<p><strong>ಜಬಲ್ಪುರ</strong>: ‘ಭಾರತ–ಪಾಕಿಸ್ತಾನ ನಡುವಣ 1971ರ ಯುದ್ಧದ ವೇಳೆ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಅಮೆರಿಕದ ಒತ್ತಡಕ್ಕೆ ಮಣಿದಿರಲಿಲ್ಲ’ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಕಮಲ್ನಾಥ್ ಇಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.</p>.<p>ಭಾರತ–ಪಾಕ್ ನಡುವಣ ಸೇನಾ ಸಂಘರ್ಷದ ವೇಳೆ ಕದನವಿರಾಮಕ್ಕೆ ನಾನು ಮಧ್ಯಸ್ಥಿಕೆ ವಹಿಸಿದ್ದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆಯ ಹಿನ್ನಲೆಯಲ್ಲಿ ಅವರು ಈ ಮಾತು ಹೇಳಿದ್ದಾರೆ.</p>.<p>‘ನಾನು 1971ರ ಯುದ್ಧ ನೋಡಿದ್ದೇನೆ. ಇಂದಿರಾಗಾಂಧಿ ಅವರ ಸಾಮರ್ಥ್ಯ ಗಮನಿಸಿದ್ದೇನೆ. ಆಗ ಪಾಕಿಸ್ತಾನ ಬೆಂಬಲಿಸಿದ್ದ ಅಮೆರಿಕ, ವಿವಿಧೆಡೆಯಿಂದ ಭಾರತದ ಮೇಲೆ ಒತ್ತಡ ಹೇರಿತ್ತು. ಆದರೆ, ಇದಕ್ಕೆ ಇಂದಿರಾಗಾಂಧಿ ಮಣಿದಿರಲಿಲ್ಲ’ ಎಂದು ಹೇಳಿದರು.</p>.<p class="bodytext">ಮಧ್ಯಸ್ಥಿಕೆ ವಹಿಸಿದ್ದೆ ಎಂದು ಟ್ರಂಪ್ ಪುನರುಚ್ಚರಿಸಿದ್ದರೆ, ಆಪರೇಷನ್ ಸಿಂಧೂರ ನಿಲ್ಲಿಸಲು ಪಾಕ್ ಅಂಗಲಾಚಿತ್ತು ಎಂದು ಪ್ರಧಾನಿ ಮೋದಿ ಕಾನ್ಪುರದಲ್ಲಿ ಶುಕ್ರವಾರ ಹೇಳಿದ್ದರು.</p>.<p>ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಹಿನ್ನಲೆಯಲ್ಲಿ ಸೇನೆಗೆ ಕೃತಜ್ಞತೆ ಸಲ್ಲಿಸಲು ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ‘ಜೈಹಿಂದ್ ಸಭಾ’ ರ್ಯಾಲಿಯನ್ನು ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲ್ಪುರ</strong>: ‘ಭಾರತ–ಪಾಕಿಸ್ತಾನ ನಡುವಣ 1971ರ ಯುದ್ಧದ ವೇಳೆ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಅಮೆರಿಕದ ಒತ್ತಡಕ್ಕೆ ಮಣಿದಿರಲಿಲ್ಲ’ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಕಮಲ್ನಾಥ್ ಇಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.</p>.<p>ಭಾರತ–ಪಾಕ್ ನಡುವಣ ಸೇನಾ ಸಂಘರ್ಷದ ವೇಳೆ ಕದನವಿರಾಮಕ್ಕೆ ನಾನು ಮಧ್ಯಸ್ಥಿಕೆ ವಹಿಸಿದ್ದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆಯ ಹಿನ್ನಲೆಯಲ್ಲಿ ಅವರು ಈ ಮಾತು ಹೇಳಿದ್ದಾರೆ.</p>.<p>‘ನಾನು 1971ರ ಯುದ್ಧ ನೋಡಿದ್ದೇನೆ. ಇಂದಿರಾಗಾಂಧಿ ಅವರ ಸಾಮರ್ಥ್ಯ ಗಮನಿಸಿದ್ದೇನೆ. ಆಗ ಪಾಕಿಸ್ತಾನ ಬೆಂಬಲಿಸಿದ್ದ ಅಮೆರಿಕ, ವಿವಿಧೆಡೆಯಿಂದ ಭಾರತದ ಮೇಲೆ ಒತ್ತಡ ಹೇರಿತ್ತು. ಆದರೆ, ಇದಕ್ಕೆ ಇಂದಿರಾಗಾಂಧಿ ಮಣಿದಿರಲಿಲ್ಲ’ ಎಂದು ಹೇಳಿದರು.</p>.<p class="bodytext">ಮಧ್ಯಸ್ಥಿಕೆ ವಹಿಸಿದ್ದೆ ಎಂದು ಟ್ರಂಪ್ ಪುನರುಚ್ಚರಿಸಿದ್ದರೆ, ಆಪರೇಷನ್ ಸಿಂಧೂರ ನಿಲ್ಲಿಸಲು ಪಾಕ್ ಅಂಗಲಾಚಿತ್ತು ಎಂದು ಪ್ರಧಾನಿ ಮೋದಿ ಕಾನ್ಪುರದಲ್ಲಿ ಶುಕ್ರವಾರ ಹೇಳಿದ್ದರು.</p>.<p>ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಹಿನ್ನಲೆಯಲ್ಲಿ ಸೇನೆಗೆ ಕೃತಜ್ಞತೆ ಸಲ್ಲಿಸಲು ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ‘ಜೈಹಿಂದ್ ಸಭಾ’ ರ್ಯಾಲಿಯನ್ನು ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>