<p><strong>ದಿಂಡಿಗಲ್(ತಮಿಳುನಾಡು):</strong> ತಮಿಳುನಾಡಿನಲ್ಲಿ ಹಿಂದೂಗಳ ಹಕ್ಕುಗಳನ್ನು ಕಸಿಯಲಾಗಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ಅವರ ಘನತೆಗೆ ತಕ್ಕುದಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.</p><p>ದಿಂಡಿಗಲ್ನಲ್ಲಿ ಸರ್ಕಾರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಡಿಎಂಕೆಯು ಎಲ್ಲ ಧರ್ಮಗಳಿಗೆ ಸೇರಿದ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಅವರ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.</p><p>'ನಮ್ಮಂತಹ ರಾಜ್ಯದಲ್ಲಿ, ಹಿಂದೂಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಕೇಂದ್ರದ ಗೃಹ ಸಚಿವರ ಆರೋಪವು ಸಂಪೂರ್ಣವಾಗಿ ಸುಳ್ಳು ಮತ್ತು ಅವರ ಸ್ಥಾನಕ್ಕೆ ತಕ್ಕುದಲ್ಲ. ಸತ್ಯವನ್ನು ಹೇಳಬೇಕೆಂದರೆ, ಗಲಭೆ ಸೃಷ್ಟಿಸುವ ಮತ್ತು ವಿಭಜನೆ ಬಯಸುವವರ ಮನಸ್ಥಿತಿಯೇ ತಮಿಳುನಾಡಿನಲ್ಲಿ ಯಶಸ್ವಿಯಾಗಲಿಲ್ಲ’ಎಂದು ಅವರು ಹೇಳಿದ್ದಾರೆ.</p><p>ಆ ರೀತಿಯ ಘಟನೆಗಳು ಭವಿಷ್ಯದಲ್ಲಿ ಎಂದೂ ನಡೆಯುವುದಿಲ್ಲ. ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.</p><p>‘ಸ್ಟಾಲಿನ್ ಇಲ್ಲಿ ಇರುವವರೆಗೆ ಗಲಭೆ ಸೃಷ್ಟಿಸುವ ಮತ್ತು ವಿಭಜಕ ಶಕ್ತಿಗಳಿಗೆ ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.</p><p>ಭಾನುವಾರ ತಮಿಳುನಾಡಿನ ಪುದುಕೊಟ್ಟಾಯ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಅಮಿತ್ ಶಾ, ಡಿಎಂಕೆ ನಿರಂತರವಾಗಿ ಹಿಂದುತ್ವ ಮತ್ತು ಹಿಂದೂಗಳ ಭಾವನಗೆ ಅಗೌರವ ತೋರುತ್ತಿದೆ ಎಂದು ದೂಷಿಸಿದ್ದರು.</p><p>ತಮಿಳುನಾಡಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದೂ ಆರೋಪಿಸಿದ್ದ ಶಾ, ಹಿಂದೂಗಳ ಪೂಜಾ ಪದ್ಧತಿಯನ್ನು ಅವಮಾನಿಸಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದ ಭೂಮಿ ಪೂಜೆ ವೇಳೆ ತಮಿಳುನಾಡಿನಲ್ಲಿ ಅಘೋಷಿತ ಕರ್ಫ್ಯೂ ಹೇರಲಾಗಿತ್ತು ಎಂದು ದೂರಿದ್ದಾರೆ.</p><p>‘ಡಿಎಂಕೆಯ ಹಿರಿಯ ನಾಯಕರು ಸನಾತನ ಧರ್ಮವನ್ನು ಡೆಂಗಿ,ಮಲೇರಿಯಾ ಎಂದು ಕರೆದಿದ್ದರು. ಹಿಂದೂಗಳ ಮೆರವಣಿಗೆ ಮತ್ತು ಮೂರ್ತಿ ವಿಸರ್ಜನೆಗಳಿಗೆ ತಡೆ ವಿಧಿಸಲಾಗಿದೆ. ಹಿಂದೂಗಳ ಮೇಲೆ ದೌರ್ಜನ್ಯ ಎಸಗುವ ಮೂಲಕ ನೀವು ಸಾಂವಿಧಾನಿಕ ನೀತಿಗಳನ್ನು ಉಲ್ಲಂಘಿಸಿದ್ದೀರಿ’ಎಂದೂ ಶಾ ಹೇಳಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಿಂಡಿಗಲ್(ತಮಿಳುನಾಡು):</strong> ತಮಿಳುನಾಡಿನಲ್ಲಿ ಹಿಂದೂಗಳ ಹಕ್ಕುಗಳನ್ನು ಕಸಿಯಲಾಗಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ಅವರ ಘನತೆಗೆ ತಕ್ಕುದಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.