<p><strong>ಶ್ರೀನಗರ</strong>: ಅಮರನಾಥ ಯಾತ್ರೆಗೆ ಕಾಶ್ಮೀರದ ಗಂಡೇರಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಮೊದಲ ತಂಡ ಶನಿವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿತು.</p><p>ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶುಕ್ರವಾರ, ಭಗವತಿ ನಗರದಲ್ಲಿರುವ ಶಿಬಿರದಲ್ಲಿ ಚಾಲನೆ ನೀಡಿದ್ದರು.</p><p>ದಕ್ಷಿಣ ಕಾಶ್ಮೀರದಲ್ಲಿನ ಹಿಮಾಲಯ ಪರ್ವತದ 3,880 ಮೀಟರ್ ಎತ್ತರದಲ್ಲಿನ ಗುಹೆಯೊಳಗಿರುವ ಶಿವನ ದರ್ಶನ ಪಡೆಯಲು 3,400 ಯಾತ್ರಿಗಳ ಮೊದಲ ತಂಡ, ಭಾರಿ ಭದ್ರತೆಯೊಂದಿಗೆ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಪ್ರಯಾಣ ಆರಂಭಿಸಿತು.</p><p>ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗೃಹ ಇಲಾಖೆ ಭಕ್ತಾಧಿಗಳಿಗೆ ಅಗತ್ಯ ಎಲ್ಲ ಸೌಕರ್ಯಗಳನ್ನು ಗೃಹ ಇಲಾಖೆ ಮಾಡಿದೆ. ಶುಭಾಶಯಗಳು ಎಂದು ಹೇಳಿದ್ದಾರೆ.</p><p>62 ದಿನದ ಈ ಯಾತ್ರೆಯಲ್ಲಿ ಒಂದು ಕ್ಯಾಂಪ್ನಿಂದ ಯಾತ್ರಾರ್ಥಿಗಳು 13 ಕಿಲೋ ಮೀಟರ್ ದುರ್ಗಮ ಪರ್ವತ ಹಾದಿಯನ್ನು ಕ್ರಮಿಸಬೇಕಿದೆ. ಇನ್ನೊಂದು ಅನಂತನಾಗ್ ಜಿಲ್ಲೆಯ ನೂನ್ವಾನ್–ಪಹಲ್ಗಾಮ್ನ ಸಾಂಪ್ರದಾಯಿಕ 48 ಕಿ.ಮೀ. ದೂರದ ಮಾರ್ಗ ಕ್ರಮಿಸಬೇಕಿದೆ.</p>.<p>ಸಿಆರ್ಪಿಎಫ್ ಪೊಲೀಸರು ಯಾತ್ರಿಗಳ ತಂಡಕ್ಕೆ ಬೆಂಗಾವಲಾಗಿ ಭದ್ರತೆ ಒದಗಿಸಿದ್ದಾರೆ. ಸೇನೆ, ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಯಾತ್ರೆ ಸಾಗುವ ಹಾದಿಯುದ್ದಕ್ಕೂ ರಕ್ಷಣೆಗೆ ಸಜ್ಜಾಗಿದ್ದಾರೆ.</p><p>‘ಈಗಾಗಲೇ 3.5 ಲಕ್ಷ ಯಾತ್ರಿಗಳು ಹೆಸರು ನೋಂದಾಯಿಸಿದ್ದು, ಈ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಜಮ್ಮುವಿನಲ್ಲಿ 33 ವಸತಿ ಕೇಂದ್ರ ಸ್ಥಾಪಿಸಲಾಗಿದೆ. ನೋಂದಣಿ ಕೇಂದ್ರಗಳಲ್ಲಿ ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್ಎಫ್ಐಡಿ) ಟ್ಯಾಗ್ ನೀಡಲಾಗುವುದು. ಇದನ್ನು ಪಡೆಯುವುದು ಕಡ್ಡಾಯ. ತತ್ಕಾಲ್ ನೋಂದಣಿಗಾಗಿ ವೈಷ್ಣವಿಧಾಮ, ಮಹಾಜನ ಸಭಾ, ಪಂಚಾಯತ್ ಘರ್ನಲ್ಲಿ ಯಾತ್ರಿಗಳಿಗಾಗಿಯೂ; ಸಂತರಿಗಾಗಿ ಗೀತಾ ಭವನ ಮತ್ತು ರಾಮಮಂದಿರದಲ್ಲಿ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ’ ಎಂದು ಜಮ್ಮು ಜಿಲ್ಲಾಧಿಕಾರಿ ಅವ್ನಿ ಲಾವಾಸಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಅಮರನಾಥ ಯಾತ್ರೆಗೆ ಕಾಶ್ಮೀರದ ಗಂಡೇರಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಮೊದಲ ತಂಡ ಶನಿವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿತು.