ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಪತ್ತೆಯಾದ ಸ್ಫೋಟಕಗಳಿದ್ದ ವಾಹನದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ನಕಲಿ ಎನ್ಕೌಂಟರ್ ಮಾಡುವ ಯೋಜನೆ ರೂಪಿಸಲಾಗಿತ್ತು. ಈ ಇಬ್ಬರು ವ್ಯಕ್ತಿಗಳು ಸ್ಫೋಟಕಗಳನ್ನಿಟ್ಟಿದ್ದರು ಎನ್ನುವುದನ್ನು ಬಿಂಬಿಸಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಉದ್ದೇಶವನ್ನು ’ಎನ್ಕೌಂಟರ್ ಸ್ಪೆಷಲಿಸ್ಟ್’ ವಾಜೆ ಹೊಂದಿದ್ದರು. ಈ ಮೂಲಕ ಪ್ರಶಂಸೆ ಪಡೆಯುವ ಬಯಕೆ ಇತ್ತು. ಆದರೆ, ಅವರ ಯೋಜನೆ ಕಾರ್ಯಗತವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.