<p><strong>ಚೆನ್ನೈ:</strong> ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೋಳಿ ಹಾಗೂ ಅವರ ಬೆಂಗಾವಲು ಪಡೆಯ ವಾಹನ ಸಂಚಾರಕ್ಕಾಗಿ ಆಂಬುಲೆನ್ಸ್ ಅನ್ನು ಪೊಲೀಸರು ತುಸು ಹೊತ್ತು ತಡೆದು ನಿಲ್ಲಿಸಿದ ಘಟನೆ ತಮಿಳುನಾಡಿನ ಕುಂಬಕೋಣಂನಲ್ಲಿ ನಡೆದಿದೆ.</p>.<p>ಸೈರನ್ ಮೊಳಗಿಸುತ್ತಾ ಬಂದ ಆಂಬುಲೆನ್ಸ್ ಅನ್ನು ಪೊಲೀಸರು ತಡೆದಿರುವ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಸಚಿವ ಅನ್ಬಿಲ್ ಮಹೇಶ್ ಪಯ್ಯಮೋಳಿ ಅವರು ಸಂಚರಿಸುತ್ತಿದ್ದಾರೆ ಎನ್ನಲಾದ ಕಾರು ಹಾದುಹೋಗುವಾಗ ಪೊಲೀಸ್ ಕಾನ್ಸ್ಟೇಬಲ್ ಸಲ್ಯೂಟ್ ನೀಡುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.</p>.<p><a href="https://www.prajavani.net/india-news/jdu-on-plan-switch-in-bihar-nitish-kumar-speaks-to-sonia-gandhi-961461.html" itemprop="url">ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ </a></p>.<p>ಬೆಂಗಾವಲು ವಾಹನಗಳು ತೆರಳುವ ವರೆಗೂ ಆಂಬುಲೆನ್ಸ್ ಸೇರಿದಂತೆ ಹತ್ತಾರು ವಾಹನಗಳನ್ನು ಪೊಲೀಸರು ತಡೆದು ನಿಲ್ಲಿಸಿದ್ದರು.</p>.<p>ಆಂಬುಲೆನ್ಸ್ ತಡೆದು ನಿಲ್ಲಿಸಿದ ವಿಚಾರವಾಗಿ ಆಡಳಿತಾರೂಢ ಡಿಎಂಕೆ ವಿರುದ್ಧ ಪ್ರತಿಪಕ್ಷ ಎಐಎಡಿಎಂಕೆ ವಾಗ್ದಾಳಿ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೋಳಿ ಹಾಗೂ ಅವರ ಬೆಂಗಾವಲು ಪಡೆಯ ವಾಹನ ಸಂಚಾರಕ್ಕಾಗಿ ಆಂಬುಲೆನ್ಸ್ ಅನ್ನು ಪೊಲೀಸರು ತುಸು ಹೊತ್ತು ತಡೆದು ನಿಲ್ಲಿಸಿದ ಘಟನೆ ತಮಿಳುನಾಡಿನ ಕುಂಬಕೋಣಂನಲ್ಲಿ ನಡೆದಿದೆ.</p>.<p>ಸೈರನ್ ಮೊಳಗಿಸುತ್ತಾ ಬಂದ ಆಂಬುಲೆನ್ಸ್ ಅನ್ನು ಪೊಲೀಸರು ತಡೆದಿರುವ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಸಚಿವ ಅನ್ಬಿಲ್ ಮಹೇಶ್ ಪಯ್ಯಮೋಳಿ ಅವರು ಸಂಚರಿಸುತ್ತಿದ್ದಾರೆ ಎನ್ನಲಾದ ಕಾರು ಹಾದುಹೋಗುವಾಗ ಪೊಲೀಸ್ ಕಾನ್ಸ್ಟೇಬಲ್ ಸಲ್ಯೂಟ್ ನೀಡುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.</p>.<p><a href="https://www.prajavani.net/india-news/jdu-on-plan-switch-in-bihar-nitish-kumar-speaks-to-sonia-gandhi-961461.html" itemprop="url">ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ </a></p>.<p>ಬೆಂಗಾವಲು ವಾಹನಗಳು ತೆರಳುವ ವರೆಗೂ ಆಂಬುಲೆನ್ಸ್ ಸೇರಿದಂತೆ ಹತ್ತಾರು ವಾಹನಗಳನ್ನು ಪೊಲೀಸರು ತಡೆದು ನಿಲ್ಲಿಸಿದ್ದರು.</p>.<p>ಆಂಬುಲೆನ್ಸ್ ತಡೆದು ನಿಲ್ಲಿಸಿದ ವಿಚಾರವಾಗಿ ಆಡಳಿತಾರೂಢ ಡಿಎಂಕೆ ವಿರುದ್ಧ ಪ್ರತಿಪಕ್ಷ ಎಐಎಡಿಎಂಕೆ ವಾಗ್ದಾಳಿ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>