ಎನ್ಆರ್ಸಿ ಪಟ್ಟಿಯಲ್ಲಿ ದೊಡ್ಡ ಸಂಖ್ಯೆಯ ಬೆಂಗಾಲಿ ಹಿಂದೂಗಳ ಹೆಸರು ಬಿಟ್ಟು ಹೋಗಿರುವ ಬಗ್ಗೆ ಹಲವು ಬಿಜೆಪಿ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು. ದೇಶದ ನಾಗರಿಕರು ಎಂಬುದನ್ನು ಸಾಬೀತು ಪಡಿಸಲು ಸೂಕ್ತ ದಾಖಲೆಗಳನ್ನು ನೀಡಿರದ ವ್ಯಕ್ತಿಯನ್ನು ತಕ್ಷಣವೇ ಅಕ್ರಮ ವಲಸಿಗನೆಂದು ಸರ್ಕಾರ ಘೋಷಿಸುವುದಿಲ್ಲ. ಈ ಬಗ್ಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.