<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಪ್ರಧಾನಿಯವರ ನಿವಾಸಕ್ಕೆ ತೆರಳಿದ ಅಮಿತ್ ಶಾ ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ. ಜತೆಗೆ, ಜಮ್ಮು–ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿ ಅಲ್ಲಿನ ಆಡಳಿತ ಹಾಗೂ ಕೇಂದ್ರ ಗೃಹ ಸಚಿವಾಲಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/terrorist-attack-on-migrant-workers-in-kashmir-seems-death-is-chasing-me-migrant-workers-in-kashmir-876472.html" target="_blank">ಸಾವು ಹಿಂಬಾಲಿಸುತ್ತಿರುವಂತಿದೆ: ಕಾಶ್ಮೀರದ ವಲಸೆ ಕಾರ್ಮಿಕರ ಆತಂಕ</a></p>.<p>ಉಗ್ರರು ನಾಗರಿಕರನ್ನು ಹತ್ಯೆ ಮಾಡಿದ ಬಳಿಕ ಕಾಶ್ಮೀರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿರುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಆಂತರಿಕ ಭದ್ರತೆಗೆ ಸಂಬಂಧಿಸಿದ ಇತರ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ. ವಲಸಿಗರು ಭೀತಿಯಿಂದ ಕಾಶ್ಮೀರ ತೊರೆಯುತ್ತಿದ್ದಾರೆ ಎಂದೂ ಗೃಹ ಸಚಿವರು ಪ್ರಧಾನಿಗೆ ತಿಳಿಸಿದ್ದಾರೆ.</p>.<p>ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.</p>.<p><strong>ಕಾಶ್ಮಿರಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ</strong></p>.<p>ಅಮಿತ್ ಶಾ ಅವರು ಅ.23ರಿಂದ 25ರ ವರೆಗೆ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಕಣಿವೆ ರಾಜ್ಯದಲ್ಲಿನ ಭದ್ರತಾ ಸ್ಥಿತಿಗತಿಗೆ ಸಂಬಂಧಿಸಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಓದಿ:</strong><a href="https://www.prajavani.net/india-news/lashkar-affiliated-terror-group-warns-migrants-in-jammu-and-kashmir-claims-responsibility-for-876431.html" itemprop="url">ಕಾಶ್ಮೀರ: ಕಾರ್ಮಿಕರ ಹತ್ಯೆಯ ಹೊಣೆ ಹೊತ್ತು ವಲಸಿಗರಿಗೆ ಎಚ್ಚರಿಕೆ ನೀಡಿದ ಉಗ್ರರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಪ್ರಧಾನಿಯವರ ನಿವಾಸಕ್ಕೆ ತೆರಳಿದ ಅಮಿತ್ ಶಾ ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ. ಜತೆಗೆ, ಜಮ್ಮು–ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿ ಅಲ್ಲಿನ ಆಡಳಿತ ಹಾಗೂ ಕೇಂದ್ರ ಗೃಹ ಸಚಿವಾಲಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/terrorist-attack-on-migrant-workers-in-kashmir-seems-death-is-chasing-me-migrant-workers-in-kashmir-876472.html" target="_blank">ಸಾವು ಹಿಂಬಾಲಿಸುತ್ತಿರುವಂತಿದೆ: ಕಾಶ್ಮೀರದ ವಲಸೆ ಕಾರ್ಮಿಕರ ಆತಂಕ</a></p>.<p>ಉಗ್ರರು ನಾಗರಿಕರನ್ನು ಹತ್ಯೆ ಮಾಡಿದ ಬಳಿಕ ಕಾಶ್ಮೀರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿರುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಆಂತರಿಕ ಭದ್ರತೆಗೆ ಸಂಬಂಧಿಸಿದ ಇತರ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ. ವಲಸಿಗರು ಭೀತಿಯಿಂದ ಕಾಶ್ಮೀರ ತೊರೆಯುತ್ತಿದ್ದಾರೆ ಎಂದೂ ಗೃಹ ಸಚಿವರು ಪ್ರಧಾನಿಗೆ ತಿಳಿಸಿದ್ದಾರೆ.</p>.<p>ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.</p>.<p><strong>ಕಾಶ್ಮಿರಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ</strong></p>.<p>ಅಮಿತ್ ಶಾ ಅವರು ಅ.23ರಿಂದ 25ರ ವರೆಗೆ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಕಣಿವೆ ರಾಜ್ಯದಲ್ಲಿನ ಭದ್ರತಾ ಸ್ಥಿತಿಗತಿಗೆ ಸಂಬಂಧಿಸಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಓದಿ:</strong><a href="https://www.prajavani.net/india-news/lashkar-affiliated-terror-group-warns-migrants-in-jammu-and-kashmir-claims-responsibility-for-876431.html" itemprop="url">ಕಾಶ್ಮೀರ: ಕಾರ್ಮಿಕರ ಹತ್ಯೆಯ ಹೊಣೆ ಹೊತ್ತು ವಲಸಿಗರಿಗೆ ಎಚ್ಚರಿಕೆ ನೀಡಿದ ಉಗ್ರರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>