<p><strong>ಪಟ್ನಾ</strong>: ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದ್ದು ಇದರ ಭಾಗವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶುಕ್ರವಾರ) ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಭೇಟಿ ವೇಳೆ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ಅವರು ಚುನಾವಣಾ ಪ್ರಚಾರ ತಂತ್ರ ಹಾಗೂ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.</p><p>ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಗುರುವಾರ ಸಂಜೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. </p>.ಹುಲಿ ದಾಳಿ | ‘ಬದುಕು ಕಳೆದುಕೊಂಡವರೆಂದು’ ಪರಿಗಣಿಸಿ ಪೂರ್ಣ ಪರಿಹಾರ: ಸಿಎಂ ತಾಕೀತು.ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಕಾಂತಾರ ಆರ್ಭಟ: ಎರಡನೇ ವಾರ ಗಳಿಸಿದ್ದೆಷ್ಟು?. <p>ಈ ಬಾರಿ ಬಿಜೆಪಿ ಹಾಗೂ ಜೆಡಿ(ಯು) ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಹಾಗೆ ಮಾಡಲು ನಾನು ಯಾರು? ಒಂದು ಕಾರ್ಯವಿಧಾನವಿದೆ. ಶಾಸಕಾಂಗ ಸದಸ್ಯರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿ ಚುನಾವಣೆಯಲ್ಲಿ ನಿತೀಶ್ ನೇತೃತ್ವದಲ್ಲಿ ಎನ್ಡಿಎ ಸ್ಪರ್ಧಿಸುತ್ತಿದೆ ಎಂದು ಹೇಳಿದ್ದೇವೆ, ಆ ಬಗ್ಗೆ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಆಯ್ಕೆಯಲ್ಲಿ ಮಹಾರಾಷ್ಟ್ರದಲ್ಲಿ ಆದ ರೀತಿ ಬಿಹಾರದಲ್ಲೂ ಆಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಸುದ್ದಿ ವಾಹಿನಿಗಳಿಗೆ ಟಿಆರ್ಪಿ ಸಿಗುವ ರೀತಿಯಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ಗೆ ಚುನಾವಣಾ ಆಯೋಗ.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ. <p>ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಆರ್ಜೆಡಿ ವಕ್ತಾರ ಚಿತ್ತರಂಜನ್ ಗಗನ್, ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಅವಧಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಅಮಿತ್ ಶಾ ಅನುಮಾನ ವ್ಯಕ್ತಪಡಿಸಿದ್ದಾರೆ ಎಂಬುವುದು ಸ್ಪಷ್ಟವಾಗಿದೆ. ನಿತೀಶ್ ಅವರನ್ನು ಮಣಿಸಲು ಬಿಜೆಪಿ ಯೋಜಿಸುತ್ತಿದೆ ಎಂದೂ ಆರೋಪಿಸಿದ್ದಾರೆ.</p><p>243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p><p>ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.</p>.Photos | ದೀಪಾವಳಿಯಲ್ಲಿ ದೀಪಗಳ ಬೆಳಕು: ಕುಂಬಾರನಿಂದ ಮಾರುಕಟ್ಟೆವರೆಗೆ ಹಣತೆಯ ಪಯಣ.OTT Release: ಏಳುಮಲೆ, ಕಿಷ್ಕಿಂಧಾಪುರಿ ಸೇರಿದಂತೆ ಪ್ರಮುಖ ಸಿನಿಮಾಗಳ ಬಿಡುಗಡೆ.