<p><strong>ಶ್ರೀನಗರ</strong>: ಅಮರನಾಥ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳು ಇಂದು(ಭಾನುವಾರ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರೂ ಮೃತಪಟ್ಟಿದ್ದು, ಈ ಯಾತ್ರೆಯಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p> ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳ ವಾಹನವು ಅಪಘಾತಕ್ಕೆ ಈಡಾಗಿ ಒಬ್ಬರು ಮೃತಪಟ್ಟಿದ್ದು, ಎಂಟು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. </p><p>ಮತ್ತೊಂದು ಘಟನೆಯಲ್ಲಿ, ಪಹಲ್ಗಾಮ್ ಮಾರ್ಗದ ಪಿಸ್ಸುಟಾಪ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದಾರೆ. </p><p>ಮೃತರನ್ನು ಉರ್ಮಿಲಾಬೆನ್ ಮೋದಿ (53) ಹಾಗೂ ಛತ್ತೀಸ್ಗಢದ ಮೇಘನಾಥ್ (65) ಗುರುತಿಸಲಾಗಿದೆ.</p><p>ರಸ್ತೆ ಅಪಘಾತದಲ್ಲಿ ಗಾಯಾಗೊಂಡವರನ್ನು ರಕ್ಷಿಸಿ, ಬಾಲ್ಟಾಲ್ ಬೇಸ್ ಕ್ಯಾಂಪ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಅಮರನಾಥ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳು ಇಂದು(ಭಾನುವಾರ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರೂ ಮೃತಪಟ್ಟಿದ್ದು, ಈ ಯಾತ್ರೆಯಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p> ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳ ವಾಹನವು ಅಪಘಾತಕ್ಕೆ ಈಡಾಗಿ ಒಬ್ಬರು ಮೃತಪಟ್ಟಿದ್ದು, ಎಂಟು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. </p><p>ಮತ್ತೊಂದು ಘಟನೆಯಲ್ಲಿ, ಪಹಲ್ಗಾಮ್ ಮಾರ್ಗದ ಪಿಸ್ಸುಟಾಪ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದಾರೆ. </p><p>ಮೃತರನ್ನು ಉರ್ಮಿಲಾಬೆನ್ ಮೋದಿ (53) ಹಾಗೂ ಛತ್ತೀಸ್ಗಢದ ಮೇಘನಾಥ್ (65) ಗುರುತಿಸಲಾಗಿದೆ.</p><p>ರಸ್ತೆ ಅಪಘಾತದಲ್ಲಿ ಗಾಯಾಗೊಂಡವರನ್ನು ರಕ್ಷಿಸಿ, ಬಾಲ್ಟಾಲ್ ಬೇಸ್ ಕ್ಯಾಂಪ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>