</p><p>ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶುಕ್ರವಾರ, ಭಗವತಿ ನಗರದಲ್ಲಿರುವ ಶಿಬಿರದಲ್ಲಿ ಚಾಲನೆ ನೀಡಿದ್ದರು.</p><p>ದಕ್ಷಿಣ ಕಾಶ್ಮೀರದಲ್ಲಿನ ಹಿಮಾಲಯ ಪರ್ವತದ 3,880 ಮೀಟರ್ ಎತ್ತರದಲ್ಲಿನ ಗುಹೆಯೊಳಗಿರುವ ಶಿವನ ದರ್ಶನ ಪಡೆಯಲು 3,400 ಯಾತ್ರಿಗಳ ಮೊದಲ ತಂಡ, ಭಾರಿ ಭದ್ರತೆಯೊಂದಿಗೆ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಪ್ರಯಾಣ ಆರಂಭಿಸಿತು.</p><p>ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗೃಹ ಇಲಾಖೆ ಭಕ್ತಾಧಿಗಳಿಗೆ ಅಗತ್ಯ ಎಲ್ಲ ಸೌಕರ್ಯಗಳನ್ನು ಗೃಹ ಇಲಾಖೆ ಮಾಡಿದೆ. ಶುಭಾಶಯಗಳು ಎಂದು ಹೇಳಿದ್ದಾರೆ.</p><p>62 ದಿನದ ಈ ಯಾತ್ರೆಯಲ್ಲಿ ಒಂದು ಕ್ಯಾಂಪ್ನಿಂದ ಯಾತ್ರಾರ್ಥಿಗಳು 13 ಕಿಲೋ ಮೀಟರ್ ದುರ್ಗಮ ಪರ್ವತ ಹಾದಿಯನ್ನು ಕ್ರಮಿಸಬೇಕಿದೆ. ಇನ್ನೊಂದು ಅನಂತನಾಗ್ ಜಿಲ್ಲೆಯ ನೂನ್ವಾನ್–ಪಹಲ್ಗಾಮ್ನ ಸಾಂಪ್ರದಾಯಿಕ 48 ಕಿ.ಮೀ. ದೂರದ ಮಾರ್ಗ ಕ್ರಮಿಸಬೇಕಿದೆ.</p>.<p>ಸಿಆರ್ಪಿಎಫ್ ಪೊಲೀಸರು ಯಾತ್ರಿಗಳ ತಂಡಕ್ಕೆ ಬೆಂಗಾವಲಾಗಿ ಭದ್ರತೆ ಒದಗಿಸಿದ್ದಾರೆ. ಸೇನೆ, ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಯಾತ್ರೆ ಸಾಗುವ ಹಾದಿಯುದ್ದಕ್ಕೂ ರಕ್ಷಣೆಗೆ ಸಜ್ಜಾಗಿದ್ದಾರೆ.</p><p>‘ಈಗಾಗಲೇ 3.5 ಲಕ್ಷ ಯಾತ್ರಿಗಳು ಹೆಸರು ನೋಂದಾಯಿಸಿದ್ದು, ಈ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಜಮ್ಮುವಿನಲ್ಲಿ 33 ವಸತಿ ಕೇಂದ್ರ ಸ್ಥಾಪಿಸಲಾಗಿದೆ. ನೋಂದಣಿ ಕೇಂದ್ರಗಳಲ್ಲಿ ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್ಎಫ್ಐಡಿ) ಟ್ಯಾಗ್ ನೀಡಲಾಗುವುದು. ಇದನ್ನು ಪಡೆಯುವುದು ಕಡ್ಡಾಯ. ತತ್ಕಾಲ್ ನೋಂದಣಿಗಾಗಿ ವೈಷ್ಣವಿಧಾಮ, ಮಹಾಜನ ಸಭಾ, ಪಂಚಾಯತ್ ಘರ್ನಲ್ಲಿ ಯಾತ್ರಿಗಳಿಗಾಗಿಯೂ; ಸಂತರಿಗಾಗಿ ಗೀತಾ ಭವನ ಮತ್ತು ರಾಮಮಂದಿರದಲ್ಲಿ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ’ ಎಂದು ಜಮ್ಮು ಜಿಲ್ಲಾಧಿಕಾರಿ ಅವ್ನಿ ಲಾವಾಸಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>