<p><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ಗುಜ್ಜರ್, ಬಕರ್ವಾಲ್ ಹಾಗೂ ಪಹಾರಿ ಸಮುದಾಯಗಳಿಗೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಇಲ್ಲಿನ ರಾಜೌರಿಯಲ್ಲಿ ಮಂಗಳವಾರ ನಡೆದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು, ಈ ಸಮುದಾಯಗಳಿಗೆ ಎಸ್ಟಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದರು. ಈಗಾಗಲೇ ಲೆಫ್ಟಿನೆಂಟ್ ಗವರ್ನರ್ ಸ್ಥಾಪಿಸಿದ ಆಯೋಗವು ಈ ಮೀಸಲಾತಿಯ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಹೇಳಿದರು.</p>.<p>370ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಅಮಿತ್ ಶಾ, 370ನೇ ವಿಧಿ ರದ್ದು ಮಾಡಿದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ ಎಂದರು.</p>.<p>ಕಲ್ಲುಗಳು, ಬಡಿಗೆಗಳನ್ನು ಹಿಡಿಯುತ್ತಿದ್ದ ಯುವಕರು ಇಂದು ಲ್ಯಾಪ್ಟಾಪ್ ಹಿಡಿಯುತ್ತಿದ್ದಾರೆ. ಇಂತಹ ಆರೋಗ್ಯಕಾರಿ ಬೆಳವಣಿಗೆಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಆರ್ಪಿಸೋಣ ಎಂದು ಅವರು ಹೇಳಿದರು.</p>.<p>ಈಗಾಗಲೇ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿದ್ದು, ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ಗುಜ್ಜರ್, ಬಕರ್ವಾಲ್ ಹಾಗೂ ಪಹಾರಿ ಸಮುದಾಯಗಳಿಗೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಇಲ್ಲಿನ ರಾಜೌರಿಯಲ್ಲಿ ಮಂಗಳವಾರ ನಡೆದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು, ಈ ಸಮುದಾಯಗಳಿಗೆ ಎಸ್ಟಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದರು. ಈಗಾಗಲೇ ಲೆಫ್ಟಿನೆಂಟ್ ಗವರ್ನರ್ ಸ್ಥಾಪಿಸಿದ ಆಯೋಗವು ಈ ಮೀಸಲಾತಿಯ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಹೇಳಿದರು.</p>.<p>370ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಅಮಿತ್ ಶಾ, 370ನೇ ವಿಧಿ ರದ್ದು ಮಾಡಿದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ ಎಂದರು.</p>.<p>ಕಲ್ಲುಗಳು, ಬಡಿಗೆಗಳನ್ನು ಹಿಡಿಯುತ್ತಿದ್ದ ಯುವಕರು ಇಂದು ಲ್ಯಾಪ್ಟಾಪ್ ಹಿಡಿಯುತ್ತಿದ್ದಾರೆ. ಇಂತಹ ಆರೋಗ್ಯಕಾರಿ ಬೆಳವಣಿಗೆಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಆರ್ಪಿಸೋಣ ಎಂದು ಅವರು ಹೇಳಿದರು.</p>.<p>ಈಗಾಗಲೇ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿದ್ದು, ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>