<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಆಂಧ್ರಪ್ರದೇಶ ಪುನರ್ರಚನೆ ತಿದ್ದುಪಡಿ ಮಸೂದೆ–2026 ಅನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಈ ಮೂಲಕ ಅಮರಾವತಿ ನಗರವನ್ನು ಆಂಧ್ರಪ್ರದೇಶದ ಶಾಶ್ವತ ರಾಜಧಾನಿಯಾಗಿ ಘೋಷಿಸಿದಂತಾಗಿದೆ.</p><p>ಅಮರಾವತಿಯನ್ನು ಏಕೈಕ ಮತ್ತು ಶಾಶ್ವತ ರಾಜಧಾನಿಯನ್ನಾಗಿ ಮಾಡಬೇಕು ಮತ್ತು ಭವಿಷ್ಯದಲ್ಲಿ ರಾಜಧಾನಿಯನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ತಡೆಯುವ ಈ ಮಸೂದೆಯನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. </p><p>ಇದರೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಹುದಿನಗಳ ಆಕಾಂಕ್ಷೆ ಈಡೇರಿದಂತಾಗಿದೆ. ಟಿಡಿಪಿ ಪಕ್ಷವು ಕೇಂದ್ರದ ಎನ್ಡಿಎ ಮೈತ್ರಿಕೂಟದ ಭಾಗವಾಗಿದೆ.</p><p>ಅಮರಾವತಿಯನ್ನು ರಾಜ್ಯದ ರಾಜಧಾನಿಯಾಗಿ ಅಧಿಕೃತವಾಗಿ ಘೋಷಿಸಲು ನೆರವಾಗುವಂತೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ–2014ಕ್ಕೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಮಾರ್ಚ್ 28ರಂದು ಅಂಗೀಕರಿಸಲಾಗಿತ್ತು.</p><p>2024ರ ಜೂನ್ 2ರಿಂದ ಪೂರ್ವಾನ್ವಯವಾಗುವಂತೆ ಅಮರಾವತಿ ನಗರವನ್ನು ಆಂಧ್ರಪ್ರದೇಶ ರಾಜಧಾನಿಯಾಗಿ ಪರಿಗಣಿಸಬೇಕು ಎಂಬ ಅವಕಾಶವನ್ನು ಕೂಡ ಈ ತಿದ್ದುಪಡಿ ಮಸೂದೆ ಒಳಗೊಂಡಿದೆ.</p><p>‘ಅಮರಾವತಿಯನ್ನು ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಿ ಘೋಷಿಸಲು ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಕೋರಿ ಮಾರ್ಚ್ 28ರಂದು ಆಂಧ್ರಪ್ರದೇಶ ವಿಧಾನಸಭೆ ಅಂಗೀಕರಿಸಿದ ನಿರ್ಣಯಕ್ಕೆ ಈ ಮಸೂದೆ ಅಧಿಕೃತ ರೂಪ ನೀಡಿದೆ’ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.</p><p>2014ರ ವಿಭಜನೆಯ ನಂತರ ಆಂಧ್ರಪ್ರದೇಶದ ರಾಜಧಾನಿಯ ಬಗ್ಗೆ ಶಾಸನಬದ್ಧ ಸ್ಪಷ್ಟತೆಯನ್ನು ಈ ಮಸೂದೆ ನೀಡುತ್ತದೆ. ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ 2014ರ ಸೆಕ್ಷನ್ 5ರ ಪ್ರಕಾರ, ವಿಭಜನೆಯ ನಂತರ 10 ವರ್ಷಗಳವರೆಗೆ ಹೈದರಾಬಾದ್ ನಗರವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳಿಗೆ ಜಂಟಿ ರಾಜಧಾನಿಯನ್ನಾಗಿ ಮಾಡಲಾಗಿತ್ತು. ಪ್ರಸ್ತುತ ಮಸೂದೆಯು ಈ ಸೆಕ್ಷನ್ಗೆ ತಿದ್ದುಪಡಿ ತರಲಿದೆ.