‘ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗುವ ಮಾತುಕತೆಯ ಬಗ್ಗೆ ತಪ್ಪಾಗಿ ವರದಿಯಾಗಿದೆ. ಹೊಂದಾಣಿಕೆಯ ಸಮಯ ಮುಗಿದಿದೆ. ಪಕ್ಷದಿಂದ ದೂರವಾಗುವ ನಿರ್ಧಾರವನ್ನು ಬಹಳ ಯೋಚಿಸಿದ ನಂತರ ತೆಗೆದುಕೊಳ್ಳಲಾಗಿದೆ ಮತ್ತು ಅದು ಅಂತಿಮವಾಗಿದೆ. ಅವರ ಬೆಂಬಲಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಿ ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ, ಈಗ ಕಾಂಗ್ರೆಸ್ನಲ್ಲಿ ಉಳಿಯುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಉಲ್ಲೇಖಿಸಿ ಅವರ ಮಾಧ್ಯಮ ಸಲಹೆಗಾರ ಟ್ವೀಟ್ ಮಾಡಿದ್ದಾರೆ.