ನೆಹರೂ ಹೊಣೆಯಲ್ಲ: ಫಾರೂಕ್ ಅಬ್ದುಲ್ಲಾ
‘ಜಮ್ಮು–ಕಾಶ್ಮೀರ ಸಮಸ್ಯೆಗೆ ನೆಹರೂ ಕಾರಣರಲ್ಲ. ವಿಷಯ ಹೀಗಿದ್ದರೂ, ನೆಹರೂ ವಿರುದ್ಧ ಅವರಿಗೆ ಇಷ್ಟೊಂದು ದ್ವೇಷ ಯಾಕೆ ಎಂಬುದು ಅರ್ಥವಾಗುತ್ತಿಲ್ಲ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.
ನೆಹರೂ ಕುರಿತು ರಾಜ್ಯಸಭೆಯಲ್ಲಿ ಅಮಿತ್ ಶಾ ನೀಡಿರುವ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
‘370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ನೆಹರೂ ಅಮೆರಿಕದಲ್ಲಿದ್ದರು. ಈ ನಿರ್ಧಾರ ಕೈಗೊಂಡ ಸಭೆಯಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್, ಶ್ಯಾಮಪ್ರಸಾದ್ ಮುಖರ್ಜಿ ಪಾಲ್ಗೊಂಡಿದ್ದರು’ ಎಂದು ಅಬ್ದುಲ್ಲಾ ಹೇಳಿದರು.