</p><p>ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪ ಮುಖ್ಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಅವರು ಈ ಮಸೂದೆಯನ್ನು ಬೆಂಬಲಿಸಿದ್ದಾರೆ. ಸಂಸತ್ತಿನಲ್ಲಿ ಭರವಸೆ ನೀಡಿದಂತೆ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ನೀಡಬೇಕು. ಅಮರಾವತಿಯು ಬೆಂಗಳೂರು, ಚೆನ್ನೈ ಅಥವಾ ಹೈದರಾಬಾದ್ನಂತೆ ಅಭಿವೃದ್ಧಿಯಾಗಲಿ ಎಂದು ಆಶಿಸಿದ್ದಾರೆ.</p><p>‘ಸ್ವತಂತ್ರ ಭಾರತದ ಇತಿಹಾಸದಲ್ಲಿ ನಿರ್ದಿಷ್ಟ ಸ್ಥಳವೊಂದನ್ನು ರಾಜ್ಯದ ರಾಜಧಾನಿ ಎಂದು ಘೋಷಿಸಲು ಸಂಸತ್ತಿನಲ್ಲಿ ಮಸೂದೆ ತಂದಿರುವುದು ಇದೇ ಮೊದಲು’ ಎಂದ ಬಿಜೆಪಿ ಸಂಸದ ಸಿ.ಎಂ. ರಮೇಶ್, ಮೂರು ರಾಜಧಾನಿಗಳ ಯೋಜನೆಯನ್ನು ಹೊಂದಿದ್ದ ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>‘ಭೂಮಿ ಕಳೆದುಕೊಂಡ ರೈತರ ಹಿತಾಸಕ್ತಿ ಕಾಪಾಡುವವರೆಗೆ ಮತ್ತು ನಿರ್ದಿಷ್ಟ ಕಾಲಮಿತಿಯಲ್ಲಿ ಪರಿಹಾರ ನೀಡುವವರೆಗೆ ಈ ಮಸೂದೆಗೆ ಅರ್ಥವಿರುವುದಿಲ್ಲ’ ಎಂದ ವೈಎಸ್ಆರ್ ಕಾಂಗ್ರೆಸ್ ನಾಯಕ ಪಿ.ವಿ. ಮಿಥುನ್ ರೆಡ್ಡಿ, ಜಾಗತಿಕ ಉದಾಹರಣೆಗಳನ್ನು ನೀಡುವ ಮೂಲಕ ತಮ್ಮ ಸರ್ಕಾರದ ಮೂರು ರಾಜಧಾನಿಗಳ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಆಂಧ್ರಪ್ರದೇಶ ಪುನರ್ರಚನೆ ತಿದ್ದುಪಡಿ ಮಸೂದೆ–2026 ಅನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಈ ಮೂಲಕ ಅಮರಾವತಿ ನಗರವನ್ನು ಆಂಧ್ರಪ್ರದೇಶದ ಶಾಶ್ವತ ರಾಜಧಾನಿಯಾಗಿ ಘೋಷಿಸಿದಂತಾಗಿದೆ.</p><p>ಅಮರಾವತಿಯನ್ನು ಏಕೈಕ ಮತ್ತು ಶಾಶ್ವತ ರಾಜಧಾನಿಯನ್ನಾಗಿ ಮಾಡಬೇಕು ಮತ್ತು ಭವಿಷ್ಯದಲ್ಲಿ ರಾಜಧಾನಿಯನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ತಡೆಯುವ ಈ ಮಸೂದೆಯನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. </p><p>ಇದರೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಹುದಿನಗಳ ಆಕಾಂಕ್ಷೆ ಈಡೇರಿದಂತಾಗಿದೆ. ಟಿಡಿಪಿ ಪಕ್ಷವು ಕೇಂದ್ರದ ಎನ್ಡಿಎ ಮೈತ್ರಿಕೂಟದ ಭಾಗವಾಗಿದೆ.</p><p>ಅಮರಾವತಿಯನ್ನು ರಾಜ್ಯದ ರಾಜಧಾನಿಯಾಗಿ ಅಧಿಕೃತವಾಗಿ ಘೋಷಿಸಲು ನೆರವಾಗುವಂತೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ–2014ಕ್ಕೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಮಾರ್ಚ್ 28ರಂದು ಅಂಗೀಕರಿಸಲಾಗಿತ್ತು.