ಛತ್ತೀಸಗಢ: ಪೊಲೀಸರು, ಭದ್ರತಾ ಪಡೆಯ ಸಮ್ಮುಖದಲ್ಲಿ 210 ನಕ್ಸಲರು ಶರಣು.Ranji Trophy: ಶ್ರೇಯಸ್ 8 ವಿಕೆಟ್ ಉರುಳಿಸಿದರೂ ಮುನ್ನಡೆ ಬಿಟ್ಟುಕೊಡದ ಸೌರಾಷ್ಟ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದ್ದು ಇದರ ಭಾಗವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶುಕ್ರವಾರ) ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಭೇಟಿ ವೇಳೆ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ಅವರು ಚುನಾವಣಾ ಪ್ರಚಾರ ತಂತ್ರ ಹಾಗೂ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.</p><p>ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಗುರುವಾರ ಸಂಜೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. </p>.ಹುಲಿ ದಾಳಿ | ‘ಬದುಕು ಕಳೆದುಕೊಂಡವರೆಂದು’ ಪರಿಗಣಿಸಿ ಪೂರ್ಣ ಪರಿಹಾರ: ಸಿಎಂ ತಾಕೀತು.ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಕಾಂತಾರ ಆರ್ಭಟ: ಎರಡನೇ ವಾರ ಗಳಿಸಿದ್ದೆಷ್ಟು?. <p>ಈ ಬಾರಿ ಬಿಜೆಪಿ ಹಾಗೂ ಜೆಡಿ(ಯು) ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಹಾಗೆ ಮಾಡಲು ನಾನು ಯಾರು? ಒಂದು ಕಾರ್ಯವಿಧಾನವಿದೆ. ಶಾಸಕಾಂಗ ಸದಸ್ಯರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿ ಚುನಾವಣೆಯಲ್ಲಿ ನಿತೀಶ್ ನೇತೃತ್ವದಲ್ಲಿ ಎನ್ಡಿಎ ಸ್ಪರ್ಧಿಸುತ್ತಿದೆ ಎಂದು ಹೇಳಿದ್ದೇವೆ, ಆ ಬಗ್ಗೆ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಆಯ್ಕೆಯಲ್ಲಿ ಮಹಾರಾಷ್ಟ್ರದಲ್ಲಿ ಆದ ರೀತಿ ಬಿಹಾರದಲ್ಲೂ ಆಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಸುದ್ದಿ ವಾಹಿನಿಗಳಿಗೆ ಟಿಆರ್ಪಿ ಸಿಗುವ ರೀತಿಯಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ಗೆ ಚುನಾವಣಾ ಆಯೋಗ.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ. <p>ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಆರ್ಜೆಡಿ ವಕ್ತಾರ ಚಿತ್ತರಂಜನ್ ಗಗನ್, ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಅವಧಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಅಮಿತ್ ಶಾ ಅನುಮಾನ ವ್ಯಕ್ತಪಡಿಸಿದ್ದಾರೆ ಎಂಬುವುದು ಸ್ಪಷ್ಟವಾಗಿದೆ. ನಿತೀಶ್ ಅವರನ್ನು ಮಣಿಸಲು ಬಿಜೆಪಿ ಯೋಜಿಸುತ್ತಿದೆ ಎಂದೂ ಆರೋಪಿಸಿದ್ದಾರೆ.</p><p>243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p><p>ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.</p>.Photos | ದೀಪಾವಳಿಯಲ್ಲಿ ದೀಪಗಳ ಬೆಳಕು: ಕುಂಬಾರನಿಂದ ಮಾರುಕಟ್ಟೆವರೆಗೆ ಹಣತೆಯ ಪಯಣ.OTT Release: ಏಳುಮಲೆ, ಕಿಷ್ಕಿಂಧಾಪುರಿ ಸೇರಿದಂತೆ ಪ್ರಮುಖ ಸಿನಿಮಾಗಳ ಬಿಡುಗಡೆ.ಛತ್ತೀಸಗಢ: ಪೊಲೀಸರು, ಭದ್ರತಾ ಪಡೆಯ ಸಮ್ಮುಖದಲ್ಲಿ 210 ನಕ್ಸಲರು ಶರಣು.Ranji Trophy: ಶ್ರೇಯಸ್ 8 ವಿಕೆಟ್ ಉರುಳಿಸಿದರೂ ಮುನ್ನಡೆ ಬಿಟ್ಟುಕೊಡದ ಸೌರಾಷ್ಟ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>