<p><strong>ಮುಂಬೈ:</strong>ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಾಂಪ್ರದಾಯಿಕ ಮತಬ್ಯಾಂಕ್ ಆಗಿದ್ದ ದಲಿತರು ಮತ್ತು ಮುಸ್ಲಿಮರ ಮತಗಳಿಗೆ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ ಬಹುಜನ ಆಘಾಡೀ (ವಿಬಿಎ) ಪಕ್ಷವು ಲಗ್ಗೆ ಹಾಕಿದೆ.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಭದ್ರಕೋಟೆಗಳಾಗಿದ್ದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಆದರೆ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳನ್ನು ವಿಬಿಎ ಅಭ್ಯರ್ಥಿಗಳು ಪಡೆದಿದ್ದಾರೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ವಿಬಿಎ ಪಕ್ಷದ ಸ್ವತಂತ್ರ ಸ್ಪರ್ಧೆಯೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಕಾಂಗ್ರೆಸ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಸುಶೀಲ್ಕುಮಾರ್ ಶಿಂಧೆ ಅವರು ವಿಬಿಎ ಸ್ಪರ್ಧೆಯ ಕಾರಣಕ್ಕೇ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ವಿಬಿಎ ಜತೆ ಮೈತ್ರಿ ಮಾಡಿಕೊಳ್ಳುವ ಮಾತುಕತೆ ನಡೆದಿತ್ತು. ಆದರೆಪ್ರಕಾಶ್ ಅಂಬೇಡ್ಕರ್ ಅವರ ಬೇಡಿಕೆಗೂ, ಅವರ ಸಾಮರ್ಥ್ಯಕ್ಕೂ ತಾಳೆಯಾಗುತ್ತಿರಲಿಲ್ಲ. ನಮಗೆ ಆರು ಕ್ಷೇತ್ರಗಳು ಬೇಕು ಎಂದು ಅವರು ಆರಂಭದಲ್ಲಿ ಕೇಳಿದ್ದರು. ಆಮೇಲೆ ಆ ಬೇಡಿಕೆಯನ್ನು 12ಕ್ಕೆ ಏರಿಸಿದರು. ಅಂತಿಮವಾಗಿ ಅವರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರು. ಅವರಿಗೆ ಮೈತ್ರಿಯಲ್ಲಿ ಆಸಕ್ತಿಯೇ ಇರಲಿಲ್ಲ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>47 ಕ್ಷೇತ್ರಗಳಲ್ಲಿ ವಿಬಿಎ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಒಂದರಲ್ಲೂ ಗೆಲುವು ದಾಖಲಿಸಿಲ್ಲ. ಆದರೆ ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿ ಅಭ್ಯರ್ಥಿಗಳು ಗೆದ್ದಿರುವ ಹಲವು ಕ್ಷೇತ್ರಗಳಲ್ಲೂ ವಿಬಿಎ ಲಕ್ಷಕ್ಕೂ ಹೆಚ್ಚು ಮತ ಪಡೆದಿದೆ.</p>.<p>ಈ ವರ್ಷದಲ್ಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲೂ ಕಾಂಗ್ರೆಸ್ಗೆ ವಿಬಿಎ ಪ್ರಬಲ ಸವಾಲು ಒಡ್ಡುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿಗೂ ವಿಬಿಎ ಪೈಪೋಟಿ ಒಡ್ಡಲಿದೆ ಎಂದು ನಿರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಾಂಪ್ರದಾಯಿಕ ಮತಬ್ಯಾಂಕ್ ಆಗಿದ್ದ ದಲಿತರು ಮತ್ತು ಮುಸ್ಲಿಮರ ಮತಗಳಿಗೆ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ ಬಹುಜನ ಆಘಾಡೀ (ವಿಬಿಎ) ಪಕ್ಷವು ಲಗ್ಗೆ ಹಾಕಿದೆ.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಭದ್ರಕೋಟೆಗಳಾಗಿದ್ದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಆದರೆ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳನ್ನು ವಿಬಿಎ ಅಭ್ಯರ್ಥಿಗಳು ಪಡೆದಿದ್ದಾರೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ವಿಬಿಎ ಪಕ್ಷದ ಸ್ವತಂತ್ರ ಸ್ಪರ್ಧೆಯೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಕಾಂಗ್ರೆಸ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಸುಶೀಲ್ಕುಮಾರ್ ಶಿಂಧೆ ಅವರು ವಿಬಿಎ ಸ್ಪರ್ಧೆಯ ಕಾರಣಕ್ಕೇ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ವಿಬಿಎ ಜತೆ ಮೈತ್ರಿ ಮಾಡಿಕೊಳ್ಳುವ ಮಾತುಕತೆ ನಡೆದಿತ್ತು. ಆದರೆಪ್ರಕಾಶ್ ಅಂಬೇಡ್ಕರ್ ಅವರ ಬೇಡಿಕೆಗೂ, ಅವರ ಸಾಮರ್ಥ್ಯಕ್ಕೂ ತಾಳೆಯಾಗುತ್ತಿರಲಿಲ್ಲ. ನಮಗೆ ಆರು ಕ್ಷೇತ್ರಗಳು ಬೇಕು ಎಂದು ಅವರು ಆರಂಭದಲ್ಲಿ ಕೇಳಿದ್ದರು. ಆಮೇಲೆ ಆ ಬೇಡಿಕೆಯನ್ನು 12ಕ್ಕೆ ಏರಿಸಿದರು. ಅಂತಿಮವಾಗಿ ಅವರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರು. ಅವರಿಗೆ ಮೈತ್ರಿಯಲ್ಲಿ ಆಸಕ್ತಿಯೇ ಇರಲಿಲ್ಲ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>47 ಕ್ಷೇತ್ರಗಳಲ್ಲಿ ವಿಬಿಎ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಒಂದರಲ್ಲೂ ಗೆಲುವು ದಾಖಲಿಸಿಲ್ಲ. ಆದರೆ ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿ ಅಭ್ಯರ್ಥಿಗಳು ಗೆದ್ದಿರುವ ಹಲವು ಕ್ಷೇತ್ರಗಳಲ್ಲೂ ವಿಬಿಎ ಲಕ್ಷಕ್ಕೂ ಹೆಚ್ಚು ಮತ ಪಡೆದಿದೆ.</p>.<p>ಈ ವರ್ಷದಲ್ಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲೂ ಕಾಂಗ್ರೆಸ್ಗೆ ವಿಬಿಎ ಪ್ರಬಲ ಸವಾಲು ಒಡ್ಡುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿಗೂ ವಿಬಿಎ ಪೈಪೋಟಿ ಒಡ್ಡಲಿದೆ ಎಂದು ನಿರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>