<p><strong>ಶ್ರೀನಗರ/ಜಮ್ಮು:</strong> ಭಾರಿ ಮಳೆ ಕಾರಣದಿಂದ ಅಮರನಾಥ ಯಾತ್ರೆಯನ್ನು ಆಗಸ್ಟ್ 3ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಕ್ತರ ಸುರಕ್ಷತೆಗಾಗಿ ಪಹಲ್ಗಾಂವ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಮತ್ತು ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಮೂರು ದಿನ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p><p>ಶುಕ್ರವಾರ ಬೆಳಗ್ಗೆ ಪಹಲ್ಗಾಂವ್ ಮಾರ್ಗದಿಂದ ಯಾತ್ರೆಗೆ ಅನುಮತಿ ನೀಡಲಿಲ್ಲ. ಆದರೆ ಬಾಲ್ಟಾಲ್ ಮಾರ್ಗದಿಂದ ಅನುಮತಿ ನೀಡಲಾಗಿತ್ತು. ನಂತರ ಅಲ್ಲಿಯೂ ಭಾರಿ ಮಳೆ ಕಾರಣದಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಕ್ತರ ಸುರಕ್ಷತೆ ದೃಷ್ಟಿಯಿಂದ ಎರಡು ಮಾರ್ಗಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು ಮೂರು ದಿನಗಳಲ್ಲಿ ಅದು ಮುಗಿಯಲಿದೆ. ನಂತರ ಭಕ್ತರನ್ನು ಎರಡು ಮಾರ್ಗಗಳಲ್ಲೂ ಕಳುಹಿಸಲಾಗುವುದು ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಭಿದೂರಿ ಹೇಳಿದರು.</p><p>ಈವರೆಗೆ 4.05 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಗುಹಾ ದೇವಸ್ಥಾನದಲ್ಲಿ ದರ್ಶನ ಪಡೆದಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ/ಜಮ್ಮು:</strong> ಭಾರಿ ಮಳೆ ಕಾರಣದಿಂದ ಅಮರನಾಥ ಯಾತ್ರೆಯನ್ನು ಆಗಸ್ಟ್ 3ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಕ್ತರ ಸುರಕ್ಷತೆಗಾಗಿ ಪಹಲ್ಗಾಂವ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಮತ್ತು ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಮೂರು ದಿನ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p><p>ಶುಕ್ರವಾರ ಬೆಳಗ್ಗೆ ಪಹಲ್ಗಾಂವ್ ಮಾರ್ಗದಿಂದ ಯಾತ್ರೆಗೆ ಅನುಮತಿ ನೀಡಲಿಲ್ಲ. ಆದರೆ ಬಾಲ್ಟಾಲ್ ಮಾರ್ಗದಿಂದ ಅನುಮತಿ ನೀಡಲಾಗಿತ್ತು. ನಂತರ ಅಲ್ಲಿಯೂ ಭಾರಿ ಮಳೆ ಕಾರಣದಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಕ್ತರ ಸುರಕ್ಷತೆ ದೃಷ್ಟಿಯಿಂದ ಎರಡು ಮಾರ್ಗಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು ಮೂರು ದಿನಗಳಲ್ಲಿ ಅದು ಮುಗಿಯಲಿದೆ. ನಂತರ ಭಕ್ತರನ್ನು ಎರಡು ಮಾರ್ಗಗಳಲ್ಲೂ ಕಳುಹಿಸಲಾಗುವುದು ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಭಿದೂರಿ ಹೇಳಿದರು.</p><p>ಈವರೆಗೆ 4.05 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಗುಹಾ ದೇವಸ್ಥಾನದಲ್ಲಿ ದರ್ಶನ ಪಡೆದಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>