<p><strong>ನವದೆಹಲಿ: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂಧನ ಸಚಿವ ಆರ್.ಕೆ.ಸಿಂಗ್ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ ಅವರ ಜತೆ ದೇಶದಲ್ಲಿನ ಕಲ್ಲಿದ್ದಲು ಕೊರತೆ ಸಂಬಂಧ ಸೋಮವಾರ ಸಭೆ ನಡೆಸಿದ್ದಾರೆ.</p>.<p>ಪಂಜಾಬ್, ದೆಹಲಿ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಮತ್ತೆ ಮನವಿ ಮಾಡಿಕೊಂಡಿವೆ. ಇದರ ಬೆನ್ನಲ್ಲೇ ಶಾ ಅವರು ಸಭೆ ನಡೆಸಿದ್ದಾರೆ.</p>.<p>ದೇಶದಲ್ಲಿನ ಕಲ್ಲಿದ್ದಲಿನ ಸಂಗ್ರಹ, ಪ್ರತಿನಿತ್ಯ ಕಲ್ಲಿದ್ದಲಿಗೆ ಇರುವ ಬೇಡಿಕೆ, ಪ್ರತಿದಿನ ವಿದ್ಯುತ್ಗೆ ಇರುವ ಬೇಡಿಕೆ ಬಗ್ಗೆ ಅವರು ಇಬ್ಬರೂ ಸಚಿವರಿಂದ ಮಾಹಿತಿ ಪಡೆದಿದ್ದಾರೆ.</p>.<p>ಕಲ್ಲಿದ್ದಲಿನ ಉತ್ಪಾದನೆಯನ್ನು ಶೀಘ್ರವೇ ಹೆಚ್ಚಿಸಿ ಎಂದು ಶಾ ಅವರು ಕಲ್ಲಿದ್ದಲು ಸಚಿವರಿಗೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ಜಲವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ, ಆ ಮೂಲಕ ಕಲ್ಲಿದ್ದಲಿನ ಮೇಲಿನ ಅವಲಂಬನೆಯನ್ನು ತಗ್ಗಿಸಿ ಎಂದು ಇಂಧನ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂಧನ ಸಚಿವ ಆರ್.ಕೆ.ಸಿಂಗ್ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ ಅವರ ಜತೆ ದೇಶದಲ್ಲಿನ ಕಲ್ಲಿದ್ದಲು ಕೊರತೆ ಸಂಬಂಧ ಸೋಮವಾರ ಸಭೆ ನಡೆಸಿದ್ದಾರೆ.</p>.<p>ಪಂಜಾಬ್, ದೆಹಲಿ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಮತ್ತೆ ಮನವಿ ಮಾಡಿಕೊಂಡಿವೆ. ಇದರ ಬೆನ್ನಲ್ಲೇ ಶಾ ಅವರು ಸಭೆ ನಡೆಸಿದ್ದಾರೆ.</p>.<p>ದೇಶದಲ್ಲಿನ ಕಲ್ಲಿದ್ದಲಿನ ಸಂಗ್ರಹ, ಪ್ರತಿನಿತ್ಯ ಕಲ್ಲಿದ್ದಲಿಗೆ ಇರುವ ಬೇಡಿಕೆ, ಪ್ರತಿದಿನ ವಿದ್ಯುತ್ಗೆ ಇರುವ ಬೇಡಿಕೆ ಬಗ್ಗೆ ಅವರು ಇಬ್ಬರೂ ಸಚಿವರಿಂದ ಮಾಹಿತಿ ಪಡೆದಿದ್ದಾರೆ.</p>.<p>ಕಲ್ಲಿದ್ದಲಿನ ಉತ್ಪಾದನೆಯನ್ನು ಶೀಘ್ರವೇ ಹೆಚ್ಚಿಸಿ ಎಂದು ಶಾ ಅವರು ಕಲ್ಲಿದ್ದಲು ಸಚಿವರಿಗೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ಜಲವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ, ಆ ಮೂಲಕ ಕಲ್ಲಿದ್ದಲಿನ ಮೇಲಿನ ಅವಲಂಬನೆಯನ್ನು ತಗ್ಗಿಸಿ ಎಂದು ಇಂಧನ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>