ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಸುರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಕಾರಣ ಅಮರನಾಥ ಯಾತ್ರೆಯನ್ನು ಆಗಸ್ಟ್ 4ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಶ್ರೀ ಅಮರನಾಥ ದೇವಾಲಯ ಮಂಡಳಿ (ಎಸ್ಎಎಸ್ಬಿ) ಬುಧವಾರ ಹೇಳಿದೆ.
ಭಾರಿ ಮಳೆ ಸುರಿದರೆ ಜಮ್ಮು ಮತ್ತು ಶ್ರೀನಗರ ಹೆದ್ದಾರಿಯ ರಾಂಬಾನ್ ಮತ್ತು ಬನಿಹಾಲ್ ಪ್ರದೇಶದಲ್ಲಿ ಭೂಕುಸಿತ ಹಾಗೂ ರಸ್ತೆಗೆ ಬಂಡೆಗಳು ಉರುಳಿ ಬೀಳುವ ಅಪಾಯವಿರುವುದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್ಎಎಸ್ಬಿ ವಕ್ತಾರರು ತಿಳಿಸಿದ್ದಾರೆ.