<p><strong>ಅಹಮದಾಬಾದ್</strong>: ಗುಜರಾತ್ನ ಅರವಲ್ಲಿ ಜಿಲ್ಲೆಯ ಮೊಡಾಸಾ ನಗರದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ನವಜಾತ ಶಿಶು, ವೈದ್ಯರು ಸೇರಿ ನಾಲ್ವರು ಸಜೀವ ದಹನಗೊಂಡಿದ್ದಾರೆ.</p><p>ಮೊಡಾಸಾದ ಆಸ್ಪತ್ರೆಯಲ್ಲಿ ಜನನವಾಗಿದ್ದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸೋಮವಾರ ತಡರಾತ್ರಿ ಮೊಡಾಸಾ– ಧನ್ಸುರಾ ಮಾರ್ಗದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿದೆ. </p><p>ಆಂಬುಲೆನ್ಸ್ನಲ್ಲಿ ಶಿಶು, ತಂದೆ ಜಿಗ್ನೇಶ್ ಮೋಚಿ (38), ವೈದ್ಯ ಡಾ. ಶಾಂತಿಲಾಲ್ ರೆಂತಿಯಾ (30), ನರ್ಸ್ ಭುರಿಬೆನ್ ಮನತ್ (23) ಹಾಗೂ ಚಾಲಕ ಸೇರಿ ಇನ್ನೂ ಇಬ್ಬರಿದ್ದರು. ಚಾಲಕ ಮತ್ತು ಇತರ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಆಂಬುಲೆನ್ಸ್ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕನಿಗೆ ಅರಿವಾದ ನಂತರ ಪೆಟ್ರೋಲ್ ಪಂಪ್ ಬಳಿ ಆಂಬುಲೆನ್ಸ್ ನಿಧಾನವಾಗಿ ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.</p><p>ಘಟನೆಯ ಕುರಿತು ತನಿಖೆ ನಡೆಸಲು ಮತ್ತು ದುರಂತಕ್ಕೆ ಕಾರಣವನ್ನು ಪತ್ತೆಮಾಡಲು ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಹರ ಸಿನ್ಹಾ ಜಡೇಜಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಗುಜರಾತ್ನ ಅರವಲ್ಲಿ ಜಿಲ್ಲೆಯ ಮೊಡಾಸಾ ನಗರದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ನವಜಾತ ಶಿಶು, ವೈದ್ಯರು ಸೇರಿ ನಾಲ್ವರು ಸಜೀವ ದಹನಗೊಂಡಿದ್ದಾರೆ.</p><p>ಮೊಡಾಸಾದ ಆಸ್ಪತ್ರೆಯಲ್ಲಿ ಜನನವಾಗಿದ್ದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸೋಮವಾರ ತಡರಾತ್ರಿ ಮೊಡಾಸಾ– ಧನ್ಸುರಾ ಮಾರ್ಗದಲ್ಲಿ ಚಲಿಸುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿದೆ. </p><p>ಆಂಬುಲೆನ್ಸ್ನಲ್ಲಿ ಶಿಶು, ತಂದೆ ಜಿಗ್ನೇಶ್ ಮೋಚಿ (38), ವೈದ್ಯ ಡಾ. ಶಾಂತಿಲಾಲ್ ರೆಂತಿಯಾ (30), ನರ್ಸ್ ಭುರಿಬೆನ್ ಮನತ್ (23) ಹಾಗೂ ಚಾಲಕ ಸೇರಿ ಇನ್ನೂ ಇಬ್ಬರಿದ್ದರು. ಚಾಲಕ ಮತ್ತು ಇತರ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಆಂಬುಲೆನ್ಸ್ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕನಿಗೆ ಅರಿವಾದ ನಂತರ ಪೆಟ್ರೋಲ್ ಪಂಪ್ ಬಳಿ ಆಂಬುಲೆನ್ಸ್ ನಿಧಾನವಾಗಿ ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.</p><p>ಘಟನೆಯ ಕುರಿತು ತನಿಖೆ ನಡೆಸಲು ಮತ್ತು ದುರಂತಕ್ಕೆ ಕಾರಣವನ್ನು ಪತ್ತೆಮಾಡಲು ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಹರ ಸಿನ್ಹಾ ಜಡೇಜಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>