<p><strong>ನವದೆಹಲಿ:</strong> ಅಮೆಜಾನ್ ಸಂಸ್ಥೆಯು ಜಂಟಿ ಸಂಸದೀಯ ಸಮಿತಿ ಎದುರು ಹಾಜರಾಗಲು ನಿರಾಕರಿಸಿದೆ.</p>.<p>‘ದತ್ತಾಂಶ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಸಮಿತಿ ಎದುರು ಹಾಜರಾಗುವಂತೆ ಅಮೆಜಾನ್ ಸಂಸ್ಥೆಗೆ ಸೂಚಿಸಲಾಗಿತ್ತು. ಇದೇ 28ರಂದು ಆ ಸಂಸ್ಥೆಯ ಪ್ರತಿನಿಧಿಗಳು ಸಮಿತಿಯ ಎದುರು ಹಾಜರಾಗಬೇಕು. ಇಲ್ಲವಾದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ’ ಎಂದು ಸಮಿತಿಯ ಮುಖ್ಯಸ್ಥೆ ಮತ್ತು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಶುಕ್ರವಾರ ತಿಳಿಸಿದ್ದಾರೆ.</p>.<p>‘ಅಮೆಜಾನ್ ಸಂಸ್ಥೆಯು ಸಮಿತಿಯ ಎದುರು ಹಾಜರಾಗದೆ ಹೋದರೆ ಆ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸುತ್ತೇವೆ. ಸಮಿತಿಯ ಸದಸ್ಯರೆಲ್ಲರೂ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p>.<p>ಫೇಸ್ಬುಕ್ ಇಂಡಿಯಾ ಸಂಸ್ಥೆಯ ಪಾಲಿಸಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ಅವರು ದತ್ತಾಂಶ ಭದ್ರತೆಯ ವಿಚಾರವಾಗಿ ಶುಕ್ರವಾರ ಸಮಿತಿಯ ಎದುರು ಹಾಜರಾದರು.</p>.<p>‘ಫೇಸ್ಬುಕ್ ಇಂಡಿಯಾದ ಪ್ರತಿನಿಧಿಗಳು ಸಮಿತಿಯ ಸದಸ್ಯರಿಂದ ಕಠಿಣ ಪ್ರಶ್ನೆಗಳನ್ನು ಎದುರಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಫೇಸ್ಬುಕ್ ಸಂಸ್ಥೆಯು ತನ್ನ ಜಾಹೀರಾತುದಾರರ ಲಾಭಕ್ಕಾಗಿ ಬಳಕೆದಾರರ ದತ್ತಾಂಶವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಮಿತಿಯ ಸದಸ್ಯರೊಬ್ಬರು ಸಲಹೆ ನೀಡಿದರು’ ಎಂದೂ ಹೇಳಲಾಗಿದೆ.</p>.<p>ಸಮಿತಿಯು, ಟ್ವಿಟರ್, ಗೂಗಲ್ ಹಾಗೂ ಪೇಟಿಎಂ ಸಂಸ್ಥೆಗಳ ಅಧಿಕಾರಿಗಳಿಗೂ ಸಮನ್ಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಮೆಜಾನ್ ಸಂಸ್ಥೆಯು ಜಂಟಿ ಸಂಸದೀಯ ಸಮಿತಿ ಎದುರು ಹಾಜರಾಗಲು ನಿರಾಕರಿಸಿದೆ.</p>.<p>‘ದತ್ತಾಂಶ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಸಮಿತಿ ಎದುರು ಹಾಜರಾಗುವಂತೆ ಅಮೆಜಾನ್ ಸಂಸ್ಥೆಗೆ ಸೂಚಿಸಲಾಗಿತ್ತು. ಇದೇ 28ರಂದು ಆ ಸಂಸ್ಥೆಯ ಪ್ರತಿನಿಧಿಗಳು ಸಮಿತಿಯ ಎದುರು ಹಾಜರಾಗಬೇಕು. ಇಲ್ಲವಾದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ’ ಎಂದು ಸಮಿತಿಯ ಮುಖ್ಯಸ್ಥೆ ಮತ್ತು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಶುಕ್ರವಾರ ತಿಳಿಸಿದ್ದಾರೆ.</p>.<p>‘ಅಮೆಜಾನ್ ಸಂಸ್ಥೆಯು ಸಮಿತಿಯ ಎದುರು ಹಾಜರಾಗದೆ ಹೋದರೆ ಆ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸುತ್ತೇವೆ. ಸಮಿತಿಯ ಸದಸ್ಯರೆಲ್ಲರೂ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p>.<p>ಫೇಸ್ಬುಕ್ ಇಂಡಿಯಾ ಸಂಸ್ಥೆಯ ಪಾಲಿಸಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ಅವರು ದತ್ತಾಂಶ ಭದ್ರತೆಯ ವಿಚಾರವಾಗಿ ಶುಕ್ರವಾರ ಸಮಿತಿಯ ಎದುರು ಹಾಜರಾದರು.</p>.<p>‘ಫೇಸ್ಬುಕ್ ಇಂಡಿಯಾದ ಪ್ರತಿನಿಧಿಗಳು ಸಮಿತಿಯ ಸದಸ್ಯರಿಂದ ಕಠಿಣ ಪ್ರಶ್ನೆಗಳನ್ನು ಎದುರಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಫೇಸ್ಬುಕ್ ಸಂಸ್ಥೆಯು ತನ್ನ ಜಾಹೀರಾತುದಾರರ ಲಾಭಕ್ಕಾಗಿ ಬಳಕೆದಾರರ ದತ್ತಾಂಶವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಮಿತಿಯ ಸದಸ್ಯರೊಬ್ಬರು ಸಲಹೆ ನೀಡಿದರು’ ಎಂದೂ ಹೇಳಲಾಗಿದೆ.</p>.<p>ಸಮಿತಿಯು, ಟ್ವಿಟರ್, ಗೂಗಲ್ ಹಾಗೂ ಪೇಟಿಎಂ ಸಂಸ್ಥೆಗಳ ಅಧಿಕಾರಿಗಳಿಗೂ ಸಮನ್ಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>