</p><p>2024ರ ಜೂನ್ 2ರಿಂದ ಪೂರ್ವಾನ್ವಯವಾಗುವಂತೆ ಅಮರಾವತಿ ನಗರವನ್ನು ಆಂಧ್ರಪ್ರದೇಶ ರಾಜಧಾನಿಯಾಗಿ ಪರಿಗಣಿಸಬೇಕು ಎಂಬ ಅವಕಾಶವನ್ನು ಕೂಡ ಈ ತಿದ್ದುಪಡಿ ಮಸೂದೆ ಒಳಗೊಂಡಿದೆ.</p><p>‘ಅಮರಾವತಿಯನ್ನು ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಿ ಘೋಷಿಸಲು ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಕೋರಿ ಮಾರ್ಚ್ 28ರಂದು ಆಂಧ್ರಪ್ರದೇಶ ವಿಧಾನಸಭೆ ಅಂಗೀಕರಿಸಿದ ನಿರ್ಣಯಕ್ಕೆ ಈ ಮಸೂದೆ ಅಧಿಕೃತ ರೂಪ ನೀಡಿದೆ’ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.</p><p>2014ರ ವಿಭಜನೆಯ ನಂತರ ಆಂಧ್ರಪ್ರದೇಶದ ರಾಜಧಾನಿಯ ಬಗ್ಗೆ ಶಾಸನಬದ್ಧ ಸ್ಪಷ್ಟತೆಯನ್ನು ಈ ಮಸೂದೆ ನೀಡುತ್ತದೆ. ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ 2014ರ ಸೆಕ್ಷನ್ 5ರ ಪ್ರಕಾರ, ವಿಭಜನೆಯ ನಂತರ 10 ವರ್ಷಗಳವರೆಗೆ ಹೈದರಾಬಾದ್ ನಗರವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳಿಗೆ ಜಂಟಿ ರಾಜಧಾನಿಯನ್ನಾಗಿ ಮಾಡಲಾಗಿತ್ತು. ಪ್ರಸ್ತುತ ಮಸೂದೆಯು ಈ ಸೆಕ್ಷನ್ಗೆ ತಿದ್ದುಪಡಿ ತರಲಿದೆ.</p><p>ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪ ಮುಖ್ಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಅವರು ಈ ಮಸೂದೆಯನ್ನು ಬೆಂಬಲಿಸಿದ್ದಾರೆ. ಸಂಸತ್ತಿನಲ್ಲಿ ಭರವಸೆ ನೀಡಿದಂತೆ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ನೀಡಬೇಕು. ಅಮರಾವತಿಯು ಬೆಂಗಳೂರು, ಚೆನ್ನೈ ಅಥವಾ ಹೈದರಾಬಾದ್ನಂತೆ ಅಭಿವೃದ್ಧಿಯಾಗಲಿ ಎಂದು ಆಶಿಸಿದ್ದಾರೆ.</p><p>‘ಸ್ವತಂತ್ರ ಭಾರತದ ಇತಿಹಾಸದಲ್ಲಿ ನಿರ್ದಿಷ್ಟ ಸ್ಥಳವೊಂದನ್ನು ರಾಜ್ಯದ ರಾಜಧಾನಿ ಎಂದು ಘೋಷಿಸಲು ಸಂಸತ್ತಿನಲ್ಲಿ ಮಸೂದೆ ತಂದಿರುವುದು ಇದೇ ಮೊದಲು’ ಎಂದ ಬಿಜೆಪಿ ಸಂಸದ ಸಿ.ಎಂ. ರಮೇಶ್, ಮೂರು ರಾಜಧಾನಿಗಳ ಯೋಜನೆಯನ್ನು ಹೊಂದಿದ್ದ ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>‘ಭೂಮಿ ಕಳೆದುಕೊಂಡ ರೈತರ ಹಿತಾಸಕ್ತಿ ಕಾಪಾಡುವವರೆಗೆ ಮತ್ತು ನಿರ್ದಿಷ್ಟ ಕಾಲಮಿತಿಯಲ್ಲಿ ಪರಿಹಾರ ನೀಡುವವರೆಗೆ ಈ ಮಸೂದೆಗೆ ಅರ್ಥವಿರುವುದಿಲ್ಲ’ ಎಂದ ವೈಎಸ್ಆರ್ ಕಾಂಗ್ರೆಸ್ ನಾಯಕ ಪಿ.ವಿ. ಮಿಥುನ್ ರೆಡ್ಡಿ, ಜಾಗತಿಕ ಉದಾಹರಣೆಗಳನ್ನು ನೀಡುವ ಮೂಲಕ ತಮ್ಮ ಸರ್ಕಾರದ ಮೂರು ರಾಜಧಾನಿಗಳ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>