</p><p>ದಿಂಡಿಗಲ್ನಲ್ಲಿ ಸರ್ಕಾರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಡಿಎಂಕೆಯು ಎಲ್ಲ ಧರ್ಮಗಳಿಗೆ ಸೇರಿದ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಅವರ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.</p><p>'ನಮ್ಮಂತಹ ರಾಜ್ಯದಲ್ಲಿ, ಹಿಂದೂಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಕೇಂದ್ರದ ಗೃಹ ಸಚಿವರ ಆರೋಪವು ಸಂಪೂರ್ಣವಾಗಿ ಸುಳ್ಳು ಮತ್ತು ಅವರ ಸ್ಥಾನಕ್ಕೆ ತಕ್ಕುದಲ್ಲ. ಸತ್ಯವನ್ನು ಹೇಳಬೇಕೆಂದರೆ, ಗಲಭೆ ಸೃಷ್ಟಿಸುವ ಮತ್ತು ವಿಭಜನೆ ಬಯಸುವವರ ಮನಸ್ಥಿತಿಯೇ ತಮಿಳುನಾಡಿನಲ್ಲಿ ಯಶಸ್ವಿಯಾಗಲಿಲ್ಲ’ಎಂದು ಅವರು ಹೇಳಿದ್ದಾರೆ.</p><p>ಆ ರೀತಿಯ ಘಟನೆಗಳು ಭವಿಷ್ಯದಲ್ಲಿ ಎಂದೂ ನಡೆಯುವುದಿಲ್ಲ. ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.</p><p>‘ಸ್ಟಾಲಿನ್ ಇಲ್ಲಿ ಇರುವವರೆಗೆ ಗಲಭೆ ಸೃಷ್ಟಿಸುವ ಮತ್ತು ವಿಭಜಕ ಶಕ್ತಿಗಳಿಗೆ ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.</p><p>ಭಾನುವಾರ ತಮಿಳುನಾಡಿನ ಪುದುಕೊಟ್ಟಾಯ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಅಮಿತ್ ಶಾ, ಡಿಎಂಕೆ ನಿರಂತರವಾಗಿ ಹಿಂದುತ್ವ ಮತ್ತು ಹಿಂದೂಗಳ ಭಾವನಗೆ ಅಗೌರವ ತೋರುತ್ತಿದೆ ಎಂದು ದೂಷಿಸಿದ್ದರು.</p><p>ತಮಿಳುನಾಡಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದೂ ಆರೋಪಿಸಿದ್ದ ಶಾ, ಹಿಂದೂಗಳ ಪೂಜಾ ಪದ್ಧತಿಯನ್ನು ಅವಮಾನಿಸಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದ ಭೂಮಿ ಪೂಜೆ ವೇಳೆ ತಮಿಳುನಾಡಿನಲ್ಲಿ ಅಘೋಷಿತ ಕರ್ಫ್ಯೂ ಹೇರಲಾಗಿತ್ತು ಎಂದು ದೂರಿದ್ದಾರೆ.</p><p>‘ಡಿಎಂಕೆಯ ಹಿರಿಯ ನಾಯಕರು ಸನಾತನ ಧರ್ಮವನ್ನು ಡೆಂಗಿ,ಮಲೇರಿಯಾ ಎಂದು ಕರೆದಿದ್ದರು. ಹಿಂದೂಗಳ ಮೆರವಣಿಗೆ ಮತ್ತು ಮೂರ್ತಿ ವಿಸರ್ಜನೆಗಳಿಗೆ ತಡೆ ವಿಧಿಸಲಾಗಿದೆ. ಹಿಂದೂಗಳ ಮೇಲೆ ದೌರ್ಜನ್ಯ ಎಸಗುವ ಮೂಲಕ ನೀವು ಸಾಂವಿಧಾನಿಕ ನೀತಿಗಳನ್ನು ಉಲ್ಲಂಘಿಸಿದ್ದೀರಿ’ಎಂದೂ ಶಾ ಹೇಳಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>