ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ, ಈಗ ತೆಲಂಗಾಣ ಕೂಡ ತಕರಾರು ತೆಗೆದಿದೆ.</p>.<p>ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬಿಆರ್ಎಸ್ ಪಕ್ಷ ಎಚ್ಚರಿಸಿದೆ.</p>.<p>‘ಕರ್ನಾಟಕದ ಈ ನಡೆ ತೆಲಂಗಾಣ ರೈತರ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಟೀಕಿಸಿದ್ದಾರೆ.</p>.<p>ಇದೇ ವಿಚಾರವಾಗಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ರಾಜ್ಯದ ರೈತರ ವಿರುದ್ಧ ಅಪಾಯಕಾರಿ ಸಂಚು ರೂಪಿಸಲಾಗುತ್ತಿರುವ ಈ ಸಂದರ್ಭದಲ್ಲಿ ರೇವಂತ ರೆಡ್ಡಿ ದೆಹಲಿಯಲ್ಲಿ ಐಷಾರಾಮಿ ಜೀವನ ಕಳೆಯುತ್ತಿದ್ದಾರೆ’ ಎಂದಿದ್ದಾರೆ.</p>.<p>ಈ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರೇವಂತ ರೆಡ್ಡಿ ಅವರು ತೆಲಂಗಾಣ ರೈತರಿಗೆ ಉತ್ತರಿಸಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ, ಈಗ ತೆಲಂಗಾಣ ಕೂಡ ತಕರಾರು ತೆಗೆದಿದೆ.</p>.<p>ಅಣೆಕಟ್ಟೆಯ ಎತ್ತರ ಹೆಚ್ಚಿಸುವ ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬಿಆರ್ಎಸ್ ಪಕ್ಷ ಎಚ್ಚರಿಸಿದೆ.</p>.<p>‘ಕರ್ನಾಟಕದ ಈ ನಡೆ ತೆಲಂಗಾಣ ರೈತರ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಟೀಕಿಸಿದ್ದಾರೆ.</p>.<p>ಇದೇ ವಿಚಾರವಾಗಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ರಾಜ್ಯದ ರೈತರ ವಿರುದ್ಧ ಅಪಾಯಕಾರಿ ಸಂಚು ರೂಪಿಸಲಾಗುತ್ತಿರುವ ಈ ಸಂದರ್ಭದಲ್ಲಿ ರೇವಂತ ರೆಡ್ಡಿ ದೆಹಲಿಯಲ್ಲಿ ಐಷಾರಾಮಿ ಜೀವನ ಕಳೆಯುತ್ತಿದ್ದಾರೆ’ ಎಂದಿದ್ದಾರೆ.</p>.<p>ಈ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರೇವಂತ ರೆಡ್ಡಿ ಅವರು ತೆಲಂಗಾಣ ರೈತರಿಗೆ ಉತ್ತರಿಸಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>