<p><strong>ಲಖನೌ: </strong>ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸೂಕ್ತ ಗೌರವ ನೀಡಿಲ್ಲ ಎಂದು ಆರೋಪ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆ (ಕಾಂಗ್ರೆಸ್) ಪಕ್ಷವು ಸಂವಿಧಾನ ಶಿಲ್ಪಿಯ ಅಂತ್ಯ ಸಂಸ್ಕಾರವನ್ನು ದೆಹಲಿಯಲ್ಲಿ ನಡೆಸಲು ಹಾಗೂ ಸ್ಮಾರಕ ನಿರ್ಮಿಸಲು ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದ್ದಾರೆ.</p><p>'ಭಾರತ ರತ್ನ' ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಾನ ಸಮಾರೋಹ್ ಭಾಗವಾಗಿ ಲಖನೌನಲ್ಲಿ ಭಾನುವಾರ ನಡೆದ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ್ದಾರೆ.</p><p>ಕಾಂಗ್ರೆಸ್ ನಾಯಕರನ್ನುದ್ದೇಶಿಸಿ, 'ಮೊದಲು ಅವರು ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಸೋಲುವಂತೆ ಮಾಡಿದರು. ಅವರು (ಅಂಬೇಡ್ಕರ್) ಮಹಾಪರಿನಿರ್ವಾಣ ಹೊಂದಿದ ನಂತರ, ದೆಹಲಿಯಲ್ಲಿ ಅಂತ್ಯ ಸಂಸ್ಕಾರ ನೆರವೇರದಂತೆ ಮಾಡಿದರು. ಸ್ಮಾರಕ ನಿರ್ಮಾಣಕ್ಕೂ ಅವಕಾಶ ನೀಡಲಿಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಅಂಬೇಡ್ಕರ್ ಅವರು 1956ರ ಡಿಸೆಂಬರ್ 6ರಂದು ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಮಹಾರಾಷ್ಟ್ರದ ಮುಂಬೈನಲ್ಲಿರುವ ಚೈತ್ಯ ಭೂಮಿಯಲ್ಲಿ, ಬೌದ್ಧ ಧರ್ಮದ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.</p>.ಕರ್ನಾಟಕದ ಅತಿ ದೊಡ್ಡ ಸಮುದಾಯ ಮುಸ್ಲಿಂ ಎಂದು ಬಿಂಬಿಸಲು ಸಿದ್ದರಾಮಯ್ಯ ಯತ್ನ : BJP.ಪ.ಬಂಗಾಳದ 4 ಜಿಲ್ಲೆಗಳನ್ನು ‘ಪ್ರಕ್ಷುಬ್ಧ ಪ್ರದೇಶ’ವೆಂದು ಘೋಷಿಸಿ: ಬಿಜೆಪಿ ಶಾಸಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸೂಕ್ತ ಗೌರವ ನೀಡಿಲ್ಲ ಎಂದು ಆರೋಪ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆ (ಕಾಂಗ್ರೆಸ್) ಪಕ್ಷವು ಸಂವಿಧಾನ ಶಿಲ್ಪಿಯ ಅಂತ್ಯ ಸಂಸ್ಕಾರವನ್ನು ದೆಹಲಿಯಲ್ಲಿ ನಡೆಸಲು ಹಾಗೂ ಸ್ಮಾರಕ ನಿರ್ಮಿಸಲು ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದ್ದಾರೆ.</p><p>'ಭಾರತ ರತ್ನ' ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಾನ ಸಮಾರೋಹ್ ಭಾಗವಾಗಿ ಲಖನೌನಲ್ಲಿ ಭಾನುವಾರ ನಡೆದ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ್ದಾರೆ.</p><p>ಕಾಂಗ್ರೆಸ್ ನಾಯಕರನ್ನುದ್ದೇಶಿಸಿ, 'ಮೊದಲು ಅವರು ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಸೋಲುವಂತೆ ಮಾಡಿದರು. ಅವರು (ಅಂಬೇಡ್ಕರ್) ಮಹಾಪರಿನಿರ್ವಾಣ ಹೊಂದಿದ ನಂತರ, ದೆಹಲಿಯಲ್ಲಿ ಅಂತ್ಯ ಸಂಸ್ಕಾರ ನೆರವೇರದಂತೆ ಮಾಡಿದರು. ಸ್ಮಾರಕ ನಿರ್ಮಾಣಕ್ಕೂ ಅವಕಾಶ ನೀಡಲಿಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಅಂಬೇಡ್ಕರ್ ಅವರು 1956ರ ಡಿಸೆಂಬರ್ 6ರಂದು ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಮಹಾರಾಷ್ಟ್ರದ ಮುಂಬೈನಲ್ಲಿರುವ ಚೈತ್ಯ ಭೂಮಿಯಲ್ಲಿ, ಬೌದ್ಧ ಧರ್ಮದ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.</p>.ಕರ್ನಾಟಕದ ಅತಿ ದೊಡ್ಡ ಸಮುದಾಯ ಮುಸ್ಲಿಂ ಎಂದು ಬಿಂಬಿಸಲು ಸಿದ್ದರಾಮಯ್ಯ ಯತ್ನ : BJP.ಪ.ಬಂಗಾಳದ 4 ಜಿಲ್ಲೆಗಳನ್ನು ‘ಪ್ರಕ್ಷುಬ್ಧ ಪ್ರದೇಶ’ವೆಂದು ಘೋಷಿಸಿ: ಬಿಜೆಪಿ ಶಾಸಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>