<p><strong>ನವದೆಹಲಿ:</strong> ‘ಭಾರತವು ಭಯೋತ್ಪಾದನೆಗೆ ಮಣಿಯುವುದಿಲ್ಲ, ಪಹಲ್ಗಾಮ್ನಲ್ಲಿ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದ ಉಗ್ರರನ್ನು ಬಿಡುವುದೂ ಇಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದ್ದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ್ದ ಗೃಹ ಸಚಿವರು, ಸೇನೆ ಮತ್ತು ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳಿಂದ ವಸ್ತುಸ್ಥಿತಿಯ ಮಾಹಿತಿ ಪಡೆದರು.</p>.<p>ಮಂಗಳವಾರ ದಾಳಿಯಲ್ಲಿ ಅಸುನೀಗಿದವರ ಮೃತದೇಹಗಳಿಗೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದ ಅವರು, ‘ಎಕ್ಸ್’ ಜಾಲತಾಣದ ಮೂಲಕ, ‘ಭಾರತ ಭಯೋತ್ಪಾದನೆ ಕೃತ್ಯಗಳಿಗೆ ಮಣಿಯುವುದಿಲ್ಲ’ ಎಂದು ಸ್ಪಷ್ಟ ನಿಲುವು ಪ್ರಕಟಿಸಿದರು. </p>.<p>ದಕ್ಷಿಣ ಕಾಶ್ಮೀರದ ಪ್ರವಾಸಿತಾಣ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದ ಬಂದೂಕುಧಾರಿ ಉಗ್ರರು, ಪುರುಷ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು. </p>.<p>ಉಗ್ರರು ದಾಳಿ ನಡೆಸಿದ್ದ ಸ್ಥಳ, ಬೈಸರನ್ ಕಣಿವೆ ಪ್ರದೇಶದಕ್ಕೆ ಬೆಳಿಗ್ಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಶಾ ಅವರಿಗೆ ಸೇನೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಕೃತ್ಯ, ನಂತರದ ಪರಿಸ್ಥಿತಿ ಕುರಿತು ವಿವರಣೆ ನೀಡಿದರು.</p>.<p>ಉಗ್ರರು ಪ್ರವಾಸಿ ತಾಣ ತಲುಪಲು ಬಳಸಿರಬಹುದಾದ ಸಂಭವನೀಯ ಮಾರ್ಗ ಕುರಿತು ವಿವರಿಸಿದರು. ಗೃಹ ಸಚಿವರು ಹೆಲಿಕಾಪ್ಟರ್ನಲ್ಲಿ ಸ್ಥಳದ ವೈಮಾನಿಕ ಸಮೀಕ್ಷೆಯನ್ನು ಮಾಡಿದರು. </p>.<p>ಬಳಿಕ ಅನಂತನಾಗ್ ಜಿಲ್ಲೆಯ ಸರ್ಕಾರಿ ವೈದ್ಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.</p>.<p>ಗೃಹ ಸಚಿವರ ಜೊತೆಗೆ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದ ಡಿಜಿ ನಳಿನ್ ಪ್ರಭಾತ್, ಸೇನೆಯ ಹಿರಿಯ ಅಧಿಕಾರಿ ಲೆಫ್ಟಿನಂಟ್ ಜನರಲ್ ಪ್ರಶಾಂತ್ ಶ್ರೀವಾತ್ಸವ ಅವರು ಇದ್ದರು. ಭದ್ರತಾ ವ್ಯವಸ್ಥೆ ಕುರಿತ ಪರಿಶೀಲನಾ ಸಭೆಯಲ್ಲಿ ಈ ಎಲ್ಲರೂ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತವು ಭಯೋತ್ಪಾದನೆಗೆ ಮಣಿಯುವುದಿಲ್ಲ, ಪಹಲ್ಗಾಮ್ನಲ್ಲಿ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದ ಉಗ್ರರನ್ನು ಬಿಡುವುದೂ ಇಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದ್ದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ್ದ ಗೃಹ ಸಚಿವರು, ಸೇನೆ ಮತ್ತು ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳಿಂದ ವಸ್ತುಸ್ಥಿತಿಯ ಮಾಹಿತಿ ಪಡೆದರು.</p>.<p>ಮಂಗಳವಾರ ದಾಳಿಯಲ್ಲಿ ಅಸುನೀಗಿದವರ ಮೃತದೇಹಗಳಿಗೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದ ಅವರು, ‘ಎಕ್ಸ್’ ಜಾಲತಾಣದ ಮೂಲಕ, ‘ಭಾರತ ಭಯೋತ್ಪಾದನೆ ಕೃತ್ಯಗಳಿಗೆ ಮಣಿಯುವುದಿಲ್ಲ’ ಎಂದು ಸ್ಪಷ್ಟ ನಿಲುವು ಪ್ರಕಟಿಸಿದರು. </p>.<p>ದಕ್ಷಿಣ ಕಾಶ್ಮೀರದ ಪ್ರವಾಸಿತಾಣ ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದ ಬಂದೂಕುಧಾರಿ ಉಗ್ರರು, ಪುರುಷ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು. </p>.<p>ಉಗ್ರರು ದಾಳಿ ನಡೆಸಿದ್ದ ಸ್ಥಳ, ಬೈಸರನ್ ಕಣಿವೆ ಪ್ರದೇಶದಕ್ಕೆ ಬೆಳಿಗ್ಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಶಾ ಅವರಿಗೆ ಸೇನೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಕೃತ್ಯ, ನಂತರದ ಪರಿಸ್ಥಿತಿ ಕುರಿತು ವಿವರಣೆ ನೀಡಿದರು.</p>.<p>ಉಗ್ರರು ಪ್ರವಾಸಿ ತಾಣ ತಲುಪಲು ಬಳಸಿರಬಹುದಾದ ಸಂಭವನೀಯ ಮಾರ್ಗ ಕುರಿತು ವಿವರಿಸಿದರು. ಗೃಹ ಸಚಿವರು ಹೆಲಿಕಾಪ್ಟರ್ನಲ್ಲಿ ಸ್ಥಳದ ವೈಮಾನಿಕ ಸಮೀಕ್ಷೆಯನ್ನು ಮಾಡಿದರು. </p>.<p>ಬಳಿಕ ಅನಂತನಾಗ್ ಜಿಲ್ಲೆಯ ಸರ್ಕಾರಿ ವೈದ್ಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.</p>.<p>ಗೃಹ ಸಚಿವರ ಜೊತೆಗೆ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದ ಡಿಜಿ ನಳಿನ್ ಪ್ರಭಾತ್, ಸೇನೆಯ ಹಿರಿಯ ಅಧಿಕಾರಿ ಲೆಫ್ಟಿನಂಟ್ ಜನರಲ್ ಪ್ರಶಾಂತ್ ಶ್ರೀವಾತ್ಸವ ಅವರು ಇದ್ದರು. ಭದ್ರತಾ ವ್ಯವಸ್ಥೆ ಕುರಿತ ಪರಿಶೀಲನಾ ಸಭೆಯಲ್ಲಿ ಈ ಎಲ್ಲರೂ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>