<p><strong>ಅಂಬಾಲಾ(ಹರಿಯಾಣ)</strong>: ಪಂಜಾಬ್–ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಫೆಬ್ರುವರಿ 21ರಂದು ಪೊಲೀಸರೊಂದಿಗೆ ನಡೆದ ಘರ್ಷಣೆಯಿಂದಾಗಿ ಮೃತಪಟ್ಟ ರೈತ ಶುಭಕರಣ್ ಸಿಂಗ್ (21) ಅವರಿಗೆ ಭಾನುವಾರ ಇಲ್ಲಿ ಗೌರವ ಸಲ್ಲಿಸಲಾಯಿತು.</p>.<p>ಅಂಬಾಲಾ ದಂಡುಪ್ರದೇಶಕ್ಕೆ ಹೊಂದಿಕೊಂಡಿರುವ ಮೊಹ್ರಾ ಗ್ರೇನ್ ಮಂಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮುಕ್ತಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಂಜಾಬ್ ಮತ್ತು ಹರಿಯಾಣದ ನೂರಾರು ರೈತರು ಪಾಲ್ಗೊಂಡಿದ್ದರು. ಶುಭಕರಣ್ ಸಿಂಗ್ ಗೌರವಾರ್ಥ ಎರಡು ನಿಮಿಷಗಳ ಮೌನ ಆಚರಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ, ಕಾರ್ಯಕ್ರಮ ನಡೆದ ಸ್ಥಳ ಹಾಗೂ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಮಂಜೀತ್ ಸಿಂಗ್ ರಾಯ್, ‘ರೈತರ ಹೋರಾಟದಿಂದ ಸರ್ಕಾರ ಕಂಗೆಟ್ಟಿದೆ. ಇದೇ ಕಾರಣಕ್ಕೆ ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಲಾಗಿದೆ’ ಎಂದು ಆರೋಪಿಸಿದರು.</p>.<p>‘ಸರ್ಕಾರ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುತ್ತದೆ. ಇದಕ್ಕೆ ಹೆದರಿ ರೈತರು ಹಿಂದಡಿ ಇಡುವುದಿಲ್ಲ, ಬದಲಾಗಿ ಶಾಂತಿಯುತ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ’ ಎಂದರು.</p>.<p>‘ದೆಹಲಿ ಚಲೋ‘ ಪ್ರತಿಭಟನೆ ಕುರಿತು ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿ, ಜಲ್ಬೇರಾ ಅವರನ್ನು ಅಂಬಾಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಮತ್ತೊಬ್ಬ ರೈತ ಮುಖಂಡ ಸರವಣ ಸಿಂಗ್ ಪಂಢೇರ್,‘ಶಂಭು ಮತ್ತು ಖನೌರಿಯಲ್ಲಿ ರೈತರು ಪಂಜಾಬ್–ಹರಿಯಾಣ ಗಡಿಯನ್ನು ಬಂದ್ ಮಾಡಿರಲಿಲ್ಲ. ಹರಿಯಾಣ ಪೊಲೀಸರೇ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಬಾಲಾ(ಹರಿಯಾಣ)</strong>: ಪಂಜಾಬ್–ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಫೆಬ್ರುವರಿ 21ರಂದು ಪೊಲೀಸರೊಂದಿಗೆ ನಡೆದ ಘರ್ಷಣೆಯಿಂದಾಗಿ ಮೃತಪಟ್ಟ ರೈತ ಶುಭಕರಣ್ ಸಿಂಗ್ (21) ಅವರಿಗೆ ಭಾನುವಾರ ಇಲ್ಲಿ ಗೌರವ ಸಲ್ಲಿಸಲಾಯಿತು.</p>.<p>ಅಂಬಾಲಾ ದಂಡುಪ್ರದೇಶಕ್ಕೆ ಹೊಂದಿಕೊಂಡಿರುವ ಮೊಹ್ರಾ ಗ್ರೇನ್ ಮಂಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮುಕ್ತಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಂಜಾಬ್ ಮತ್ತು ಹರಿಯಾಣದ ನೂರಾರು ರೈತರು ಪಾಲ್ಗೊಂಡಿದ್ದರು. ಶುಭಕರಣ್ ಸಿಂಗ್ ಗೌರವಾರ್ಥ ಎರಡು ನಿಮಿಷಗಳ ಮೌನ ಆಚರಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ, ಕಾರ್ಯಕ್ರಮ ನಡೆದ ಸ್ಥಳ ಹಾಗೂ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಮಂಜೀತ್ ಸಿಂಗ್ ರಾಯ್, ‘ರೈತರ ಹೋರಾಟದಿಂದ ಸರ್ಕಾರ ಕಂಗೆಟ್ಟಿದೆ. ಇದೇ ಕಾರಣಕ್ಕೆ ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಲಾಗಿದೆ’ ಎಂದು ಆರೋಪಿಸಿದರು.</p>.<p>‘ಸರ್ಕಾರ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುತ್ತದೆ. ಇದಕ್ಕೆ ಹೆದರಿ ರೈತರು ಹಿಂದಡಿ ಇಡುವುದಿಲ್ಲ, ಬದಲಾಗಿ ಶಾಂತಿಯುತ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ’ ಎಂದರು.</p>.<p>‘ದೆಹಲಿ ಚಲೋ‘ ಪ್ರತಿಭಟನೆ ಕುರಿತು ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿ, ಜಲ್ಬೇರಾ ಅವರನ್ನು ಅಂಬಾಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಮತ್ತೊಬ್ಬ ರೈತ ಮುಖಂಡ ಸರವಣ ಸಿಂಗ್ ಪಂಢೇರ್,‘ಶಂಭು ಮತ್ತು ಖನೌರಿಯಲ್ಲಿ ರೈತರು ಪಂಜಾಬ್–ಹರಿಯಾಣ ಗಡಿಯನ್ನು ಬಂದ್ ಮಾಡಿರಲಿಲ್ಲ. ಹರಿಯಾಣ ಪೊಲೀಸರೇ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>